2. ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು.
|
3. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
|
5. ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
|
6. ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
|
7. ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
|
8. ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
|
9. ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
|
12. ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
|
13. ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?
|