1. ದಾವೀದನು ಆಲೀವ್ ಬೆಟ್ಟದ ಮೇಲೆ ಸ್ವಲ್ಪ ದೂರ ಬಂದನು. ಅಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ದಾವೀದನನ್ನು ಸಂಧಿಸಿದನು. ಚೀಬನ ಹತ್ತಿರ ತಡಿಹಾಕಲ್ಪಟ್ಟ ಎರಡು ಹೇಸರಕತ್ತೆಗಳಿದ್ದವು. ಆ ಹೇಸರಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳು, ಒಂದುನೂರು ಗೊಂಚಲು ಒಣದ್ರಾಕ್ಷಿ, ಒಂದುನೂರು ಹಣ್ಣುಗಳು ಮತ್ತು ದ್ರಾಕ್ಷಾರಸದ ಒಂದು ಚೀಲ ಇದ್ದವು.
|
2. ರಾಜನಾದ ದಾವೀದನು ಚೀಬನಿಗೆ, “ಈ ವಸ್ತುಗಳೆಲ್ಲ ಏತಕ್ಕಾಗಿ?” ಎಂದು ಕೇಳಿದನು. ಚೀಬನು, “ಹೇಸರಕತ್ತೆಗಳನ್ನು ರಾಜನ ಕುಟುಂಬದವರು ಸವಾರಿ ಮಾಡುವುದಕ್ಕಾಗಿಯೂ ರೊಟ್ಟಿಗಳನ್ನು ಮತ್ತು ಹಣ್ಣುಗಳನ್ನು ಸೇವಕರು ತಿನ್ನುವುದಕ್ಕಾಗಿಯೂ ತಂದಿದ್ದೇನೆ. ಅರಣ್ಯದಲ್ಲಿ ಶಕ್ತಿಗುಂದಿಹೋದವನು ದ್ರಾಕ್ಷಾರಸವನ್ನು ಕುಡಿಯಲಿ” ಎಂದು ಉತ್ತರಿಸಿದನು.
|
3. ರಾಜನು, “ಮೆಫೀಬೋಶೆತನು ಎಲ್ಲಿ?” ಎಂದು ಕೇಳಿದನು. ಚೀಬನು ರಾಜನಿಗೆ, “ಮೆಫೀಬೋಶೆತನು ಜೆರುಸಲೇಮಿನಲ್ಲಿಯೇ ಇದ್ದಾನೆ. ಯಾಕಂದರೆ ‘ಇಸ್ರೇಲರು ನನ್ನ ತಾತನ ರಾಜ್ಯಾಧಿಕಾರವನ್ನು ಈ ದಿನ ನನಗೆ ಹಿಂದಕ್ಕೆ ಕೊಡುತ್ತಾರೆ’ ಎಂಬುದು ಅವನ ಆಲೋಚನೆಯಾಗಿದೆ” ಎಂದನು.
|
4. ಆಗ ರಾಜನು, “ಆದ್ದರಿಂದ ಮೆಫೀಬೋಶೆತನಿಗೆ ಸೇರಿರುವುದೆಲ್ಲವನ್ನೂ ಈಗ ನಾನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. ಚೀಬನು, “ನಾನು ನಿನಗೆ ಸಾಷ್ಟಾಂಗನಮಸ್ಕಾರ ಮಾಡುತ್ತೇನೆ; ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ” ಎಂದನು.
|
5. ದಾವೀದನು ಬಹುರೀಮಿಗೆ ಬಂದನು. ಸೌಲನ ಕುಟುಂಬಕ್ಕೆ ಸೇರಿದ ಗೇರನ ಮಗನಾದ ಶಿಮ್ಮಿಯು ದಾವೀದನನ್ನು ಶಪಿಸುತ್ತಾ ಬಹುರೀಮಿನಿಂದ ಹೊರಗೆ ಬಂದನು.
|
6. ದಾವೀದನ ಮತ್ತು ಅವನ ಸೇವಕರ ಮೇಲೆ ಶಿಮ್ಮಿಯು ಕಲ್ಲುಗಳನ್ನು ಎಸೆಯಲಾರಂಭಿಸಿದನು. ಆದರೆ ದಾವೀದನ ಸುತ್ತಲೂ ಜನರು ಮತ್ತು ಸೇವಕರು ಒಟ್ಟುಗೂಡಿದರು.
