1. ಇದಲ್ಲದೆ ಸಹೋದರರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನು ತಿಳಿಯಪಡಿ ಸುತ್ತೇನೆ; ನೀವು ಅದನ್ನು ಅಂಗೀಕರಿಸಿದಿರಿ ಮತ್ತು ಅದರಲ್ಲಿ ನಿಂತಿದ್ದೀರಿ.
|
2. ನಾನು ನಿಮಗೆ ಸಾರಿರುವದನ್ನು ನೀವು ಜ್ಞಾಪಕದಲ್ಲಿಟ್ಟುಕೊಂಡವರಾಗಿದ್ದು ನಿಮ್ಮ ನಂಬಿಕೆಯು ವ್ಯರ್ಥವಾಗಿರದಿದ್ದರೆ ಅದರಿಂದಲೂ ನೀವು ರಕ್ಷಣೆ ಹೊಂದಿದ್ದೀರಿ.
|
3. ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು.
|
6. ಇದಾದ ಮೇಲೆ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಆತನು ಕಾಣಿಸಿ ಕೊಂಡನು; ಇದರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ; ಆದರೆ ಕೆಲವರು ನಿದ್ರೆಹೋಗಿದ್ದಾರೆ.
|
9. ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
|
10. ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
|
12. ಕ್ರಿಸ್ತನು ಸತ್ತವರೊಳಗಿಂದ ಎದ್ದನೆಂದು ಸಾರೋಣ ವಾಗುತ್ತಿರುವಲ್ಲಿ ಸತ್ತವರಿಗೆ ಪುನರುತ್ಥಾನವೇ ಇಲ್ಲ ವೆಂದು ನಿಮ್ಮೊಳಗೆ ಕೆಲವರು ಹೇಳುವದು ಹೇಗೆ?
|
15. ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
|
17. ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
|
19. ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
|
23. ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
|
24. ಆಮೇಲೆ ಆತನು ಬೇರೆ ಎಲ್ಲಾ ದೊರೆತನವನ್ನೂ ಎಲ್ಲಾ ಅಧಿಕಾರವನ್ನೂ ಬಲವನ್ನೂ ನಿವೃತ್ತಿಮಾಡಿ ತಂದೆಯಾಗಿರುವ ದೇವರಿಗೆ ರಾಜ್ಯವನ್ನು ಒಪ್ಪಿಸಿ ಕೊಡುವಾಗ ಸಮಾಪ್ತಿ ಯಾಗುವದು.
|
27. ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದ್ದಾನೆ. ಸಮಸ್ತವೂ ಆತನಿಗೆ ಅಧೀನ ಮಾಡಲ್ಪಟ್ಟಿದೆ ಎಂದು ಹೇಳುವಾಗ ಸಮಸ್ತವನ್ನು ಅಧೀನ ಮಾಡಿದಾತನು ಅದರಲ್ಲಿ ಸೇರಲಿಲ್ಲವೆಂಬದು ಸ್ಪಷ್ಟವಾಗಿದೆ.
|
28. ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
|
29. ಸತ್ತವರು ಏಳುವದೇ ಇಲ್ಲವಾದರೆ ಸತ್ತವರಿ ಗೋಸ್ಕರ ಬಾಪ್ತಿಸ್ಮ ಮಾಡಿಸಿಕೊಳ್ಳುವವರು ಏನು ಮಾಡುವರು? ಹಾಗಿದ್ದರೆ ಸತ್ತವರಿಗೊಸ್ಕರ ಅವರು ಬಾಪ್ತಿಸ್ಮ ಮಾಡಿಸಿಕೊಳ್ಳುವದು ಯಾಕೆ?
|
31. ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
|
32. ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
|
34. ನೀತಿಗಾಗಿ ಎಚ್ಚರಗೊಳ್ಳಿರಿ, ಪಾಪಮಾಡಬೇಡಿರಿ; ಕೆಲವರಿಗೆ ದೇವರ ವಿಷಯವಾದ ಜ್ಞಾನವೇ ಇಲ್ಲ; ನಾನು ಇದನ್ನು ನಿಮಗೆ ನಾಚಿಕೆ ಪಡಿಸುವದಕ್ಕಾಗಿ ಹೇಳುತ್ತೇನೆ.
|
37. ಒಂದು ವೇಳೆ ಗೋಧಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.
|
39. ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯರ ಶರೀರ ಬೇರೆ, ಪಶುಗಳ ಶರೀರ ಬೇರೆ, ವಿಾನುಗಳದು ಬೇರೆ, ಪಕ್ಷಿಗಳದು ಬೇರೆ.
|
40. ಇದಲ್ಲದೆ ಆಕಾಶದ ದೇಹಗಳು ಮತ್ತು ಭೂಮಂಡಲದ ದೇಹಗಳು ಇವೆ;ಆದರೆ ಆಕಾಶದ ಮಹಿಮೆ ಒಂದು ವಿಧ ಮತ್ತು ಭೂಮಂಡಲದ ಮಹಿಮೆ ಮತ್ತೊಂದು ವಿಧ.
|
41. ಸೂರ್ಯನ ಮಹಿಮೆ ಒಂದು ವಿಧ, ಚಂದ್ರನ ಮಹಿಮೆ ಮತ್ತೊಂದು ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ ಮಹಿಮೆಯಲ್ಲಿ ಒಂದು ನಕ್ಷತ್ರಕ್ಕೂ ಇನ್ನೊಂದು ನಕ್ಷತ್ರಕ್ಕೂ ಹೆಚ್ಚು ಕಡಿಮೆಯುಂಟಷ್ಟೆ.
|
42. ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
|
43. ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎಬ್ಬಿಸಲ್ಪಡುತ್ತದೆ; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
|
44. ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎಬ್ಬಿಸಲ್ಪಡುತ್ತದೆ; ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.
|
49. ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾ ತನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.
|
50. ಸಹೋದರರೇ, ನಾನು ಹೇಳುವದೇನಂದರೆ-- ಮಾಂಸವು ರಕ್ತವು ದೇವರ ರಾಜ್ಯಕ್ಕೆ ಬಾಧ್ಯವಾಗ ಲಾರವು; ಇಲ್ಲವೆ ಲಯವಾಗುವದು ನಿರ್ಲಯತ್ವಕ್ಕೆ ಬಾಧ್ಯವಾಗುವದಿಲ್ಲ.
|
51. ಇಗೋ, ಮರ್ಮವಾಗಿದ್ದ ಒಂದು ಸಂಗತಿಯನ್ನು ನಿಮಗೆ ತಿಳಿಸುತ್ತೇನೆ-- ನಾವೆಲ್ಲರೂ ನಿದ್ರೆಹೋಗುವದಿಲ್ಲ, ಆದರೆ ನಾವೆ ಲ್ಲರೂ ಮಾರ್ಪಡುವೆವು.
|
52. ಕಡೇ ತುತೂರಿಯು ಧ್ವನಿಯಾಗುವಾಗ ನಾವು ಒಂದು ಕ್ಷಣದಲ್ಲೇ ರೆಪ್ಪೆಬಡಿಯುವಷ್ಟರೊಳಗಾಗಿ ಮಾರ್ಪಡುವೆವು. ತುತೂರಿಯು ಊದಲಾಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ಮಾರ್ಪಡುವೆವು.
|
53. ಲಯ ವಾಗುವಂಥದ್ದು (ಈ ದೇಹವು) ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವಂಥ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.
|
54. ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
|
58. ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
|