ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು 29:1

Notes

No Verse Added

ಙ್ಞಾನೋಕ್ತಿಗಳು 29:1

1
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
2
ನೀತಿವಂತರು ಅಧಿಕಾರದಲ್ಲಿ ದ್ದಾಗ ಜನರು ಹರ್ಷಿಸುತ್ತಾರೆ; ದುಷ್ಟನು ಆಳಿದರೆ ಜನರು ಶೋಕಿಸುತ್ತಾರೆ.
3
ಜ್ಞಾನವನ್ನು ಪ್ರೀತಿಸುವವನು ತನ್ನ ತಂದೆಯನ್ನು ಹರ್ಷಗೊಳಿಸುತ್ತಾನೆ; ವೇಶ್ಯೆಯ ರೊಂದಿಗೆ ಸಹವಾಸ ಮಾಡುವವನು ತನ್ನ ಆಸ್ತಿಯನ್ನು ವೆಚ್ಚಮಾಡುತ್ತಾನೆ.
4
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
5
ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
6
ಕೆಟ್ಟವನ ದೋಷದಲ್ಲಿ ಉರ್ಲು ಇದೆ; ನೀತಿವಂತನು ಹಾಡಿ ಹರ್ಷಿಸುತ್ತಾನೆ.
7
ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
8
ಪರಿಹಾಸ್ಯಗಾರರು ಪಟ್ಟಣಕ್ಕೆ ಉರ್ಲನ್ನು ಒಡ್ಡು ತ್ತಾರೆ; ಜ್ಞಾನಿಗಳು ಕೋಪವನ್ನು ತಿರುಗಿಸುವರು.
9
ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
10
ಕೊಲೆಪಾತಕರು ನೀತಿವಂತರನ್ನು ದ್ವೇಷಿಸು ತ್ತಾರೆ; ಯಥಾರ್ಥವಂತರು ಅವನ ಪ್ರಾಣವನ್ನು ಹುಡು ಕುತ್ತಾರೆ.
11
ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
12
ಸುಳ್ಳಿಗೆ ಕಿವಿಗೊಡುವ ಅಧಿಕಾರಿಗೆ ಕಿವಿಗೊಟ್ಟರೆ ಅವನ ಸೇವಕರೆಲ್ಲರೂ ದುಷ್ಟರೇ.
13
ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
14
ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.
15
ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.
16
ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.
17
ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
18
ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
19
ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
20
ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
21
ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.
22
ಕೋಪಿಷ್ಠನು ಜಗಳ ವನ್ನೆಬ್ಬಿಸುತ್ತಾನೆ; ರೋಷಗೊಂಡವನು ದೋಷದಲ್ಲಿ ತುಂಬಿರುತ್ತಾನೆ.
23
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
24
ಕಳ್ಳರೊಂದಿಗೆ ಪಾಲು ಗಾರನು ತನ್ನನ್ನು ತಾನೇ ಹಗೆಮಾಡುತ್ತಾನೆ; ಅವನು ಶಾಪವನ್ನು ಕೇಳಿತಿಳಿಸುವದಿಲ್ಲ.
25
ಮನುಷ್ಯನ ಭಯವು ಉರುಲನ್ನು ತರುತ್ತದೆ; ಕರ್ತನಲ್ಲಿ ಭರವಸ ವಿಡುವವನು ಕ್ಷೇಮದಿಂದಿರುವನು.
26
ಅನೇಕರು ಅಧಿ ಪತಿಯ ದಯೆಯನ್ನು ಹುಡುಕುತ್ತಾರೆ; ಕರ್ತನಿಂದಲೇ ಪ್ರತಿಯೊಬ್ಬನ ನ್ಯಾಯತೀರ್ಪು ಬರುತ್ತದೆ.
27
ಅನೀತಿ ವಂತನು ನೀತಿವಂತರಿಗೆ ಅಸಹ್ಯ; ತನ್ನ ಮಾರ್ಗದಲ್ಲಿ ಯಥಾರ್ಥವಾಗಿರುವವನು ದುಷ್ಟರಿಗೆ ಅಸಹ್ಯ.
×

Alert

×

kannada Letters Keypad References