1. ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶದ ಜನಾಂಗಗಳನ್ನು ನಿನ್ನ ದೇವರಾದ ಕರ್ತನು ಕಡಿದುಬಿಟ್ಟ ತರುವಾಯ ನೀನು ಅವುಗಳನ್ನು ಸ್ವಾಧೀನಮಾಡಿಕೊಂಡು ಅವುಗಳ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಾಗ
|
2. ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
|
3. ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
|
4. ಬದುಕುವ ಹಾಗೆ ಅಲ್ಲಿಗೆ ಓಡಿಹೋಗತಕ್ಕ ಕೊಲೆ ಪಾತಕನ ವಿವರವೇನಂದರೆ -- ತಿಳಿಯದೆ ಇಲ್ಲವೆ ಪೂರ್ವಕಾಲದಲ್ಲಿ ಹಗೆಮಾಡದೆ ತನ್ನ ನೆರೆಯವನನ್ನು ಹೊಡೆದವನೇ.
|
5. ಹೇಗಂದರೆ--ಒಬ್ಬನು ತನ್ನ ನೆರೆಯ ವನ ಸಂಗಡ ಕಟ್ಟಿಗೆ ಕಡಿಯುವದಕ್ಕೆ ಅಡವಿಗೆ ಹೋಗ ಲಾಗಿ, ಕೊಡಲಿ ಹಿಡಿದ ಅವನ ಕೈ ಮರವನ್ನು ಕಡಿಯುವದಕ್ಕೆ ಚಾಚಿರುವಲ್ಲಿ ಆ ಕಬ್ಬಿಣವು ಕಾವನ್ನು ಬಿಟ್ಟು ಅವನ ನೆರೆಯವನು ಸಾಯುವಹಾಗೆ ತಗಲಿದರೆ,
|
6. ರಕ್ತ ವಿಚಾರಕನು ತನ್ನ ಹೃದಯದಲ್ಲಿ ಕೋಪ ಉರಿಯುತ್ತಿರುವಾಗ ಕೊಲೆಪಾತಕನನ್ನು ಹಿಂದಟ್ಟಿ, ಮಾರ್ಗ ದೂರವಾಗಿರುವ ಕಾರಣ ಅವನನ್ನು ಹಿಡಿದು ಪೂರ್ವಕಾಲದಲ್ಲಿ ಹಗೆಮಾಡದೆ ಇದ್ದದರಿಂದ ಮರ ಣಕ್ಕೆ ಪಾತ್ರನಾಗದ ಇವನನ್ನು ಕೊಂದುಹಾಕದ ಹಾಗೆ ಅವನು ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಬೇಕು.
|
8. ಇದಲ್ಲದೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀನು ಕಾಪಾಡಿ ಕೈಕೊಳ್ಳಬೇಕು. ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಎಂದೆಂದಿಗೂ ಆತನ ಮಾರ್ಗದಲ್ಲಿ ನಡೆಯಲಾಗಿ
|
9. ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ
|
10. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ನಿನ್ನ ದೇಶದಲ್ಲಿ ಅಪರಾಧವಿಲ್ಲದ ರಕ್ತವು ಚೆಲ್ಲಲ್ಪಟ್ಟದ್ದರಿಂದ ರಕ್ತಾಪ ರಾಧವು ನಿನ್ನ ಮೇಲೆ ಬಾರದ ಹಾಗೆ ನೀನು ಈ ಮೂರು ಪಟ್ಟಣಗಳಿಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.
|
11. ಆದರೆ ಒಬ್ಬನು ತನ್ನ ನೆರೆಯವನನ್ನು ಹಗೆಮಾಡಿ ಅವನಿಗಾಗಿ ಹೊಂಚಿಕೊಂಡು ಅವನಿಗೆ ವಿರೋಧ ವಾಗಿ ಎದ್ದು ಅವನನ್ನು ಸಾಯುವ ವರೆಗೂ ಹೊಡೆದು ಅವನು ಸತ್ತದ್ದರಿಂದ ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಹೋದರೆ
|
13. ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
|
14. ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
|
15. ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
|
17. ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಕರ್ತನ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.
|
18. ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ
|
19. ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
|
21. ನಿನ್ನ ಕಣ್ಣು ಕರುಣಿಸಬಾರದು; ಪ್ರಾಣಕ್ಕೆ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಕೊಡಬೇಕು.
|