2. ನನ್ನ ಬೋಧನೆಯು ಮಳೆಯಂತೆ ಬರುವುದು.
ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು. |
4. “ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು.
ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ. |
6. ಹೀಗೆ ಆತನು ನಿಮಗೆ ಮಾಡಿದ ಒಳ್ಳೆಯದಕ್ಕೆ ಉಪಕಾರ ತೋರಿಸುವಿರಾ?
ಇಲ್ಲ! ನೀವು ಬುದ್ಧಿಹೀನರಾಗಿದ್ದೀರಿ. ಯೆಹೋವನು ನಿಮ್ಮ ತಂದೆಯಾಗಿದ್ದಾನೆ. ಆತನೇ ನಿಮ್ಮನ್ನು ನಿರ್ಮಿಸಿದಾತನು. ಆತನೇ ನಿಮ್ಮನ್ನು ಉಂಟುಮಾಡಿದಾತನು. ಆತನೇ ಆಧಾರ ನೀಡುವಾತನು. |
7. “ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ.
ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು. |
8. ಪರಲೋಕದಲ್ಲಿರುವ ದೇವರು ಭೂಮಿಯ ಮೇಲಿದ್ದ ಜನರನ್ನು ಪ್ರತ್ಯೇಕಿಸಿದನು.
ಪ್ರತಿಯೊಂದು ಜನಾಂಗಕ್ಕೆ ಅದರದೇ ಆದ ದೇಶವನ್ನು ಕೊಟ್ಟನು. ಅದಕ್ಕೆ ಮೇರೆಯನ್ನು ಆತನು ಮಾಡಿಕೊಟ್ಟನು. ಇಸ್ರೇಲರಲ್ಲಿ ಎಷ್ಟು ಜನರು ಇದ್ದಾರೋ ಅಷ್ಟು ಜನಾಂಗಗಳಿವೆ. |
10. “ಮರುಭೂಮಿಯಲ್ಲಿ ಯೆಹೋವನು ಇಸ್ರೇಲನನ್ನು ಕಂಡನು.
ಅದು ಬರಿದಾದ ಗಾಳಿ ಬೀಸುತ್ತಿದ್ದ ಸ್ಥಳವಾಗಿತ್ತು. ಯೆಹೋವನು ಅದನ್ನು ಸುತ್ತುವರಿದು ಇಸ್ರೇಲನ್ನು ಸಂರಕ್ಷಿಸಿದನು; ತನ್ನ ಕಣ್ಣುಗುಡ್ಡೆಯಂತೆ ಅವರನ್ನು ಕಾಪಾಡಿದನು. |
11. ಇಸ್ರೇಲರಿಗೆ ಯೆಹೋವನು ಹದ್ದಿನಂತಿರುವನು!
ಹದ್ದು ತನ್ನ ಮರಿಗಳಿಗೆ ಹಾರಲು ಕಲಿಸಲು ಗೂಡಿನಿಂದ ಕೆಳಕ್ಕೆ ತಳ್ಳುವುದು. ಮರಿಗಳು ಕೆಳಗೆ ಬೀಳದಂತೆ ಅವುಗಳ ಜೊತೆಯಲ್ಲಿ ಹಾರಾಡುವುದು. ಅವುಗಳು ಬೀಳುವಾಗ ತನ್ನ ರಕ್ಕೆಯನ್ನು ಚಾಚಿ ಬೀಳದಂತೆ ಮಾಡುವದು. ನಂತರ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯುವುದು. ಯೆಹೋವನು ಅದರಂತೆಯೇ. |
13. ಬೆಟ್ಟಗುಡ್ಡಗಳ ಪ್ರಾಂತ್ಯವನ್ನು ವಶಪಡಿಸಲು ಇಸ್ರೇಲನ್ನು ನಡೆಸಿದನು.
ಹೊಲದ ಬೆಳೆಯನ್ನು ಇಸ್ರೇಲ್ ಕೊಯಿಲು ಮಾಡಿದನು. ಬಂಡೆಯಿಂದ ಜೇನನ್ನು ಯೆಹೋವನು ಇಸ್ರೇಲಿಗೆ ಕೊಟ್ಟನು. ಗಟ್ಟಿಯಾದ ಬಂಡೆಯಿಂದ ಎಣ್ಣೆಯು ಹೊರಡುವಂತೆ ಮಾಡಿದನು. |
14. ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು.
ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು. |
15. “ಆದರೆ ಯೆಶುರೂನು ಕೊಬ್ಬಿದನು; ಕೊಬ್ಬಿದ ಹೋರಿಯಂತೆ ಒದ್ದನು;
ಅವನು ಚೆನ್ನಾಗಿ ತಿಂದು ಕೊಬ್ಬಿ ಊದಿಕೊಂಡನು; ತನ್ನ ನಿರ್ಮಾಣಿಕನಾದ ಯೆಹೋವನನ್ನು ತೊರೆದನು; ತನ್ನನ್ನು ಸಂರಕ್ಷಿಸಿದ ಬಂಡೆಯಿಂದ ಓಡಿಹೋದನು; |
16. ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು.
ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು. |
17. ಅವರು ದೆವ್ವಗಳಿಗೆ ಯಜ್ಞವನ್ನರ್ಪಿಸಿದರು. ಅವುಗಳು ನಿಜ ದೇವರುಗಳಲ್ಲ.
ಅವುಗಳು ಮಾಡಲ್ಪಟ್ಟ ದೇವರುಗಳೆಂದು ಅವರಿಗೆ ಗೊತ್ತಿರಲಿಲ್ಲ. ಅವುಗಳು ಕೈಯಿಂದ ಮಾಡಲ್ಪಟ್ಟ ದೇವರುಗಳು. ಅವರ ಪೂರ್ವಿಕರಿಗೆ ತಿಳಿಯದಂಥ ದೇವರುಗಳು. |
18. ನೀವು ನಿಮ್ಮನ್ನು ನಿರ್ಮಿಸಿದ ಬಂಡೆಯಂತಿರುವ ದೇವರನ್ನು ತೊರೆದುಬಿಟ್ಟಿರಿ;
ನಿಮಗೆ ಪ್ರಾಣವನ್ನು ಕೊಟ್ಟ ದೇವರನ್ನು ನೀವು ಮರೆತುಬಿಟ್ಟಿರಿ. |
20. ಆಗ ಯೆಹೋವನು, ‘ನಾನು ಅವರಿಗೆ ವಿಮುಖನಾಗುವೆನು.
ಆಗ ಅವರಿಗೇನು ಸಂಭವಿಸುವುದೋ ನೋಡೋಣ. ಅವರು ಎದುರುಬೀಳುವ ಜನರಾಗಿದ್ದಾರೆ. ಅವರು ತಮ್ಮ ಪಾಠಗಳನ್ನು ಕಲಿಯದ ಮಕ್ಕಳಂತಿದ್ದಾರೆ. |
21. ಅವರು ದೆವ್ವಗಳನ್ನು ದೇವರನ್ನಾಗಿ ಮಾಡಿ ನನ್ನಲ್ಲಿ ಅಸೂಯೆಯನ್ನು ಉಂಟುಮಾಡಿದರು. ಆ ವಿಗ್ರಹಗಳು ನಿಜವಾದ ದೇವರುಗಳಲ್ಲ!
ಅವರು ಪ್ರಯೋಜನವಿಲ್ಲದ ವಿಗ್ರಹಗಳನ್ನು ಮಾಡಿ ನನ್ನನ್ನು ಸಿಟ್ಟಿಗೆಬ್ಬಿಸಿದರು. ಆದ್ದರಿಂದ ನಿಜವಾದ ಜನಾಂಗವಲ್ಲದವರಿಂದ ನಾನು ಅವರಲ್ಲಿ ಈರ್ಷೆಯನ್ನು ಉಂಟು ಮಾಡುವೆನು. ಮೂರ್ಖ ಜನಾಂಗದಿಂದ ಅವರನ್ನು ಸಿಟ್ಟಿಗೆಬ್ಬಿಸುವೆನು. |
22. ನನ್ನ ಕೋಪವು ಬೆಂಕಿಯಂತೆ ದಹಿಸುವುದು;
ಪಾತಾಳವನ್ನು ಸುಡುವುದು. ಭೂಮಿಯನ್ನೂ ಅದರಲ್ಲಿರುವ ಸಕಲ ವಸ್ತುಗಳನ್ನೂ ಸುಡುವುದು. ಪರ್ವತಗಳ ಬುಡದ ಕೆಳಗೂ ದಹಿಸುವುದು. |
24. ಹಸಿವೆಯಿಂದ ಅವರು ಕ್ಷೀಣವಾಗುವರು;
ಭಯಂಕರ ವ್ಯಾಧಿಯಿಂದ ಅವರು ನಾಶವಾಗುವರು. ಕಾಡುಪ್ರಾಣಿಗಳನ್ನು ಅವರ ಮಧ್ಯೆ ಕಳುಹಿಸುವೆನು. ವಿಷಸರ್ಪಗಳೂ ಹಲ್ಲಿಗಳೂ ಅವರನ್ನು ಕಚ್ಚುವವು. |
25. ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು.
ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು. |
26. “ ‘ನಾನು ಇಸ್ರೇಲರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಲು ಯೋಚಿಸಿದೆನು.
