1. {ಆಶ್ರಯನಗರಗಳು} PS “ಬೇರೆ ಜನಾಂಗಗಳು ವಾಸಿಸುವ ದೇಶವನ್ನು ನಿಮ್ಮ ದೇವರು ನಿಮಗೆ ಕೊಡುತ್ತಿದ್ದಾನೆ. ಆ ಜನಾಂಗಗಳನ್ನು ಆತನು ನಾಶಮಾಡುತ್ತಾನೆ. ಅವರು ವಾಸಿಸುತ್ತಿದ್ದ ಸ್ಥಳಗಳಲ್ಲಿ ನೀವು ವಾಸಿಸುವಿರಿ. ಅವರ ಮನೆಗಳನ್ನೂ ಪಟ್ಟಣಗಳನ್ನೂ ನೀವು ವಶಪಡಿಸಿಕೊಳ್ಳುವಿರಿ. ಅಂಥಾ ಸಮಯದಲ್ಲಿ
|
2. (2-3) ನಿಮ್ಮ ದೇಶವನ್ನು ನೀವು ಮೂರು ವಿಭಾಗ ಮಾಡಬೇಕು. ಪ್ರತಿಯೊಂದು ವಿಭಾಗದಲ್ಲಿ ನೀವು ಒಂದು ನಗರವನ್ನು ಆರಿಸಬೇಕು. ಅದು ಎಲ್ಲಾ ಜನರಿಗೆ ಹೋಗಲು ಅನುಕೂಲವಾಗಿರಬೇಕು. ಅದಕ್ಕಾಗಿ ನೀವು ರಸ್ತೆಗಳನ್ನು ಮಾಡಬೇಕು. ಆಗ ಯಾವನಾದರೂ ಅಪ್ಪಿತಪ್ಪಿ ಇನ್ನೊಬ್ಬನನ್ನು ಕೊಂದರೆ ಅವನು ರಕ್ಷಣೆಗಾಗಿ ಆ ನಗರಗಳಿಗೆ ಓಡಿಹೋಗಬಹುದು. PEPS
|
4. “ಅಂಥಾ ಮನುಷ್ಯನಿಗೆ ಅನ್ವಯಿಸುವ ನಿಯಮಗಳು ಯಾವುವೆಂದರೆ: ಆ ಮನುಷ್ಯನು ಇನ್ನೊಬ್ಬನನ್ನು ಕೊಂದದ್ದು ಆಕಸ್ಮಿಕವಾಗಿರಬೇಕು; ಕೊಲ್ಲಲ್ಪಟ್ಟವನ ಮೇಲೆ ಅವನಿಗೆ ದ್ವೇಷವಿರಬಾರದು.
|
5. ಇದೊಂದು ಉದಾಹರಣೆ: ಒಬ್ಬನು ಇನ್ನೊಬ್ಬ ವ್ಯಕ್ತಿಯೊಂದಿಗೆ ಅಡವಿಗೆ ಕಟ್ಟಿಗೆ ಕಡಿಯಲು ಹೋಗುತ್ತಾನೆ. ಒಂದು ಮರವನ್ನು ಕಡಿಯಲು ತನ್ನ ಕೊಡಲಿಯನ್ನು ಬೀಸುವಾಗ ಅವನ ಕೊಡಲಿಯು ಕಾವಿನಿಂದ ಕಳಚಿಕೊಂಡು ಪಕ್ಕದಲ್ಲಿ ನಿಂತಿದ್ದವನಿಗೆ ಬಡಿದು ಅವನ ಸಾವಿಗೆ ಕಾರಣವಾದರೆ, ಕೊಡಲಿಯನ್ನು ಬೀಸಿದವನು ಆ ಮೂರು ನಗರಗಳಲ್ಲಿ ಒಂದರಲ್ಲಿ ಆಶ್ರಯವನ್ನು ಪಡೆದುಕೊಂಡು ಸುರಕ್ಷಿತವಾಗಿರಬಹುದು.
