1. ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ ಏನಾಯಿ ತಂದರೆ, ಅವನೂ ಅವನ ಸಂಗಡ ಸಮಸ್ತ ಇಸ್ರಾ ಯೇಲ್ಯರೂ ಕರ್ತನ ನ್ಯಾಯಪ್ರಮಾಣವನ್ನು ಬಿಟ್ಟು ಬಿಟ್ಟರು.
|
2. ರೆಹಬ್ಬಾಮನು ಅರಸನಾದ ಐದನೇ ವರುಷ ದಲ್ಲಿ ಏನಾಯಿತಂದರೆ, ಅವರು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದ್ದರಿಂದ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಬಂದನು.
|
3. ಅವನ ಸಂಗಡ ಸಾವಿರದ ಇನ್ನೂರು ರಥಗಳೂ ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಐಗುಪ್ತದಿಂದ ಬಂದ ಲೂಬ್ಯರೂ ಸುಕ್ಕೀಯರೂ ಕೂಷ್ಯರೂ ಲೆಕ್ಕವಿಲ್ಲದಷ್ಟು ಇದ್ದರು.
|
5. ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.
|
7. ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
|
9. ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು.
|
10. ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
|
11. ಅರಸನು ಕರ್ತನ ಮನೆಯಲ್ಲಿ ಪ್ರವೇಶಿಸು ವಾಗ ಕಾವಲಿನವರು ಬಂದು ಅವುಗಳನ್ನು ತಕ್ಕೊಂಡು ಬಂದರು; ಕಾವಲಿನವರು ಚಾವಡಿಗೆ ಅವುಗಳನ್ನು ತಿರಿಗಿತಂದರು.
|
12. ಅವನು ತನ್ನನ್ನು ತಗ್ಗಿಸಿಕೊಂಡಾಗ ಕರ್ತನ ಕೋಪವು ಅವನನ್ನು ಬಿಟ್ಟು ತಿರುಗಿತು; ಆತನು ಪೂರ್ಣವಾಗಿ ನಾಶಮಾಡಲು ಮನಸ್ಸಿಲ್ಲದೆ ಇದ್ದನು; ಯೆಹೂದದಲ್ಲಿ ಕಾರ್ಯಗಳು ಚೆನ್ನಾಗಿ ನಡೆದವು.
|
13. ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
|
15. ರೆಹಬ್ಬಾಮನ ಕ್ರಿಯೆಗಳು ಮೊದಲನೆಯವು ಗಳೂ ಕಡೆಯವುಗಳೂ ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋನ ಪುಸ್ತಕದಲ್ಲಿಯೂ ಬರೆಯ ಲ್ಪಟ್ಟವಲ್ಲವೇ? ಇದಲ್ಲದೆ ರೆಹಬ್ಬಾಮನಿಗೂ ಯಾರೊ ಬ್ಬಾಮನಿಗೂ ಯಾವಾಗಲೂ ಯುದ್ಧಉಂಟಾಗಿತ್ತು.ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
|
16. ರೆಹಬ್ಬಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು; ಅವನ ಮಗ ನಾದ ಅಬೀಯನು ಅವನಿಗೆ ಬದಲಾಗಿ ಆಳಿದನು.
|