1. ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
|
3. ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
|
4. ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
|
5. ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
|
7. ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
|
9. ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
|
10. ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
|
11. ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
|
13. ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
|
15. ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
|
17. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
|
18. ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
|
23. ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
|
24. ನಾವು ನಿರೀಕ್ಷೆಯಿಂದ ರಕ್ಷಣೆಯನ್ನು ಹೊಂದುವವ ರಾಗಿದ್ದೇವೆ; ಕಾಣುವಂಥ ನಿರೀಕ್ಷೆಯು ನಿರೀಕ್ಷೆಯಲ್ಲ; ಒಬ್ಬನು ಎದುರು ನೋಡುವದು ಪ್ರತ್ಯಕ್ಷವಾಗಿದ್ದರೆ ಇನ್ನು ನಿರೀಕ್ಷಿಸುವದು ಯಾಕೆ?
|
26. ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
|
27. ಆದರೆ ಹೃದಯಗಳನ್ನು ಶೋಧಿಸು ವಾತನಿಗೆ ಆತ್ಮನ ಮನೊಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ಪರಿಶುದ್ಧರಿ ಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
|
28. ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
|
29. ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
|
30. ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
|
32. ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
|
34. ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
|
35. ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
|
36. ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.
|
39. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
|