|
6. ಆದರೆ ಆ ನಗರವು ತುಂಬಾ ದೂರವಿದ್ದಲ್ಲಿ ಅವನು ಅಲ್ಲಿಗೆ ಸೇರುವ ಮೊದಲೇ ಸತ್ತವನ ಹತ್ತಿರದ ಸಂಬಂಧಿ ಅವನನ್ನು ಹಿಂಬಾಲಿಸಿ ಅವನ ಮೇಲೆ ಮುಯ್ಯಿತೀರಿಸಿಕೊಳ್ಳುವನು. ಅವನ ಮೇಲೆ ಕೋಪಗೊಂಡು ಅವನನ್ನು ಕೊಂದರೆ ನಿಷ್ಕಾರಣವಾಗಿ ಅವನು ಕೊಲ್ಲಲ್ಪಟ್ಟಂತಾಯಿತು. ಯಾಕೆಂದರೆ ಸತ್ತವನನ್ನು ಅವನು ದ್ವೇಷಿಸುತ್ತಿರಲಿಲ್ಲ.
|
8. “ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಿಗೆ ನಿಮ್ಮ ದೇಶವನ್ನು ವಿಸ್ತಾರ ಮಾಡುವುದಾಗಿ ವಾಗ್ದಾನ ಮಾಡಿದನು. ಅವರಿಗೆ ಕೊಡುವುದಾಗಿ ವಾಗ್ದಾನಮಾಡಿದ ದೇಶವನ್ನೆಲ್ಲಾ ನಿಮಗೆ ಕೊಡುವನು.
|
9. ಈ ಹೊತ್ತು ನಾನು ನಿಮಗೆ ಕೊಡುವ ಆಜ್ಞೆಗಳಿಗೆ ನೀವು ವಿಧೇಯರಾದರೆ ಮಾತ್ರ ನಿಮ್ಮ ದೇಶವನ್ನು ಆತನು ವಿಸ್ತರಿಸುವನು. ನೀವು ನಿಮ್ಮ ದೇವರಾದ ಯೆಹೋವನನ್ನು ಯಾವಾಗಲೂ ಪ್ರೀತಿಸಬೇಕು. ದೇವರು ನಿಮ್ಮ ದೇಶದ ಮೇರೆಯನ್ನು ವಿಸ್ತರಿಸಿದಾಗ ನೀವು ಇನ್ನೂ ಮೂರು ಆಶ್ರಯ ನಗರಗಳನ್ನು ಆರಿಸಿಕೊಳ್ಳಬೇಕು.
|
10. ಆಗ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಅಂಥ ನಿರಪರಾಧಿಗಳು ಕೊಲ್ಲಲ್ಪಡುವುದಿಲ್ಲ; ನೀವು ಯಾವ ಮರಣದ ವಿಷಯದಲ್ಲಿಯೂ ದೋಷಿಗಳಾಗಿರುವುದಿಲ್ಲ. PEPS
|
11. “ಆದರೆ ಒಬ್ಬನು ಇನ್ನೊಬ್ಬ ವ್ಯಕ್ತಿಯನ್ನು ದ್ವೇಷಿಸಿದರೆ, ಅವನನ್ನು ಉದ್ದೇಶಪೂರ್ವಕವಾಗಿ ಕೊಂದು ಆಶ್ರಯ ನಗರದೊಳಗೆ ಸುರಕ್ಷಿತನಾಗಿದ್ದಲ್ಲಿ
|
12. ಅವನ ಊರಿನ ಹಿರಿಯರು ಅವನನ್ನು ಆ ಆಶ್ರಯನಗರದೊಳಗಿಂದ ಹಿಡಿದುತಂದು ಕೊಲೆ ಮಾಡಲ್ಪಟ್ಟವನ ಸಮೀಪ ಬಂಧುವಿಗೆ ಒಪ್ಪಿಸಬೇಕು, ಕೊಲೆಗಾರನು ಸಾಯಲೇಬೇಕು.
