1. ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
|
2. ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
|
3. ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.
|
4. ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು; ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ. ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು; ಇವೇ ಬಾಷಾನಿನಲ್ಲಿ ಓಗನ ರಾಜ್ಯವು.
|
5. ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆಬಾಗಲು ಅಗುಳಿಗಳಿಂದ ಭದ್ರವಾಗಿದ್ದವು; ಅವುಗಳಲ್ಲದೆ ಬೈಲು ಸೀಮೆಯ ಪಟ್ಟಣಗಳು ಬಹಳ ಇದ್ದವು.
|
6. ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
|
8. ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
|
10. ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,
|
11. ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
|
12. ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
|
13. ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.
|
14. ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
|
17. ಬೈಲನ್ನೂ ಯೊರ್ದನನ್ನೂ ಅದರ ಸೀಮೆಯನ್ನೂ ಕಿನ್ನೆರೆತ್ ಮೊದಲುಗೊಂಡು ಪೂರ್ವದಲ್ಲಿರುವ ಅಷ್ಡೋದ್ ಪಿಸ್ಗಾದ ಕೆಳಗಿರುವ ಉಪ್ಪಿನಸಮುದ್ರವಾದ ಬೈಲು ಸಮುದ್ರದ ವರೆಗೆ ಕೊಟ್ಟೆನು.
|
18. ಆ ಕಾಲದಲ್ಲಿ ನಾನು ನಿಮಗೆ ಆಜ್ಞಾಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ನಿಮಗೆ ಈ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ; ಯುದ್ಧಸ್ಥ ರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲ್ ಮಕ್ಕಳ ಮುಂದೆ ಆಯುಧ ಧರಿಸಿ ಕೊಂಡು ಹಾದುಹೋಗಬೇಕು.
|
20. ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
|
21. ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
|
24. ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
|
25. ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
|
26. ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
|
27. ಪಿಸ್ಗಾದ ತುದಿಗೆ ಏರಿ ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಕಣ್ಣುಗಳನ್ನೆತ್ತಿ ಅದನ್ನು ಕಣ್ಣಾರೆ ನೋಡು; ಆದರೆ ಈ ಯೊರ್ದನನ್ನು ನೀನು ದಾಟಿಹೋಗುವದಿಲ್ಲ.
|
28. ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.
|