1. ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
|
5. ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
|
8. ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
|
9. ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
|
10. ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
|
11. ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
|
13. ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
|
14. ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
|
15. ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
|
16. ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
|
17. ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
|
18. ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
|
19. ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
|
20. ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
|
21. ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
|