2. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
|
4. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
|
5. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು.
|
6. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
|
7. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
|
9. ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
|
10. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
|
11. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
|
13. ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
|
14. ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
|
15. ಹಾದುಹೋಗುವವರಿಲ್ಲದೆ ನೀನು ಬಿಡಲ್ಪಟ್ಟವಳೂ ಹಗೆ ಮಾಡಲ್ಪಟ್ಟವಳೂ ಆಗಿ ದ್ದಕ್ಕೆ ಬದಲಾಗಿ ನಿನ್ನನ್ನು ನಿತ್ಯವಾದ ಘನತೆಯೂ ಅನೇಕ ಸಂತತಿಗಳಲ್ಲಿ ಉಲ್ಲಾಸವಾಗಿಯೂ ಮಾಡು ತ್ತೇನೆ.
|
16. ಅನ್ಯಜನಾಂಗಗಳ ಹಾಲನ್ನು ಹೀರಿಕೊಳ್ಳುವಿ; ಅರಸರ ಮೊಲೆಯನ್ನು ಸಹ ಹೀರಿಕೊಳ್ಳುವಿ; ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋ ಚಕನೂ ಯಾಕೋಬನ ಪರಾಕ್ರಮಿಯೂ ಎಂದು ತಿಳುಕೊಳ್ಳುವಿ.
|
17. ಹಿತ್ತಾಳೆಗೆ ಬದಲಾಗಿ ಬಂಗಾರವನ್ನು ತರುವೆನು; ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ ಮರಕ್ಕೆ ಬದಲಾಗಿ ಹಿತ್ತಾಳೆಯನ್ನೂ ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು, ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿಯೂ ನೀತಿಯನ್ನು ನಿನಗೆ ಅಧಿಕಾರಿ ಯನ್ನಾಗಿಯೂ ಮಾಡುವೆನು.
|
18. ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
|
19. ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
|
20. ನಿನ್ನ ಸೂರ್ಯನು ಅಸ್ತಮಿಸು ವದಿಲ್ಲ, ನಿನ್ನ ಚಂದ್ರನು ಕಾಣದೆ ಹೋಗುವದಿಲ್ಲ; ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು ನಿನ್ನ ದುಃಖದ ದಿನಗಳು ಮುಗಿದುಹೋಗಿರುವವು.
|
21. ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
|
22. ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
|