2. ಅವನ ತಾಯಿಯು ಬೇರ್ಷೆಬ ಊರಿನವಳಾದ ಚಿಬ್ಯಳು. ಆದರೆ ಯಾಜಕನಾದ ಯೆಹೋಯಾ ದಾವನು ಯೆಹೋವಾಷನಿಗೆ ಬೋಧಿಸಿದ ಎಲ್ಲಾ ದಿವಸಗಳಲ್ಲಿ ಅವನು ಕರ್ತನ ದೃಷ್ಟಿಯಲ್ಲಿ ಸರಿಯಾದ ದ್ದನ್ನು ಮಾಡಿದನು.
|
3. ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
|
4. ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
|
5. ಯಾಜಕರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಪರಿಚಯ ದವರಿಂದ ತಕ್ಕೊಂಡು ಆಲಯದಲ್ಲಿ ಕಂಡುಬರುವ ಒಡಕುಗಳನ್ನೆಲ್ಲಾ ದುರಸ್ತುಮಾಡಲಿ ಅಂದನು.
|
7. ಆಗ ಅರಸನಾದ ಯೆಹೋವಾಷನು ಯಾಜಕನಾದ ಯೆಹೋಯಾದಾ ವನನ್ನೂ ಯಾಜಕರನ್ನೂ ಕರೆದು ಅವರಿಗೆ--ನೀವು ಮನೆಯ ಒಡಕುಗಳನ್ನು ದುರಸ್ತುಮಾಡದೆ ಇರುವ ದೇನು? ಇನ್ನು ಮೇಲೆ ನೀವು ನಿಮ್ಮ ಪರಿಚಯದವ ರಿಂದ ಹಣವನ್ನು ತೆಗೆದುಕೊಳ್ಳದೆ ಮನೆಯ ಒಡಕು ಗಳಿಗೋಸ್ಕರ ಅದನ್ನು ಒಪ್ಪಿಸಿಕೊಡಿರಿ ಅಂದನು.
|
8. ಹಾಗೆಯೇ ಯಾಜಕರು ಜನರ ಕೈಯಿಂದ ಹಣವನ್ನು ತೆಗೆದುಕೊಳ್ಳದೆ ಇರುವದಕ್ಕೂ ಮನೆಯ ಒಡುಕುಗ ಳನ್ನು ದುರಸ್ತು ಮಾಡದೆ ಇರುವದಕ್ಕೂ ಸಮ್ಮತಿಸಿ ದರು.
|
9. ಆದರೆ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತಕ್ಕೊಂಡು ಅದರ ಮುಚ್ಚಳದಲ್ಲಿ ತೂತನ್ನು ಮಾಡಿ ಬಲಿಪೀಠದ ಬಳಿಯಲ್ಲಿ ಕರ್ತನ ಮನೆಯೊಳಗೆ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಲು ಕಾಯುವ ಯಾಜಕರು ಕರ್ತನ ಮನೆಗೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿ ಹಾಕಿದರು.
|
10. ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
|
11. ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
|
12. ಇದ ಲ್ಲದೆ ಕರ್ತನ ಮನೆಯ ಒಡಕುಗಳನ್ನು ದುರಸ್ತು ಮಾಡುವದಕ್ಕೆ ಮರವನ್ನೂ ಕೆತ್ತಿದಕಲ್ಲುಗಳನ್ನೂ ತೆಗೆದು ಕೊಳ್ಳುವದಕ್ಕೂ ಮನೆ ದುರಸ್ತು ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿ ಕೊಟ್ಟರು.
|
13. ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ
|
15. ಇದಲ್ಲದೆ ಅವರು ಕೆಲಸ ಮಾಡುವವರಿಗೆ ಕೊಡುವದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ ಅವರಿಂದ ಲೆಕ್ಕವನ್ನು ತೆಗೆದು ಕೊಳ್ಳಲಿಲ್ಲ.
|
16. ಅವರು ನಂಬಿಗಸ್ತರಾಗಿ ಮಾಡಿದರು. ಆದರೆ ಅಪರಾಧದ ಹಣವನ್ನೂ ಪಾಪಪರಿಹಾರದ ಹಣವನ್ನೂ ಕರ್ತನ ಮನೆಗೆ ತಕ್ಕೊಂಡು ಬರಲಿಲ್ಲ; ಅದು ಯಾಜಕರದಾಗಿತ್ತು.
|
17. ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
|
18. ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
|
20. ಆದರೆ ಅವನ ಸೇವಕರು ಎದ್ದು ಒಳಸಂಚುಮಾಡಿ ಸಿಲ್ಲಾಗೆ ಇಳಿದು ಹೋಗುವ ಮಾರ್ಗವಾದ ಮಿಲ್ಲೋವು ಎಂಬ ಮನೆಯಲ್ಲಿ ಯೆಹೋವಾಷನನ್ನು ಕೊಂದುಹಾಕಿದರು.ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
|
21. ಅವನ ಸೇವಕರಾದ ಶಿಮೆಯಾತನ ಮಗನಾದ ಯೊಜಾಕಾರನೂ, ಶೋಮೇರನ ಮಗನಾದ ಯೆಹೋ ಜಾಬಾದನೂ ಅವನನ್ನು ಹೊಡೆದದ್ದರಿಂದ ಅವನು ಸತ್ತುಹೋದನು. ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು; ಅವನ ಮಗನಾದ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
|