4. “ಇಸ್ರೇಲಿನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಿದ್ದಾನೆ. ಆತನು ದಾವೀದನಿಗೆ,
|
5. ‘ಈಜಿಪ್ಪಿನಿಂದ ನನ್ನ ಜನರನ್ನು ಬಿಡಿಸಿ ಹೊರ ತಂದಂದಿನಿಂದ ನನ್ನ ಆಲಯಕೋಸ್ಕರ ಇಸ್ರೇಲರ ಕುಲಗಳ ಯಾವ ಪಟ್ಟಣವನ್ನೂ ನಾನು ಆರಿಸಿಕೊಳ್ಳಲಿಲ್ಲ. ಇಸ್ರೇಲರನ್ನು ನಡಿಸುವುದಕ್ಕಾಗಿ ಒಬ್ಬ ನಾಯಕನನ್ನೂ ನಾನು ಆರಿಸಿಕೊಳ್ಳಲಿಲ್ಲ.
|
6. ಆದರೆ ಈಗ ನಾನು ನನ್ನ ಹೆಸರನ್ನು ಸ್ಥಾಪಿಸಲು ಜೆರುಸಲೇಮನ್ನು ಆರಿಸಿಕೊಂಡಿದ್ದೇನೆ; ದಾವೀದನನ್ನು ನನ್ನ ಜನರ ನಾಯಕನನ್ನಾಗಿ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.
|
8. ಆದರೆ ದೇವರು ನನ್ನ ತಂದೆಗೆ, ‘ದಾವೀದನೇ, ನೀನು ನನಗಾಗಿ ಒಂದು ಆಲಯವನ್ನು ಕಟ್ಟಲು ಮನಸ್ಸು ಮಾಡಿರುವದು ಒಳ್ಳೆಯದೇ ಸರಿ!
|
10. ಯೆಹೋವನು ತಾನು ಕೊಟ್ಟ ಮಾತನ್ನು ಈಗ ನೆರವೇರಿಸಿದನು. ನಾನು ನನ್ನ ತಂದೆಯ ಸ್ಥಾನದಲ್ಲಿ ಅರಸನಾಗಿದ್ದೇನೆ. ದಾವೀದನು ನನ್ನ ತಂದೆ. ಈಗ ನಾನು ಇಸ್ರೇಲರ ರಾಜನು. ಇದು ದೇವರ ವಾಗ್ದಾನಕ್ಕನುಸಾರವಾಗಿದೆ. ನಾನು ಇಸ್ರೇಲರ ದೇವರಾದ ಯೆಹೋವನ ನಾಮಕ್ಕಾಗಿ ದೇವಾಲಯವನ್ನು ಕಟ್ಟಿರುತ್ತೇನೆ.
|
13. ಸೊಲೊಮೋನನು ಒಂದು ತಾಮ್ರದ ಪೀಠವನ್ನು ತಯಾರಿಸಿದನು. ಅದರ ಉದ್ದ ಐದು ಮೊಳ; ಅಗಲ ಐದು ಮೊಳ; ಎತ್ತರ ಮೂರು ಮೊಳ; ಅದನ್ನು ಪ್ರಾಕಾರದ ಮಧ್ಯದಲ್ಲಿಟ್ಟು ಅದರ ಮೇಲೆ ಇಸ್ರೇಲಿನ ಸರ್ವಜನರ ಮುಂದೆ ಮೊಣಕಾಲೂರಿ ತನ್ನ ಕೈಗಳನ್ನು ಆಕಾಶದ ಕಡೆ ಎತ್ತಿ,
|
14. “ಇಸ್ರೇಲರ ದೇವರಾದ ಯೆಹೋವನೇ, ಭೂಪರಲೋಕಗಳಲ್ಲಿ ನಿನಗೆ ಸಮಾನರಾದ ಬೇರೆ ದೇವರುಗಳಿಲ್ಲ. ನೀನು ನಿನ್ನ ಪ್ರೀತಿ ಕರುಣೆಯಿಂದೊಡಗೂಡಿದ ವಾಗ್ದಾನಗಳನ್ನು ನೆರವೇರಿಸುವೆ. ನಿನ್ನ ಸೇವಕರು ಹೃದಯಪೂರ್ವಕವಾಗಿ ನಿನಗೆ ಯೋಗ್ಯರಾಗಿ ನಡೆದು, ನಿನ್ನ ಆಜ್ಞೆಗಳಿಗೆ ವಿಧೇಯರಾಗುವದಾದರೆ ಅವರ ವಿಷಯದಲ್ಲಿ ನಿನ್ನ ವಾಗ್ದಾನವನ್ನು ನೆರವೇರಿಸುವೆ.
