2. ಹೇಗಂದರೆ--ದಾವೀ ದನ ಸಿಂಹಾಸನದ ಮೇಲೆ ಕೂತುಕೊಳ್ಳುವ ಯೆಹೂದದ ಅರಸನೇ, ನೀನೂ ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಕರ್ತನ ವಾಕ್ಯವನ್ನು ಕೇಳಲಿ, ಕರ್ತನು ಹೇಳುವದೇನಂದರೆ--
|
3. ನ್ಯಾಯವನ್ನೂ ನೀತಿಯನ್ನೂ ನಡಿಸಿರಿ; ಸುಲಿಗೆಯಾದ ವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಪರದೇಶಸ್ಥನಿಗೆ ದಿಕ್ಕಿಲ್ಲದವನಿಗೆ ವಿಧವೆಗೆ ಉಪದ್ರವವ ನ್ನಾದರೂ ಬಲಾತ್ಕಾರವನ್ನಾದರೂ ಮಾಡಬೇಡಿರಿ; ಇಲ್ಲವೆ ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲ ಬೇಡಿರಿ.
|
4. ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
|
5. ನೀವು ಈ ವಾಕ್ಯಗಳನ್ನು ಕೇಳದೆಹೋದರೆ, ಈ ಮನೆ ಹಾಳಾಗುವದೆಂದು ನನ್ನ ಮೇಲೆ ಆಣೆ ಇಡುತ್ತೇನೆ ಎಂದು ಕರ್ತನು ಅನ್ನುತ್ತಾನೆ.
|
6. ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
|
7. ನಿನಗೆ ವಿರೋಧವಾಗಿ ತಮ್ಮತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡು ತ್ತೇನೆ; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
|
8. ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
|
9. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
|
10. ಸತ್ತವನಿಗಾಗಿ ಅಳಬೇಡಿರಿ; ಅವನಿಗಾಗಿ ಗೋಳಾ ಡಬೇಡಿರಿ; ಹೊರಟುಹೋದವನಿಗಾಗಿ ಬಹಳವಾಗಿ ಅಳಿರಿ. ಅವನು ತಿರುಗಿ ಬರುವದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವದೇ ಇಲ್ಲ.
|
11. ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ ಈ ಸ್ಥಳವನ್ನು ಬಿಟ್ಟು ಹೋದವನೂ ಆದ ಶಲ್ಲೂಮನನ್ನು ಕುರಿತು ಕರ್ತನು ಹೀಗೆ ಹೇಳು ತ್ತಾನೆ--ಅವನು ಇನ್ನು ಇಲ್ಲಿಗೆ ತಿರುಗಿ ಬರುವದೇ ಇಲ್ಲ.
|
13. ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
|
14. ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
|
15. ನೀನು ದೇವದಾರಿನಲ್ಲಿ ನಿನ್ನನ್ನು ಮುಚ್ಚಿ ಕೊಳ್ಳುವದರಿಂದ ದೊರೆತನ ಮಾಡುವಿಯೋ? ನಿನ್ನ ತಂದೆ ಉಂಡು, ಕುಡಿದು, ನ್ಯಾಯವನ್ನೂ ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾ ಗಲಿಲ್ಲವೋ?
|
16. ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ.
|
17. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
|
18. ಆದದ ರಿಂದ ಯೋಷೀಯನ ಮಗನಾದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೀಗೆ ಹೇಳುತ್ತಾನೆ--ಅವರು ಅವನನ್ನು ಕುರಿತು ಗೋಳಾಡಿ--ಹಾ, ನನ್ನ ಸಹೋದರನೇ, ಹಾ, ನನ್ನ ಸಹೋದರಿಯೇ ಎಂದು ಅನ್ನುವದಿಲ್ಲ; ಹಾ, ದೊರೆಯೇ, ಹಾ, ಅವನ ವೈಭವವೇ ಎಂದು ಅವನನ್ನು ಕುರಿತು ಗೋಳಾಡುವದಿಲ್ಲ.
|
19. ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
|
20. ಲೆಬನೋನಿಗೆ ಹೋಗಿ ಕೂಗು, ಬಾಶಾನಿನಲ್ಲಿ ನಿನ್ನ ಸ್ವರವನ್ನೆತ್ತು, ದಾರಿಗಳಲ್ಲಿ ಕೂಗು, ನಿನ್ನ ಪ್ರಿಯರು ನಾಶವಾಗಿದ್ದಾರೆ.
|
21. ನಿನ್ನ ಏಳಿಗೆಯಲ್ಲಿ ನಿನ್ನ ಸಂಗಡ ಮಾತನಾಡಿದೆನು; ಆದರೆ--ನಾನು ಕೇಳುವದಿಲ್ಲ ಎಂದು ನೀನು ಹೇಳಿದಿ; ನನ್ನ ಸ್ವರಕ್ಕೆ ಕಿವಿಗೊಡದಿರು ವದೇ ನಿನ್ನ ಯೌವನದ ರೀತಿಯಾಗಿದೆ.
|
22. ನಿನ್ನ ಕುರುಬರನ್ನೆಲ್ಲಾ ಗಾಳಿ ತಿಂದುಬಿಡುವದು; ನಿನ್ನ ಪ್ರಿಯರು ಸೆರೆಗೆ ಹೋಗುವರು; ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ ಅವಮಾನವೂ ಆಗುವದು.
|
23. ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
|
24. ಕರ್ತನು ಹೇಳುವದೇನಂದರೆ--ನನ್ನ ಜೀವ ದಾಣೆ, ಯೆಹೋಯಾಕೀಮನ ಮಗನಾದ ಯೆಹೂ ದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಯುಂಗರವಾಗಿದ್ದರೂ ನಿನ್ನನ್ನು ಅಲ್ಲಿಂದ ಕಿತ್ತುಹಾಕಿ
|
25. ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬೆಲಿನ ಅರಸ ನಾದ ನೆಬುಕದ್ನೆಚ್ಚರನ ಕೈಗೆ ಮತ್ತು ಕಸ್ದೀಯರ ಕೈಗೆ ಒಪ್ಪಿಸಿಬಿಡುತ್ತೇನೆ.
|
28. ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
|
30. ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
|