1. ತರುವಾಯ ದಾವೀದನು ಯೆಹೋವನಲ್ಲಿ ಪ್ರಾರ್ಥಿಸಿ, “ಯೆಹೂದದ ಯಾವುದಾದರೂ ನಗರಕ್ಕೆ ನಾನು ಹೋಗಬಹುದೇ?” ಎಂದು ಕೇಳಿದನು. “ಹೋಗು” ಎಂಬುದಾಗಿ ಯೆಹೋವನು ಹೇಳಿದನು. “ನಾನು ಎಲ್ಲಿಗೆ ಹೋಗಲಿ?” ಎಂದು ದಾವೀದನು ಕೇಳಿದನು. “ಹೆಬ್ರೋನಿಗೆ ಹೋಗು” ಎಂದು ಯೆಹೋವನು ಉತ್ತರಿಸಿದನು.
|
2. ಆದ್ದರಿಂದ ದಾವೀದನು ಅಲ್ಲಿಗೆ ಹೋದನು. ಅವನ ಇಬ್ಬರು ಹೆಂಡತಿಯರೂ ಅವನ ಜೊತೆಯಲ್ಲಿ ಹೋದರು. ಅವರು ಯಾರೆಂದರೆ: ಇಜ್ರೇಲಿನ ಅಹೀನೋವಮಳು ಮತ್ತು ಕರ್ಮೆಲಿನ ನಾಬಾಲನ ವಿಧವೆಯಾದ ಅಬೀಗೈಲಳು.
|
3. ದಾವೀದನು ತನ್ನ ಜನರನ್ನು ಮತ್ತು ಅವರ ಕುಟುಂಬಗಳನ್ನು ಸಹ ಕರೆತಂದನು. ಅವರೆಲ್ಲರೂ ಹೆಬ್ರೋನ್ ಮತ್ತು ಅದರ ಸಮೀಪದ ನಗರಗಳಲ್ಲಿ ನೆಲೆಸಿದರು.
|
4. ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.
|
5. ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿದನು. ಈ ಸಂದೇಶಕರು ಯಾಬೇಷ್ನ ಜನರಿಗೆ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.
|
6. ಆತನು ನಿಮಗೆ ಕೃಪಾಳುವೂ ನಂಬಿಗಸ್ತನೂ ಆಗಿರಲಿ. ನೀವು ಸೌಲನ ಬೂದಿಯನ್ನು ಸಮಾಧಿಮಾಡಿದ್ದರಿಂದ ನಾನೂ ನಿಮಗೆ ಕರುಣೆ ತೋರಿಸುವೆನು.
|
7. ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿದರು. ಈಷ್ಬೋಶೆತನು ರಾಜನಾದನು
|
8. ಸೌಲನ ಸೈನ್ಯದಲ್ಲಿ ನೇರನ ಮಗನಾದ ಅಬ್ನೇರನು ಸೇನಾಧಿಪತಿಯಾಗಿದ್ದನು. ಸೌಲನ ಮಗನಾದ ಈಷ್ಬೋಶೆತನನ್ನು ಅಬ್ನೇರನು ಮಹನಯಿಮಿಗೆ ಕರೆದೊಯ್ದನು.
|
9. ಆ ಸ್ಥಳದಲ್ಲಿ ಅಬ್ನೇರನು ಈಷ್ಬೋಶೆತನನ್ನು ಗಿಲ್ಯಾದ್, ಆಶೇರ್, ಇಜ್ರೇಲ್, ಎಫ್ರಾಯೀಮ್ ಮತ್ತು ಬೆನ್ಯಾಮೀನ್ ಜನರ ಮೇಲೆಯೂ ಮತ್ತು ಇಸ್ರೇಲಿಗೆಲ್ಲ ರಾಜನನ್ನಾಗಿ ಮಾಡಿದನು.
|
10. ಈಷ್ಬೋಶೆತನು ಸೌಲನ ಮಗ. ಈಷ್ಬೋಶೆತನು ಇಸ್ರೇಲನ್ನು ಆಳಲು ಆರಂಭಿಸಿದಾಗ ನಲವತ್ತು ವರ್ಷ ವಯಸ್ಸಿನವನಾಗಿದ್ದನು. ಅವನು ಎರಡು ವರ್ಷ ಆಳಿದನು. ಆದರೆ ಯೆಹೂದ ಕುಲದವರು ದಾವೀದನನ್ನು ಹಿಂಬಾಲಿಸಿದರು.
|
13. ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.
|
14. ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು.