|
15. ನಿನ್ನ ಸೇವಕನಾದ ದಾವೀದನಿಗೆ ನೀನು ಮಾಡಿದ ವಾಗ್ದಾನವನ್ನು ನೆರವೇರಿಸಿರುವೆ. ದಾವೀದನು ನನ್ನ ತಂದೆ. ಅವನಿಗೆ ನೀನು ವಾಗ್ದಾನವನ್ನು ಮಾಡಿರುವೆ. ಈ ದಿನ ನಿನ್ನ ವಾಗ್ದಾನವು ನಿನ್ನ ಹಸ್ತದ ಮೂಲಕ ನೆರವೇರಿತು.
|
16. ಇಸ್ರೇಲರ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದರೆ, ನಿನ್ನ ಸಂತಾನದವರೇ ಇಸ್ರೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು.’ ಎಂದು ವಾಗ್ದಾನ ಮಾಡಿದೆಯಲ್ಲಾ?
|
18. “ದೇವರೇ, ನೀನು ಭೂಮಿಯ ಮೇಲೆ ಜನರೊಂದಿಗೆ ವಾಸಿಸುವವನಲ್ಲವೆಂದು ತಿಳಿದಿದ್ದೇವೆ. ಆಕಾಶಮಂಡಲವಾಗಲೀ ಅತ್ಯುನ್ನತವಾದ ಆಕಾಶವಾಗಲೀ ನಿನಗೆ ವಾಸಸ್ಥಾನವಾಗಲು ಸಾಧ್ಯವಿಲ್ಲ. ಈಗ ನಾನು ಕಟ್ಟಿರುವ ಈ ಆಲಯವು ಸಹ ನಿನ್ನ ವಾಸಕ್ಕೆ ಸಾಲದು.
|
19. ನನ್ನ ಪ್ರಾರ್ಥನೆಗೆ ಲಕ್ಷ್ಯಕೊಡು ಎಂದು ನಿನ್ನನ್ನು ಬೇಡುತ್ತೇನೆ. ದೇವರಾದ ಯೆಹೋವನೇ, ನನ್ನ ಬೇಡಿಕೆಗಳನ್ನು ಮತ್ತು ಸ್ತೋತ್ರಗಳನ್ನು ಲಾಲಿಸು. ನಾನು ನಿನ್ನ ಸೇವಕನಾಗಿದ್ದೇನೆ.
|
20. ನಿನ್ನ ಕಣ್ಣುಗಳು ಹಗಲಿರುಳು ಈ ಆಲಯವನ್ನು ದೃಷ್ಟಿಸುತ್ತಲೇ ಇರಲಿ. ನೀನು ನಿನ್ನ ನಾಮವನ್ನು ಇಲ್ಲಿ ಸ್ಥಾಪಿಸುತ್ತೇನೆ ಎಂದು ಹೇಳಿರುವೆ. ನಾನು ಈ ದೇವಾಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವಾಗ ಆಲೈಸು.
|
21. ನಿನ್ನ ಜನರಾದ ಇಸ್ರೇಲರು ಮತ್ತು ನಾನು ಮಾಡುವ ಪ್ರಾರ್ಥನೆಯನ್ನು ಆಲೈಸು. ನಾವು ಈ ದೇವಾಲಯದ ಕಡೆಗೆ ತಿರುಗಿಕೊಂಡು ನಿನಗೆ ಪ್ರಾರ್ಥಿಸುವಾಗ ನಿನ್ನ ನಿವಾಸವಾದ ಪರಲೋಕದಿಂದ ನಮ್ಮ ಪ್ರಾರ್ಥನೆಯನ್ನು ಆಲೈಸು; ನಮ್ಮ ಪಾಪಗಳನ್ನು ಕ್ಷಮಿಸು.
|
22. “ಒಬ್ಬನು ಇನ್ನೊಬ್ಬನಿಗೆ ವಿರುದ್ಧವಾಗಿ ದುಷ್ಟಕಾರ್ಯ ನಡೆಸಿದ್ದರೂ ನಿನ್ನ ಯಜ್ಞವೇದಿಕೆಯ ಮುಂದೆ ಬಂದು ತಾನು ಮಾಡಿಲ್ಲವೆಂದು ನಿನ್ನ ಹೆಸರಿನಲ್ಲಿ ಪ್ರಮಾಣ ಮಾಡಿದರೆ
|
23. ಅದನ್ನು ನೀನು ಪರಲೋಕದಿಂದ ಆಲೈಸಿ ನಿನ್ನ ಸೇವಕರ ನ್ಯಾಯತೀರಿಸು. ಕೇಡು ಮಾಡಿದವನನ್ನು ಶಿಕ್ಷಿಸು; ಅವನು ಇನ್ನೊಬ್ಬನಿಗೆ ಮಾಡಿದ ದುಷ್ಟಕಾರ್ಯವು ಅವನಿಗೇ ತಟ್ಟುವಂತೆ ಮಾಡು. ಯಾವನು ನಿರಪರಾಧಿಯೆಂಬುದನ್ನು ತೋರಿಸಿಕೊಟ್ಟು ಅವನ ನೀತಿಗೆ ತಕ್ಕಂತೆ ಪ್ರತಿಫಲ ಕೊಡು.
