1. ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
|
2. ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
|
3. ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ.
|
5. ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.
|
7. ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
|
8. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.
|
10. ಈ ಲೋಕದಲ್ಲಿರುವ ಜಾರರು, ಲೋಭಿಗಳು, ಸುಲು ಕೊಳ್ಳುವವರು, ವಿಗ್ರಹಾರಾಧಕರು ಇವರನ್ನು ಬಿಟ್ಟು ಬಿಡಬೇಕೆಂದು ನನ್ನ ತಾತ್ವರ್ಯವಲ್ಲ; ಹಾಗೆ ಬಿಡ ಬೇಕಾದರೆ ನೀವು ಈ ಲೋಕವನ್ನೇ ಬಿಟ್ಟು ಹೋಗ ಬೇಕಾಗುವದು.
|
11. ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
|