|
8. ಯೆಹೋವನು ನಿನ್ನನ್ನು ದಂಡಿಸುತ್ತಿದ್ದಾನೆ. ಏಕೆಂದರೆ ನೀನು ಸೌಲನ ಕುಟುಂಬದವರನ್ನು ಕೊಂದು ಸೌಲನ ರಾಜಪದವಿಯನ್ನು ಕದ್ದಿರುವೆ. ಈಗ ನಿನಗೂ ಅದೇ ಸಂಭವಿಸುತ್ತಿದೆ. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಮಗನಿಗೆ ಕೊಟ್ಟಿದ್ದಾನೆ. ಏಕೆಂದರೆ ನೀನೊಬ್ಬ ಕೊಲೆಗಾರ” ಎಂದನು.
|
9. ಚೆರೂಯಳ ಮಗನಾದ ಅಬೀಷೈಯು ರಾಜನಿಗೆ “ನನ್ನ ರಾಜನಾದ ಪ್ರಭುವೇ, ಈ ಸತ್ತನಾಯಿಯು ನಿನ್ನನ್ನು ಶಪಿಸುವುದೇಕೆ? ಶಿಮ್ಮಿಯ ತಲೆಯನ್ನು ಕತ್ತರಿಸಿಹಾಕುತ್ತೇನೆ, ನನಗೆ ಅಪ್ಪಣೆಕೊಡು” ಎಂದನು.
|
10. ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.
|
11. ದಾವೀದನು ಅಬೀಷೈಗೆ ಮತ್ತು ತನ್ನ ಎಲ್ಲಾ ಸೇವಕರಿಗೆ, “ನೋಡಿ, ನನ್ನ ಸ್ವಂತ ಮಗನೇ ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾನೆ. ಬೆನ್ಯಾಮೀನ್ ಕುಲದ ಇವನು ನನ್ನನ್ನು ಶಪಿಸುವುದು ಯಾವ ದೊಡ್ಡ ಮಾತು; ಅವನು ನನ್ನನ್ನು ಶಪಿಸುತ್ತಲೇ ಇರಲಿ. ಹೀಗೆ ಮಾಡುವಂತೆ ಯೆಹೋವನೇ ಅವನಿಗೆ ತಿಳಿಸಿದ್ದಾನೆ.
|
12. ಯೆಹೋವನು ನನಗುಂಟಾಗುತ್ತಿರುವ ಕೇಡುಗಳನ್ನು ನೋಡಿ ಶಿಮ್ಮಿಯ ಶಾಪಕ್ಕೆ ಬದಲಾಗಿ ಶುಭವನ್ನು ಅನುಗ್ರಹಿಸಬಹುದೇನೊ” ಎಂದನು.
|
13. ಆದುದರಿಂದ ದಾವೀದನು ತನ್ನ ಜನರೊಂದಿಗೆ ಮುಂದೆ ಸಾಗಿದನು. ಆದರೆ ಶಿಮ್ಮಿಯು ದಾವೀದನನ್ನು ಹಿಂಬಾಲಿಸುತ್ತಲೇ ಇದ್ದನು. ಬೆಟ್ಟದ ಪಕ್ಕದ ರಸ್ತೆಯ ಅಂಚಿನಲ್ಲಿ ಶಿಮ್ಮಿಯು ನಡೆಯುತ್ತಾ ದಾವೀದನನ್ನು ಶಪಿಸುತ್ತಲೇ ಇದ್ದನು. ಶಿಮ್ಮಿಯು ಕಲ್ಲುಗಳನ್ನು ಮತ್ತು ಧೂಳನ್ನು ಸಹ ದಾವೀದನತ್ತ ಎಸೆದನು.
|
14. ರಾಜನಾದ ದಾವೀದನು ಮತ್ತು ಅವನ ಜನರೆಲ್ಲರೂ ಬಹುರೀಮಿಗೆ ಬಂದರು. ರಾಜನು ಮತ್ತು ಅವನ ಜನರು ಆಯಾಸಗೊಂಡಿದ್ದರಿಂದ ಅವರು ಬಹುರೀಮಿನಲ್ಲಿ ವಿಶ್ರಾಂತಿ ಪಡೆದರು.
