1. ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನ ಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.
|
3. ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು.
|
4. ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.
|
5. ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.
|
6. ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು.
|
7. ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು.
|
8. ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
|
16. ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ. ಆತನು ಇಸಾಕನಿಗೆ ಮಾಡಿದ ವಾಗ್ದಾನವನ್ನು ಜ್ಞಾಪಕಕ್ಕೆ ತನ್ನಿರಿ.
|
18. ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು. ಆ ವಾಗ್ದತ್ತ ದೇಶವು ನಿಮ್ಮದಾಗುವುದು” ಎಂದು ಹೇಳಿದನು.
|
21. ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು.
|
22. ಯೆಹೋವನು ಆ ರಾಜರಿಗೆ, “ನಾನು ಆರಿಸಿಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” ಎಂದು ಹೇಳಿದನು.
|
29. ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ.
|
30. ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.
|
33. ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ.
|
35. “ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ.
|
36. ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು.
|
37. ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.
|
38. ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು.
|
39. ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು.
|
40. ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.
|
43. ಆ ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು.
|