2. ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಅತಿಕ್ರಮದ ಬಲಿಯನ್ನು ವಧಿಸಬೇಕು: ಅವನು ಅದರ ರಕ್ತವನ್ನು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸ ಬೇಕು.
|
4. ಬದಿಯ ಲ್ಲಿರುವ ಎರಡು ಮೂತ್ರಜನಕಾಂಗಗಳನ್ನೂ ಅವು ಗಳ ಮೇಲಿರುವ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದು ಕೊಂಡು ಅರ್ಪಿಸಬೇಕು.
|
5. ಆಗ ಯಾಜಕನು ಅವು ಗಳನ್ನು ಬೆಂಕಿಯಿಂದ ಕರ್ತನಿಗೆ ಸಮರ್ಪಿಸುವ ಯಜ್ಞ ವೇದಿಯ ಮೇಲೆ ಸುಡಬೇಕು. ಇದು ಅತಿಕ್ರಮದ ಬಲಿಯಾಗಿದೆ.
|
7. ಪಾಪದ ಬಲಿಯ ಹಾಗೆಯೇ ಅತಿಕ್ರಮದ ಬಲಿಯೂ ಆಗಿದೆ. ಅವುಗಳಿಗೆ ಇರುವದು ಒಂದೇ ನಿಯಮ; ಅವುಗಳಿಂದ ಪ್ರಾಯಶ್ಚಿತ್ತಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.
|
9. ಒಲೆಯಲ್ಲಿ ಬೇಯಿಸಿದ್ದೂ ಬಾಂಡ್ಲೆಯಲ್ಲಿಯೂ ಬೋಗುಣಿಯಲ್ಲಿಯೂ ತಯಾ ರಿಸಿದ ಎಲ್ಲಾ ಆಹಾರದ ಅರ್ಪಣೆಯೂ ಸಮರ್ಪಿಸಿದ ಯಾಜಕನದಾಗಿರಬೇಕು.
|
10. ಎಣ್ಣೆಯಿಂದ ಮಿಶ್ರಿತ ವಾದ ಮತ್ತು ಒಣಗಿದ ಪ್ರತಿಯೊಂದು ಆಹಾರ ಬಲಿಯನ್ನು ಆರೋನನ ಕುಮಾರರು ಸರಿಸಮವಾಗಿ ತೆಗೆದುಕೊಳ್ಳಬೇಕು.
|
12. ಅವನು ಉಪಕಾರಸ್ತುತಿಗಾಗಿ ಅರ್ಪಿಸುವದಾದರೆ, ಉಪಕಾರಸ್ತುತಿ ಬಲಿಯನ್ನು ಹುಳಿಯಿಲ್ಲದ ಎಣ್ಣೆ ಬೆರೆ ಸಿದ ರೊಟ್ಟಿಗಳೊಂದಿಗೆ ಹುಳಿಯಿಲ್ಲದ ಎಣ್ಣೆಹೊಯ್ದ ದೋಸೆಗಳೊಂದಿಗೂ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದರೊಟ್ಟಿಗಳೊಂದಿಗೂ ಸಮರ್ಪಿಸ ಬೇಕು.
|
13. ರೊಟ್ಟಿಗಳಲ್ಲದೆ ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಸಮರ್ಪಣೆಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸ ಬೇಕು.
|
14. ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
|
15. ಉಪಕಾರಸ್ತುತಿಗಾಗಿ ಅವನ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ಅರ್ಪಿ ಸಲ್ಪಟ್ಟ ದಿನವೇ ತಿನ್ನಬೇಕು; ಅವನು ಅದರಲ್ಲಿ ಬೆಳಗಿನ ವರೆಗೆ ಯಾವದನ್ನೂ ಉಳಿಸಬಾರದು.
|
16. ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಇಚ್ಛೆಯಾದ ಸಮರ್ಪಣೆ ಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ತಿನ್ನಬೇಕು; ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬೇಕು.
|
18. ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.
|
19. ಅಶುದ್ಧವಾದ ವಸ್ತುವನ್ನು ಮುಟ್ಟಿದ ಮಾಂಸವನ್ನು ತಿನ್ನಬಾರದು; ಅದು ಬೆಂಕಿಯಿಂದ ಸುಡಲ್ಪಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದನ್ನು ತಿನ್ನ ಬಹುದು.
|
20. ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
|
21. ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧತ್ವವನ್ನಾಗಲಿ ಯಾವುದೇ ಅಶುದ್ಧ ವಾದದ್ದನ್ನಾಗಲಿ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧ ವಸ್ತುವನ್ನಾಗಲಿ ಯಾವುದೇ ಅಶುದ್ಧ ಪ್ರಾಣಿ ಯನ್ನಾಗಲಿ ಮುಟ್ಟಿದರೂ ಮತ್ತು ಕರ್ತನಿಗೆ ಸಂಬಂಧಿ ಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೂ ಅವನು ತನ್ನ ಜನರಿಂದ ತೆಗೆದುಹಾಕಲ್ಪಡ ಬೇಕು ಅಂದನು.
|
23. ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೇಳ ಬೇಕಾದದ್ದೇನಂದರೆ--ನೀವು ಎತ್ತು ಕುರಿ ಆಡು ಇವು ಗಳ ಕೊಬ್ಬನ್ನು ತಿನ್ನಬಾರದು.
|
24. ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
|
25. ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.
|
26. ಇದಲ್ಲದೆ ನೀವು ಯಾವತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾ ಗಲಿ, ಪ್ರಾಣಿಯದಾಗಲಿ, ನಿಮ್ಮ ಯಾವ ನಿವಾಸಗಳ ಲ್ಲಿಯೂ ತಿನ್ನಬಾರದು.
|
29. ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ ಹೀಗೆ ಹೇಳು--ಕರ್ತನಿಗೆ ತನ್ನ ಯಜ್ಞದ ಸಮಾಧಾನ ಬಲಿಯನ್ನು ಅರ್ಪಿಸುವವನು ಯಜ್ಞದ ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಕರ್ತನಿಗೆ ತರಬೇಕು.
|
30. ಬೆಂಕಿಯಿಂದ ಮಾಡಿದ ಕರ್ತನ ಅರ್ಪಣೆ ಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಕರ್ತನ ಮುಂದೆ ಅಲ್ಲಾಡುವ ಸಮರ್ಪಣೆಗಾಗಿ ಎದೆಯು ಅಲ್ಲಾಡಿಸಲ್ಪಡುವಂತೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.
|
33. ಸಮಾ ಧಾನದ ಸಮರ್ಪಣೆಗಳ ರಕ್ತವನ್ನೂ ಕೊಬ್ಬನ್ನೂ ಸಮ ರ್ಪಿಸುವ ಆರೋನನ ಕುಮಾರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.
|
34. ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
|
35. ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.
|
36. ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
|
37. ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
|
38. ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.
|