ಲೋಕದಲ್ಲಿ ಅವರ ಹೆಸರು ಉಳಿಯದಂತೆ ಮಾಡುವೆನು ಎಂದು ನೆನಸಿದೆನು. |
27. ಆದರೆ ಅವರ ವೈರಿಗಳು ಏನು ಹೇಳುತ್ತಾರೆಂಬುದು ನನಗೆ ಗೊತ್ತಿದೆ.
ವೈರಿಯು ಅರ್ಥಮಾಡಿಕೊಳ್ಳುವುದಿಲ್ಲ, ಅವರಿಗೆ ವಿಷಯವು ತಿಳಿಯದು. ಅವರು ಜಂಬದಿಂದ ಹೀಗೆ ಹೇಳುವರು, “ಯೆಹೋವನು ಇಸ್ರೇಲನ್ನು ನಾಶಮಾಡಲಿಲ್ಲ. ನಾವು ನಮ್ಮ ಬಲದಿಂದಲೇ ಅವರನ್ನು ಬಡಿದುಹಾಕಿದೆವು.’ ” |
30. ಒಬ್ಬನು ಸಾವಿರ ಮಂದಿಯನ್ನು ಓಡಿಸಬಲ್ಲನೇ?
ಇಬ್ಬರು ಹತ್ತು ಸಾವಿರ ಮಂದಿಯನ್ನು ಓಡಿಸುವರೇ? ಯೆಹೋವನು ಅವರನ್ನು ಅವರ ಶತ್ರುಗಳಿಗೆ ಒಪ್ಪಿಸುವಾಗ ಹಾಗೆಯೇ ಆಗುವುದು, ಅವರ ಬಂಡೆಯಾದ ದೇವರು ಅವರನ್ನು ಗುಲಾಮರನ್ನಾಗಿ ಮಾರುವನು; |
34. “ಯೆಹೋವನು ಹೀಗೆನ್ನುತ್ತಾನೆ: ‘ಆ ಶಿಕ್ಷೆಯನ್ನು ನಾನು ಜೋಪಾನವಾಗಿಟ್ಟಿದ್ದೇನೆ.
ಅದನ್ನು ನಾನು ನನ್ನ ಉಗ್ರಾಣದಲ್ಲಿ ಸುರಕ್ಷಿತವಾಗಿರಿಸಿದ್ದೇನೆ. |
35. ಅವರ ದುಷ್ಕೃತ್ಯಗಳಿಗಾಗಿ ನಾನು ಅವರನ್ನು ಶಿಕ್ಷಿಸುವೆನು.
ಅವರು ಜಾರಿ ಕೆಟ್ಟಕಾರ್ಯಗಳನ್ನು ಮಾಡಿದಾಗ ನಾನು ಅವರನ್ನು ಶಿಕ್ಷಿಸುವೆನು. ಅವರ ಮಹಾಸಂಕಟ ಕಾಲವು ಹತ್ತಿರವೇ ಇದೆ. ಅವರಿಗೋಸ್ಕರ ಸಿದ್ಧವಾಗಿರುವ ಶಿಕ್ಷೆಯು ಬೇಗನೆ ಬರುತ್ತದೆ.’ |
36. “ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು.
ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರಿಸುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು. |
37. ಆಗ ಯೆಹೋವನು ಹೀಗೆನ್ನುವನು: ‘ನಿಮ್ಮ ಸುಳ್ಳುದೇವರುಗಳೆಲ್ಲಿ?
ನಿಮ್ಮ ಸಂರಕ್ಷಣೆಗಾಗಿ ನೀವು ಆಶ್ರಯಿಸಿಕೊಂಡಿದ್ದ “ಬಂಡೆ” ಎಲ್ಲಿ? |
38. ನಿಮ್ಮ ಯಜ್ಞಗಳ ಕೊಬ್ಬನ್ನು ಆ ಸುಳ್ಳುದೇವರುಗಳು ತಿಂದುಬಿಟ್ಟವು.
ನೀವು ಅರ್ಪಿಸಿದ ದ್ರಾಕ್ಷಾರಸವನ್ನು ಕುಡಿದುಬಿಟ್ಟವು. ಆ ದೇವರುಗಳೆದ್ದು ನಿಮಗೆ ಸಹಾಯಮಾಡಲಿ. ಅವುಗಳು ನಿಮ್ಮನ್ನು ಸಂರಕ್ಷಿಸಲಿ. |
39. “ ‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ.
ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ. |
40. ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ.
ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು. |
41. ಥಳಥಳಿಸುವ ನನ್ನ ಖಡ್ಗವನ್ನು ನಾನು ಹದಮಾಡುವೆನು.