|
24. “ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ವೈರಿಗಳು ಬಂದು ಅವರನ್ನು ಯುದ್ಧದಲ್ಲಿ ಸೋಲಿಸಿದರೂ ನಿನ್ನ ಜನರು ನಿನ್ನ ಕಡೆಗೆ ತಿರುಗಿ ತಮ್ಮ ಪಾಪಗಳನ್ನು ಒಪ್ಪಿಕೊಂಡು ಈ ದೇವಾಲಯಕ್ಕೆ ಬಂದು ನಿನ್ನ ಹೆಸರನ್ನು ಹೇಳಿಕೊಂಡು ನಿನಗೆ ಪ್ರಾರ್ಥಿಸಿ ಬೇಡಿಕೊಂಡರೆ
|
25. ಆಗ ನೀನು ಪರಲೋಕದಿಂದ ಅವರ ಮೊರೆಯನ್ನು ಲಾಲಿಸಿ, ನಿನ್ನ ಜನರ ಪಾಪಗಳನ್ನು ಮನ್ನಿಸು. ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮತ್ತೆ ಬರಮಾಡು.
|
26. “ನಿನ್ನ ಜನರಾದ ಇಸ್ರೇಲರು ನಿನಗೆ ವಿರುದ್ಧವಾಗಿ ಪಾಪಮಾಡಿದಾಗ ನೀನು ಆಕಾಶದಿಂದ ಮಳೆ ಬೀಳದಂತೆ ತಡೆದಾಗ ನಿನ್ನ ಜನರು ಪಶ್ಚಾತ್ತಾಪಪಟ್ಟು ಈ ದೇವಾಲಯದ ಕಡೆಗೆ ತಿರುಗಿ ನಿನ್ನನ್ನು ಪ್ರಾರ್ಥಿಸಿ ತಮ್ಮ ಪಾಪಗಳನ್ನು ಬಿಟ್ಟುಬಿಟ್ಟರೆ
|
27. ನೀನು ಪರಲೋಕದಿಂದ ಅವರನ್ನು ಆಲೈಸು. ಇಸ್ರೇಲರು ನಿನ್ನ ಸೇವಕರೂ ಪ್ರಜೆಗಳೂ ಆಗಿದ್ದಾರೆ. ಅವರು ಬದುಕುವಂತೆ ಸರಿಯಾದ ಮಾರ್ಗವನ್ನು ಅವರಿಗೆ ತೋರ್ಪಡಿಸು. ಅವರ ದೇಶದ ಮೇಲೆ ಮಳೆಯನ್ನು ಸುರಿಸು. ನಿನ್ನ ಜನರಿಗೆ ನೀನು ಆ ದೇಶವನ್ನೇ ಸ್ವಾಸ್ತ್ಯವಾಗಿ ಕೊಟ್ಟಿರುವೆ.
|
28. “ಆ ದೇಶದಲ್ಲಿ ಬರಗಾಲ ಬಂದಾಗ ಅಥವಾ ಸೋಂಕುರೋಗ ತಗಲಿದಾಗ, ಅಥವಾ ಮಿಡತೆಗಳಿಂದ ಬಾಧಿಸಲ್ಪಟ್ಟಾಗ, ವೈರಿಗಳು ಬಂದು ನಿನ್ನ ಜನರ ಮೇಲೆ ಅವರ ನಗರಗಳಲ್ಲಿಯೇ ಯುದ್ಧಮಾಡಿದಾಗ, ಅಥವಾ ಭಯಂಕರವಾದ ಕಾಯಿಲೆಯು ದೇಶದ ಜನರನ್ನು ಕಾಡಿದಾಗ
|
30. ನೀನು ಪರಲೋಕದಿಂದ ಅವರ ಮೊರೆಯನ್ನು ಆಲೈಸಿ ಅವರ ಪ್ರಾರ್ಥನೆಗೆ ಉತ್ತರವನ್ನು ದಯಪಾಲಿಸು; ಪ್ರತಿಯೊಬ್ಬನಿಗೂ ತಕ್ಕ ಪ್ರತಿಫಲವನ್ನು ಕೊಡು. ಯಾಕಂದರೆ ಪ್ರತಿಯೊಬ್ಬನ ಹೃದಯವನ್ನು ನೀನೊಬ್ಬನೇ ತಿಳಿದಿರುವೆ.