|
16. ದಾವೀದನ ಸ್ನೇಹಿತನೂ ಅರ್ಕೀಯನೂ ಆದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಹೂಷೈಯು, “ರಾಜನು ಚಿರಾಯುವಾಗಿರಲಿ, ರಾಜನು ಚಿರಾಯುವಾಗಿರಲಿ” ಎಂದು ಅಬ್ಷಾಲೋಮನಿಗೆ ಹೇಳಿದನು.
|
17. ಅಬ್ಷಾಲೋಮನು, ‘ನಿನ್ನ ಸ್ನೇಹಿತನಾದ ದಾವೀದನಿಗೆ ನೀನೇಕೆ ನಂಬಿಗಸ್ತನಾಗಿಲ್ಲ? ನಿನ್ನ ಸ್ನೇಹಿತನೊಡನೆ ನೀನು ಜೆರುಸಲೇಮಿನಿಂದ ಯಾಕೆ ಹೋಗಲಿಲ್ಲ’ ಎಂದು ಕೇಳಿದನು.
|
18. ಹೂಷೈಯು, “ಯೆಹೋವನು ಆರಿಸಿಕೊಂಡ ವ್ಯಕ್ತಿಗೆ ನಾನು ಸೇರಿದವನು. ಈ ಜನರು ಮತ್ತು ಇಸ್ರೇಲಿನ ಜನರು ನಿನ್ನನ್ನು ಆರಿಸಿದ್ದಾರೆ. ನಾನು ನಿನ್ನೊಡನೆ ನೆಲೆಸುತ್ತೇನೆ.
|
19. ಮುಂಚೆ ನಾನು ನಿನ್ನ ತಂದೆಯ ಸೇವೆ ಮಾಡಿದೆನು. ಈಗ ದಾವೀದನ ಮಗನ ಸೇವೆ ಮಾಡಬೇಕು. ನಾನು ನಿನ್ನ ಸೇವೆ ಮಾಡುತ್ತೇನೆ” ಎಂದು ಉತ್ತರಕೊಟ್ಟನು.
|
21. ಅಹೀತೋಫೆಲನು ಅಬ್ಷಾಲೋಮನಿಗೆ, “ನಿಮ್ಮ ತಂದೆಯು, ಮನೆಯನ್ನು ಕಾಯುವುದಕ್ಕೆ ತನ್ನ ಕೆಲವು ಪತ್ನಿಯರನ್ನು ಇಲ್ಲಿ ಬಿಟ್ಟುಹೋಗಿದ್ದಾನೆ. ನೀನು ಅವರೊಂದಿಗೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ದ್ವೇಷಿಸುವನೆಂಬುದು ಇಸ್ರೇಲರಿಗೆಲ್ಲ ಆಗ ತಿಳಿಯುವುದು; ನಿನಗೆ ಮತ್ತಷ್ಟು ಬೆಂಬಲವನ್ನು ಕೊಡಲು ನಿನ್ನ ಜನರೆಲ್ಲರನ್ನು ಪ್ರೋತ್ಸಾಹಿಸಿದಂತಾಗುತ್ತದೆ” ಎಂದನು.
|
22. ಆಗ ಅವರು ಅಬ್ಷಾಲೋಮನಿಗಾಗಿ ಮನೆಯ ಮಾಳಿಗೆಯ ಮೇಲೆ ಒಂದು ಗುಡಾರವನ್ನು ಹಾಕಿದರು. ಅಬ್ಷಾಲೋಮನು ತನ್ನ ತಂದೆಯ ಪತ್ನಿಯರೊಡನೆ ಮಲಗಿಕೊಂಡನು. ಇಸ್ರೇಲರೆಲ್ಲ ಇದನ್ನು ನೋಡಿದರು.
|
23. ಆ ಸಮಯದಲ್ಲಿ ದಾವೀದನಿಗೆ ಮತ್ತು ಅಬ್ಷಾಲೋಮನಿಗೆ ಅಹೀತೋಫೆಲನ ಸಲಹೆಯು ಬಹಳ ಮುಖ್ಯವಾಗಿತ್ತು. ದೇವರ ವಾಕ್ಯವು ಮನುಷ್ಯನಿಗೆಷ್ಟು ಮುಖ್ಯವೋ ಅಷ್ಟೇ ಮುಖ್ಯವಾಗಿತ್ತು.
|