|
13. ನೀವು ಅವನ ವಿಷಯದಲ್ಲಿ ದುಃಖಪಡಬಾರದು. ಯಾಕೆಂದರೆ ಅವನು ನಿರಪರಾಧಿಯನ್ನು ಕೊಂದ ಅಪರಾಧಿಯಾಗಿದ್ದಾನೆ. ಅವನು ಮಾಡಿದ ಪಾಪವನ್ನು ಇಸ್ರೇಲಿನಿಂದ ತೆಗೆದುಹಾಕಬೇಕು. ಆಗ ನಿಮಗೆ ಶುಭವಾಗುವುದು. PS
|
14. {ಆಸ್ತಿಯ ಮೇರೆಗಳು} PS “ನಿಮ್ಮ ನೆರೆಯವನ ಭೂಮಿಯ ಗಡಿಕಲ್ಲುಗಳ ಸ್ಥಳವನ್ನು ನೀವು ಬದಲಾಯಿಸಬಾರದು. ಹಿಂದಿನ ಕಾಲದಲ್ಲಿ ಜನರು ತಮ್ಮ ಭೂಮಿಯ ಮೇರೆಯನ್ನು ಗುರುತಿಸಲು ನೆಟ್ಟಿರುತ್ತಾರೆ. ಆ ಗಡಿಕಲ್ಲುಗಳು ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ಆ ಭೂಮಿಗೆ ಗುರುತಾಗಿದೆ. PS
|
15. {ಸಾಕ್ಷಿಗಳು} PS “ಒಬ್ಬನು ಕಟ್ಟಳೆಗಳಿಗೆ ವಿರುದ್ಧವಾಗಿ ನಡೆದುಕೊಂಡು ಅಪಾದಿಸಲ್ಪಟ್ಟದ್ದಲ್ಲಿ ಒಬ್ಬನ ಸಾಕ್ಷಿಯಿಂದ ಅವನು ತಪ್ಪಿತಸ್ಥನೆಂದು ತೀರ್ಮಾನಿಸಬಾರದು. ಅವನು ತಪ್ಪಿತಸ್ಥನೆಂದು ತೋರಿಸಲು ಎರಡು ಅಥವಾ ಮೂರು ಸಾಕ್ಷಿಗಳಿರಬೇಕು. PEPS
|
16. “ಒಬ್ಬ ಸಾಕ್ಷಿದಾರನು ಇನ್ನೊಬ್ಬನು ತನಗೆ ಹಾನಿ ಮಾಡಿದ್ದಾನೆಂದು ಸುಳ್ಳುಹೇಳಿ ಅವನನ್ನು ಶಿಕ್ಷೆಗೆ ಒಳಪಡಿಸಲು ಪ್ರಯತ್ನಿಸಿದಾಗ,
|
17. ಆ ಪ್ರಕರಣಕ್ಕೆ ಸೇರಿದವರಿಬ್ಬರೂ ಯೆಹೋವನು ಆರಿಸಿದ ಸ್ಥಳಕ್ಕೆ ಹೋಗಿ ಅಲ್ಲಿ ಕಾರ್ಯತತ್ಪರರಾಗಿರುವ ಯಾಜಕರನ್ನು ಮತ್ತು ನ್ಯಾಯಾಧೀಶರನ್ನು ಕಾಣಬೇಕು.
|
18. ನ್ಯಾಯಾಧೀಶರು ಅವರನ್ನು ಪ್ರಶ್ನಿಸಿ ಸರಿಯಾಗಿ ವಿಚಾರಿಸಬೇಕು. ಸಾಕ್ಷಿಯವನು ಸುಳ್ಳು ಹೇಳಿದ್ದಾನೆಂಬುದನ್ನು ಅವರು ಕಂಡುಹಿಡಿದರೆ
|
19. ಆ ಸಾಕ್ಷಿಯವನಿಗೆ ಶಿಕ್ಷೆ ವಿಧಿಸಬೇಕು. ತನ್ನ ವಿರೋಧಿಗೆ ಯಾವ ಶಿಕ್ಷೆ ಬರಬೇಕೆಂಬುದಾಗಿ ಅವನು ಸುಳ್ಳಾಡಿದ್ದನೋ, ಅದೇ ಶಿಕ್ಷೆಯನ್ನು ಅವನಿಗೆ ವಿಧಿಸಬೇಕು. ಈ ರೀತಿಯಾಗಿ ಆ ದುಷ್ಟತನವನ್ನು ನಿಮ್ಮ ಕುಲಗಳಿಂದ ತೆಗೆದುಹಾಕಬೇಕು.
|
21. “ಅಪರಾಧ ಎಷ್ಟು ಭಯಂಕರವಾಗಿರುವುದೋ ಅಷ್ಟೇ ಭಯಂಕರ ಶಿಕ್ಷೆಯೂ ಇರಬೇಕು. ತಪ್ಪು ಮಾಡಿದವನನ್ನು ಶಿಕ್ಷಿಸಲು ಬೇಸರಪಟ್ಟುಕೊಳ್ಳಬಾರದು. ಒಬ್ಬನು ಪ್ರಾಣಹತ್ಯೆ ಮಾಡಿದರೆ ಅವನ ಪ್ರಾಣವೂ ತೆಗೆಯಲ್ಪಡಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು ಎಂಬ ನೀತಿಯನ್ನು ಅನುಸರಿಸಬೇಕು. PE
|