1. ಮತ್ತು ಆತನು ಜನಸಮೂಹಗಳನ್ನು ನೋಡಿದವನಾಗಿ ಪರ್ವತವನ್ನೇರಿದನು; ಅಲ್ಲಿ ಆತನು ಕೂತುಕೊಂಡಾಗ ಆತನ ಶಿಷ್ಯರು ಆತನ ಬಳಿಗೆ ಬಂದರು.
|
11. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
|
12. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
|
13. ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
|
15. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
|
16. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
|
17. ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು.
|
18. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
|
19. ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
|
20. ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
|
21. ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
|
22. ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
|
23. ಆದದರಿಂದ ನೀನು ನಿನ್ನ ಕಾಣಿಕೆಯನ್ನು ಯಜ್ಞವೇದಿಯ ಬಳಿಗೆ ತಂದಾಗ ನಿನಗೆ ವಿರೋಧ ವಾದದ್ದು ನಿನ್ನ ಸಹೋದರನಿಗೆ ಇದೆಯೆಂದು ನೆನಪಿಗೆ ಬಂದರೆ
|
24. ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
|
25. ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
|
26. ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
|
28. ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.
|
29. ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
|
30. ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
|
32. ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.
|
33. ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
|
34. ಆದರೆ ನಾನು ನಿಮಗೆ ಹೇಳುವದೇನಂದರೆ--ಎಷ್ಟು ಮಾತ್ರಕ್ಕೂ ಅಣೆಯನ್ನು ಇಡಬೇಡ. ಪರಲೋಕದ ಮೇಲೆ ಬೇಡ; ಯಾಕಂದರೆ ಅದು ದೇವರ ಸಿಂಹಾಸನವು.
|
35. ಭೂಮಿಯ ಮೇಲೆಯೂ ಬೇಡ; ಯಾಕಂದರೆ ಅದು ಆತನ ಪಾದಪೀಠವು; ಯೆರೂಸಲೇಮಿನ ಮೇಲೆಯೂ ಬೇಡ; ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ.
|
37. ಆದರೆ ನಿನ್ನ ಮಾತು ಹೌದಾಗಿದ್ದರೆ ಹೌದು, ಅಲ್ಲವಾಗಿದ್ದರೆ ಅಲ್ಲ ಎಂದಿರಲಿ; ಇವುಗಳಿಗಿಂತ ಹೆಚ್ಚಾದದ್ದು ಕೆಟ್ಟದ್ದ ರಿಂದ ಬರುವಂಥದ್ದು.
|
38. ಇದಲ್ಲದೆ--ಕಣ್ಣಿಗೆ ಪ್ರತಿಯಾಗಿ ಕಣ್ಣನ್ನೂ ಹಲ್ಲಿಗೆ ಪ್ರತಿಯಾಗಿ ಹಲ್ಲನ್ನೂ ತೆಗಿಸು ಎಂದು ಹೇಳಿರುವದನ್ನು ನೀವು ಕೇಳಿದ್ದೀರಿ.
|
39. ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
|
44. ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
|
45. ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
|
46. ನಿಮ್ಮನ್ನು ಪ್ರೀತಿಮಾಡುವವರನ್ನೇ ನೀವು ಪ್ರೀತಿಮಾಡಿದರೆ ನಿಮಗೆ ಯಾವ ಪ್ರತಿಫಲ ಸಿಕ್ಕೀತು? ಸುಂಕದವರೂ ಹಾಗೆ ಮಾಡುತ್ತಾರಲ್ಲವೇ?
|
47. ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?
|