2. ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
|
4. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಮನುಷ್ಯನು ರೊಟ್ಟಿಯಿಂದ ಮಾತ್ರವೇ ಅಲ್ಲ, ಆದರೆ ದೇವರ ಪ್ರತಿಯೊಂದು ಮಾತಿನಿಂದ ಜೀವಿಸುವನು ಎಂದು ಬರೆದದೆ ಅಂದನು.
|
5. ಬಳಿಕ ಸೈತಾನನು ಉನ್ನತವಾದ ಬೆಟ್ಟಕ್ಕೆ ಆತನನ್ನು ಕರಕೊಂಡುಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಆತನಿಗೆ ತೋರಿಸಿದನು.
|
6. ಸೈತಾನನು ಆತನಿಗೆ--ಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡುವೆನು; ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು.
|
8. ಯೇಸು ಅವನಿಗೆ ಪ್ರತ್ಯುತ್ತರವಾಗಿ--ಸೈತಾನನೇ, ನನ್ನ ಹಿಂದೆ ಹೋಗು; ಯಾಕಂದರೆ--ನೀನು ನಿನ್ನ ದೇವರಾದ ಕರ್ತನನ್ನು ಆರಾಧಿಸಿ ಆತನೊಬ್ಬನನ್ನೇ ಸೇವಿಸತಕ್ಕದ್ದು ಎಂದು ಬರೆದದೆ ಅಂದನು.
|
9. ಇದಲ್ಲದೆ ಅವನು ಆತನನ್ನು ಯೆರೂಸಲೇಮಿಗೆ ಕರತಂದು ದೇವಾಲಯ ಗೋಪುರದ ಮೇಲೆ ನಿಲ್ಲಿಸಿ ಆತನಿಗೆ--ನೀನು ದೇವಕುಮಾರನಾಗಿದ್ದರೆ ಇಲ್ಲಿಂದ ಕೆಳಗೆ ದುಮುಕು;
|
11. ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸ ದಂತೆ ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದನು.
|
12. ಅದಕ್ಕೆ ಯೇಸು ಪ್ರತ್ಯು ತ್ತರವಾಗಿ ಅವನಿಗೆ--ನೀನು ನಿನ್ನ ದೇವರಾದ ಕರ್ತನನ್ನು ಶೋಧಿಸಬಾರದೆಂದು ಹೇಳಲ್ಪಟ್ಟಿದೆ ಅಂದನು.
|
14. ತರುವಾಯ ಯೇಸು ಆತ್ಮನಿಂದ ಬಲಹೊಂದಿ ಗಲಿಲಾಯಕ್ಕೆ ಹಿಂದಿರುಗಿದನು. ಆತನ ಕೀರ್ತಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
|
16. ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಕ್ಕೆ ಹೋಗಿ ಓದುವದಕ್ಕಾಗಿ ಎದ್ದುನಿಂತನು.
|
18. ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
|
19. ಕರ್ತನ ಅಂಗೀಕೃತವಾದ ವರುಷವನ್ನು ಸಾರುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂದು ಬರೆದಿರುವದನ್ನು ಕಂಡು ಓದಿದನು.
|
20. ಆತನು ಆ ಪುಸ್ತಕವನ್ನು ಮುಚ್ಚಿ ತಿರಿಗಿ ಪರಿಚಾರಕನ ಕೈಗೆ ಕೊಟ್ಟು ಕೂತುಕೊಂಡನು. ಆಗ ಆ ಸಭಾ ಮಂದಿರದಲ್ಲಿದ್ದವ ರೆಲ್ಲರ ಕಣ್ಣುಗಳು ಆತನನ್ನೇ ದೃಷ್ಟಿಸಿದವು.
|
22. ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
|
23. ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.
|
25. ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
|
26. ಅವರಲ್ಲಿ ಯಾರ ಬಳಿಗೂ (ದೇವರು) ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೇ ಕಳುಹಿಸಿದನು.
|
27. ಪ್ರವಾದಿಯಾದ ಎಲೀಷನ ಕಾಲ ದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿ ದ್ದಾಗ್ಯೂ ಸಿರಿಯದವನಾದ ನಾಮಾನನ ಹೊರತು ಅವರಲ್ಲಿ ಒಬ್ಬನಾದರೂ ಶುದ್ಧನಾಗಲಿಲ್ಲ ಅಂದನು.
|
29. ಅವರು ಮೇಲಕ್ಕೆದ್ದು ಆತನನ್ನು ಪಟ್ಟಣದ ಹೊರಗೆ ದೂಡಿ ಕೊಂಡು ಹೋಗಿ ತಲೆ ಕೆಳಗೆ ಮಾಡಿ ದೊಬ್ಬಬೇಕೆಂದು ತಮ್ಮ ಪಟ್ಟಣವು ಕಟ್ಟಲ್ಪಟ್ಟಿದ್ದ ಬೆಟ್ಟದ ಕಡಿದಾದ ಸ್ಥಳಕ್ಕೆ ಆತನನ್ನು ನಡಿಸಿಕೊಂಡು ಹೋದರು.
|
34. ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
|
35. ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳಗಿಂದ ಹೊರಗೆ ಬಾ ಅಂದನು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ ಅವನನ್ನು ಬಾಧಿಸದೆ ಅವನೊಳಗಿಂದ ಹೊರಗೆ ಬಂತು.
|
36. ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
|
38. ತರುವಾಯ ಆತನು ಸಭಾಮಂದಿರದಿಂದ ಎದ್ದು ಸೀಮೋನನ ಮನೆಯಲ್ಲಿ ಪ್ರವೇಶಿಸಿದನು; ಅಲ್ಲಿ ಸೀಮೋನನ ಹೆಂಡತಿಯ ತಾಯಿಗೆ ಕಠಿಣ ಜ್ವರವಿದ್ದದ ರಿಂದ ಅವರು ಆಕೆಗೋಸ್ಕರ ಆತನನ್ನು ಬೇಡಿಕೊಂಡರು.
|
39. ಆಗ ಆತನು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟಿತು; ಕೂಡಲೆ ಆಕೆಯು ಎದ್ದು ಅವರನ್ನು ಉಪಚರಿಸಿದಳು.
|
40. ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
|
41. ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
|
42. ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು.
|
43. ಆದರೆ ಆತನು ಅವರಿಗೆ--ಬೇರೆ ಪಟ್ಟಣಗಳಿಗೂ ದೇವರ ರಾಜ್ಯವನ್ನು ನಾನು ಸಾರಲೇಬೇಕು; ಇದಕ್ಕಾಗಿಯೇ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
|