ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಚೆಫನ್ಯ

Notes

No Verse Added

ಚೆಫನ್ಯ ಅಧ್ಯಾಯ 3

1. ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ! 2. ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ. 3. ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ. 4. ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ. 5. ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು. 6. ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ. 7. ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು. 8. ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು. 9. ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು. 10. ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು. 11. ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ. 12. ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು. 13. ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ. 14. ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. 15. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. 16. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. 17. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು. 18. ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ. 19. ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ. 20. ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
1. ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ! .::. 2. ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ. .::. 3. ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ. .::. 4. ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ. .::. 5. ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು. .::. 6. ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ. .::. 7. ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು. .::. 8. ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು. .::. 9. ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು. .::. 10. ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು. .::. 11. ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ. .::. 12. ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು. .::. 13. ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ. .::. 14. ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. .::. 15. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. .::. 16. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. .::. 17. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು. .::. 18. ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ. .::. 19. ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ. .::. 20. ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ. .::.
  • ಚೆಫನ್ಯ ಅಧ್ಯಾಯ 1  
  • ಚೆಫನ್ಯ ಅಧ್ಯಾಯ 2  
  • ಚೆಫನ್ಯ ಅಧ್ಯಾಯ 3  
×

Alert

×

kannada Letters Keypad References