|
15. ನಂತರ ಯುವಜನರು ಮೇಲೆದ್ದರು. ಎರಡು ಗುಂಪಿನವರೂ ಹೋರಾಡುವುದಕ್ಕಾಗಿ ತಮ್ಮತಮ್ಮ ಜನರನ್ನು ಲೆಕ್ಕ ಹಾಕಿದರು. ಸೌಲನ ಮಗನಾದ ಈಷ್ಬೋಶೆತನಿಗಾಗಿ ಬೆನ್ಯಾಮೀನ್ ಕುಲದ ಹನ್ನೆರಡು ಜನರನ್ನು ಆರಿಸಲಾಯಿತು. ದಾವೀದನ ಸೇವಕರಲ್ಲಿ ಹನ್ನೆರಡು ಜನರನ್ನು ಆರಿಸಲಾಯಿತು.
|
16. ಪ್ರತಿಯೊಬ್ಬರೂ ತಮ್ಮ ಎದುರಾಳಿಯ ತಲೆಯನ್ನು ಹಿಡಿದುಕೊಂಡರು ಮತ್ತು ಖಡ್ಗದಿಂದ ಅವರ ಪಕ್ಕೆಗಳಿಗೆ ತಿವಿದರು. ಆದ್ದರಿಂದ ಅವರು ಒಟ್ಟಾಗಿ ಕೆಳಕ್ಕೆ ಬಿದ್ದರು. ಆದಕಾರಣವೇ ಆ ಸ್ಥಳವನ್ನು “ಹರಿತ ಕತ್ತಿಯ ಹೊಲ” ಎಂದು ಕರೆಯುತ್ತಾರೆ. ಈ ಸ್ಥಳವು ಗಿಬ್ಯೋನಿನಲ್ಲಿದೆ.
|
18. ಚೆರೂಯಳಿಗೆ ಯೋವಾಬ್, ಅಬೀಷೈ ಮತ್ತು ಅಸಾಹೇಲ್ ಎಂಬ ಮೂವರು ಮಕ್ಕಳಿದ್ದರು. ಅವರೆಲ್ಲಾ ಅಲ್ಲಿದ್ದರು. ಅಸಾಹೇಲನು ವೇಗದ ಓಟಗಾರ. ಅವನು ಕಾಡಿನ ಜಿಂಕೆಯಂತೆ ವೇಗವಾಗಿ ಓಡಬಲ್ಲವನಾಗಿದ್ದನು.
|
21. ಆಗ ಅಬ್ನೇರನು ಅವನಿಗೆ, “ನೀನು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಒಬ್ಬ ಯುವಕನನ್ನು ಹಿಡಿದುಕೊಂಡು ಅವನ ಬಳಿಯಿರುವ ಆಯುಧವನ್ನು ನಿನಗಾಗಿ ತೆಗೆದುಕೊ” ಎಂದು ಹೇಳಿದನು. ಆದರೆ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲಿಲ್ಲ.
|
22. ಅಬ್ನೇರನು ಮತ್ತೆ ಅಸಾಹೇಲನಿಗೆ, “ನನ್ನನ್ನು ಅಟ್ಟಿಸಿಕೊಂಡು ಬರಬೇಡ; ಇಲ್ಲವಾದರೆ ನಾನು ನಿನ್ನನ್ನು ಕೊಲ್ಲುತ್ತೇನೆ. ನಾನು ನಿನ್ನನ್ನು ಕೊಂದುಬಿಟ್ಟರೆ, ನಿನ್ನ ಸೋದರನಾದ ಯೋವಾಬನ ಮುಖವನ್ನು ನಾನು ಮತ್ತೆ ನೋಡಲಾಗುವುದಿಲ್ಲ” ಎಂದು ಹೇಳಿದನು.
|
23. ಆದರೂ ಅಸಾಹೇಲನು ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದನು. ಆದುದರಿಂದ ಅಬ್ನೇರನು ತನ್ನ ಬರ್ಜಿಯ ಹಿಡಿಕೆಯನ್ನು ಹಿಡಿದುಕೊಂಡು ಅದನ್ನು ಅಸಾಹೇಲನ ಹೊಟ್ಟೆಗೆ ತಿವಿದನು. ಆ ಬರ್ಜಿಯು ಅಸಾಹೇಲನ ಹೊಟ್ಟೆಯೊಳಗೆ ಆಳವಾಗಿ ಚುಚ್ಚಿಕೊಂಡು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅಸಾಹೇಲನು ಕೂಡಲೇ ಅಲ್ಲೇ ಸತ್ತುಬಿದ್ದನು. ಅಸಾಹೇಲನ ದೇಹವು ನೆಲದ ಮೇಲೆ ಬಿದ್ದಿತ್ತು. ಜನರು ಅವನ ಬಳಿಗೆ ಹೋಗಿ ಅಲ್ಲಿಯೇ ನಿಂತರು.