|
32. “ಇಸ್ರೇಲಿನವನಲ್ಲದ ಪರದೇಶಿಯು ನಿನ್ನ ಪರಾಕ್ರಮವನ್ನೂ ನಿನ್ನ ಸಾಮರ್ಥ್ಯವನ್ನೂ ಕಂಡು ಕೇಳಿ ಇಲ್ಲಿಗೆ ಬಂದು ಈ ಆಲಯದ ಮುಂದೆ ನಿಂತುಕೊಂಡು ನಿನಗೆ ಪ್ರಾರ್ಥಿಸುವದಾದರೆ,
|
33. ಪರಲೋಕದಲ್ಲಿ ವಾಸಿಸುವ ನೀನು ಆ ಪರದೇಶಿಯ ಪ್ರಾರ್ಥನೆಯನ್ನು ಕೇಳಿ ಉತ್ತರಿಸು. ಆಗ ಇಸ್ರೇಲ್ ಜನರಂತೆ ಈ ಲೋಕದಲ್ಲಿರುವ ಜನರೆಲ್ಲಾ ನಿನ್ನ ವಿಷಯ ಕೇಳಿ ನಿನ್ನನ್ನು ಗೌರವಿಸುವರು. ನಾನು ಕಟ್ಟಿದ ಈ ದೇವಾಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂಬದು ಆಗ ಅವರಿಗೆ ಗೊತ್ತಾಗುವುದು.
|
34. “ನೀನು ನಿನ್ನ ಜನರನ್ನು ಅವರ ವೈರಿಗಳ ವಿರುದ್ಧವಾಗಿ ಯುದ್ಧಮಾಡಲು ಒಂದು ಸ್ಥಳಕ್ಕೆ ಕಳುಹಿಸುವಾಗ ನೀನು ಆರಿಸಿಕೊಂಡ ಈ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ಈ ದೇವಾಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥಿಸಿದರೆ
|
36. “ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿದಾಗ
|
37. ಒಂದುವೇಳೆ ಅವರು ಪಶ್ಚಾತ್ತಾಪಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ತಾವು ಸೆರೆಯಲ್ಲಿರುವ ದೇಶದಿಂದ ನಿನಗೆ ಮೊರೆಯಿಟ್ಟು, ‘ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ. ನಾವು ದುಷ್ಟತ್ವದಲ್ಲಿ ಜೀವಿಸಿದ್ದೇವೆ’ ಎಂದು ಅರಿಕೆಮಾಡಿ
|
38. ತಮ್ಮ ಹೃದಯಪೂರ್ವಕವಾಗಿ ತಮ್ಮ ದೇಶದ ಕಡೆಗೆ, ಅಂದರೆ ನೀನು ಅವರ ಪೂರ್ವಿಕರಿಗೆ ಕೊಟ್ಟ ಈ ದೇಶದ ಕಡೆಗೂ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿಸಿದ ಈ ದೇವಾಲಯದ ಕಡೆಗೂ ಮುಖಮಾಡಿಕೊಂಡು ಪ್ರಾರ್ಥಿಸುವಾಗ,
|
39. ನಿನ್ನ ವಾಸಸ್ಥಾನವಾಗಿರುವ ಪರಲೋಕದಿಂದ ನೀನು ಅವರ ಪ್ರಾರ್ಥನೆಯನ್ನು ಕೇಳಿ ಅವರಿಗೆ ಸಹಾಯಮಾಡು. ನಿನಗೆ ವಿರುದ್ಧವಾಗಿ ಪಾಪಮಾಡಿದವರನ್ನು ಕ್ಷಮಿಸು.
|
41. “ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ಷಣಾವಸ್ತ್ರವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೇತನದಲ್ಲಿ ಸಂತೋಷಪಡಲಿ.
|
42. ದೇವರಾದ ಯೆಹೋವನೇ, ನಿನ್ನಿಂದ ಅಭಿಷೇಕಿಸಲ್ಪಟ್ಟಿರುವ ಅರಸನನ್ನು ತಳ್ಳಿಬಿಡಬೇಡ. ನಿನಗೆ ನಂಬಿಗಸ್ತನಾದ ಸೇವಕನಾಗಿದ್ದ ದಾವೀದನನ್ನು ನೆನಪುಮಾಡಿಕೊ” ಎಂದು ಪ್ರಾರ್ಥಿಸಿದನು.
|