ನನ್ನ ವೈರಿಗಳನ್ನು ಶಿಕ್ಷಿಸಲು ನಾನದನ್ನು ಉಪಯೋಗಿಸುವೆನು. ನಾನು ಅವರಿಗೆ ಯೋಗ್ಯವಾದ ದಂಡನೆಯನ್ನು ಕೊಡುವೆನು ಎಂದು ನಾನು ಆಣೆಯಿಟ್ಟು ಹೇಳುತ್ತೇನೆ. |
42. ನನ್ನ ವೈರಿಗಳು ಕೊಲ್ಲಲ್ಪಡುವರು ಮತ್ತು ಸೆರೆಯಾಳುಗಳಾಗಿ ಒಯ್ಯಲ್ಪಡುವರು.
ನನ್ನ ಬಾಣಗಳು ಅವರ ರಕ್ತದಿಂದ ಮುಚ್ಚಲ್ಪಟ್ಟಿವೆ. ನನ್ನ ಖಡ್ಗವು ಅವರ ಸೈನಿಕರ ತಲೆಯನ್ನು ಕತ್ತರಿಸುವುದು.’ |
43. “ಭೂಲೋಕವೆಲ್ಲಾ ದೇವಜನರಿಗಾಗಿ ಸಂತೋಷಿಸುವದು;
ಯಾಕೆಂದರೆ ಆತನು ಅವರನ್ನು ಸಾಯಿಸುವನು; ತನ್ನ ಸೇವಕರನ್ನು ಸಂಹರಿಸುವವರನ್ನು ಶಿಕ್ಷಿಸುವನು; ತನ್ನ ವೈರಿಗಳಿಗೆ ತಕ್ಕ ದಂಡನೆ ಕೊಡುವನು. ತನ್ನ ದೇಶವನ್ನೂ ತನ್ನ ಜನರನ್ನೂ ಶುದ್ಧಿ ಮಾಡುವನು.” PS |
44. {ಮೋಶೆಯು ಜನರಿಗೆ ಹಾಡನ್ನು ಕಲಿಸಿದನು} PS ಮೋಶೆಯು ಈ ಹಾಡಿನ ಎಲ್ಲಾ ಪದಗಳನ್ನು ಇಸ್ರೇಲರು ಕೇಳುವಂತೆ ಹೇಳಿದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಂಗಡ ಇದ್ದನು.
|
46. ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.
|
47. ಈ ಬೋಧನೆಗಳು ಮುಖ್ಯವಾದವುಗಳಲ್ಲವೆಂದು ತಿಳಿಯಬೇಡಿ. ಅವು ನಿಮ್ಮ ಜೀವವಾಗಿವೆ. ನೀವು ತೆಗೆದುಕೊಳ್ಳಲು ಸಿದ್ಧರಾಗಿರುವ ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ದೇಶದಲ್ಲಿ ಈ ಉಪದೇಶಗಳ ಮೂಲಕ ಬಹುಕಾಲ ಬದುಕುವಿರಿ.” PS
|
49. “ಮೋವಾಬ್ ಪ್ರಾಂತ್ಯದಲ್ಲಿರುವ ಅಬಾರೀಮ್ ಬೆಟ್ಟದ ಸಾಲಿಗೆ ಹೋಗಿ ಅಲ್ಲಿ ನೆಬೋ ಬೆಟ್ಟವನ್ನೇರು. ಇದು ಜೆರಿಕೊ ಕೋಟೆಗೆ ಎದುರಾಗಿ ಇದೆ. ಅಲ್ಲಿಂದ ನಾನು ಇಸ್ರೇಲರಿಗೆ ಕೊಡುವ ಕಾನಾನ್ ದೇಶವನ್ನು ನೀನು ನೋಡುವಿ.
|
51. ಯಾಕೆಂದರೆ ನೀವಿಬ್ಬರೂ ನನಗೆ ವಿರುದ್ಧವಾಗಿ ಪಾಪಮಾಡಿದಿರಿ. ಚಿನ್ ಮರುಭೂಮಿಯಲ್ಲಿರುವ ಕಾದೇಶ್ ಬಳಿಯಲ್ಲಿದ್ದ ಮೆರೀಬಾ ಎಂಬ ಸ್ಥಳದ ನೀರಿನ ಬಳಿಯಲ್ಲಿ ನೀನು ಜನರ ಮುಂದೆ ನನ್ನನ್ನು ಅವಮಾನಪಡಿಸಿದೆ. ನೀನು ನನ್ನನ್ನು ಮಹಾಪವಿತ್ರನೆಂದು ಗೌರವಿಸಬೇಕಿತ್ತು, ಆದರೆ ನೀನು ಗೌರವಿಸಲಿಲ್ಲ.
|