|
24. ಆದರೆ ಯೋವಾಬ್ ಮತ್ತು ಅಬೀಷೈ ಅಬ್ನೇರನನ್ನು ಅಟ್ಟಿಸಿಕೊಂಡೇ ಹೋದರು. ಅವರು ‘ಅಮ್ಮಾ’ ಬೆಟ್ಟಕ್ಕೆ ಬರುವಷ್ಟರಲ್ಲಿ ಸೂರ್ಯನು ಮುಳುಗಿದನು. (ಗಿಬ್ಯೋನಿನ ಮರಳುಗಾಡಿನ ಮಾರ್ಗದಲ್ಲಿರುವ ಗೀಯದ ಎದುರಿಗಿರುವುದೇ ‘ಅಮ್ಮಾ’ ಬೆಟ್ಟ.)
|
26. ಅಬ್ನೇರನು ಯೋವಾಬನಿಗೆ, “ನಾವು ಎಂದೆಂದೂ ಯುದ್ಧ ಮಾಡಿ ಒಬ್ಬರನ್ನೊಬ್ಬರು ಕೊಲ್ಲಬೇಕೇ? ಇದು ಹಗೆತನದಲ್ಲಿ ಅಂತ್ಯಗೊಳ್ಳುತ್ತದೆಂಬುದು ನಿಜವಾಗಿಯೂ ನಿನಗೆ ತಿಳಿದಿದೆ. ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಲು ನಿನ್ನ ಜನರಿಗೆ ಹೇಳು” ಎಂದು ಕೂಗಿ ಹೇಳಿದನು.
|
27. ಆಗ ಯೋವಾಬನು, “ನೀನು ಒಳ್ಳೆಯ ಮಾತನ್ನೇ ಆಡಿರುವೆ. ನೀನು ಹೀಗೆ ಹೇಳದೆ ಇದ್ದಿದ್ದರೆ, ಯೆಹೋವನಾಣೆಗೂ ಜನರು ನಾಳೆ ಮುಂಜಾನೆವರೆಗೂ ತಮ್ಮ ಸೋದರರನ್ನೇ ಅಟ್ಟಿಸಿಕೊಂಡು ಹೋಗುತ್ತಿದ್ದರು” ಎಂದು ಹೇಳಿದನು.
|
28. ಆಗ ಯೋವಾಬನು ತುತ್ತೂರಿಯನ್ನು ಊದಿದನು. ಅವನ ಜನರು ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದರು. ಅವರು ಇಸ್ರೇಲರ ವಿರುದ್ಧ ಹೋರಾಡಲು ಪ್ರಯತ್ನಿಸಲೇ ಇಲ್ಲ.
|
29. ಅಬ್ನೇರನು ತನ್ನ ಜನರೊಂದಿಗೆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ಪ್ರಯಾಣಮಾಡಿ, ಜೋರ್ಡನ್ ನದಿಯನ್ನು ದಾಟಿ ಮಹನಯಿಮಿಗೆ ಬಂದನು.
|
30. ಅಬ್ನೇರನನ್ನು ಅಟ್ಟಿಸಿಕೊಂಡು ಹೋಗುವುದನ್ನು ನಿಲ್ಲಿಸಿದ ನಂತರ ಯೋವಾಬನು ಹಿಂತಿರುಗಿ ಬಂದನು. ಯೋವಾಬನು ತನ್ನ ಜನರನ್ನೆಲ್ಲ ಒಟ್ಟಾಗಿ ಸೇರಿಸಿದಾಗ, ದಾವೀದನ ಭಟರಲ್ಲಿ ಹತ್ತೊಂಭತ್ತು ಮಂದಿ ಕಾಣಲಿಲ್ಲ. ಅಸಾಹೇಲನು ಸಹ ಕಾಣಲಿಲ್ಲ.
|
31. ಆದರೆ ಅಬ್ನೇರನ ಹಿಂಬಾಲಕರೂ ಬೆನ್ಯಾಮೀನ್ ಕುಟುಂಬದ ಗುಂಪಿನವರೂ ಆದ ಮುನ್ನೂರೈವತ್ತು ಜನರನ್ನು ದಾವೀದನ ಭಟರು ಕೊಂದಿದ್ದರು.
|
32. ದಾವೀದನ ಭಟರು ಅಸಾಹೇಲನ ಶವವನ್ನು ಬೇತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು.
|