1. ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶಮಾನವಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.
|
3. ರಾಜನಿಗೆ ನಿಮ್ಮ ಆಲೋಚನೆಗಳನ್ನು ತಿಳಿಸಲು ಭಯಪಡಬಾರದು; ನೀವು ಯಾವ ತಪ್ಪಿಗೂ ಬೆಂಬಲ ಕೊಡಬಾರದು. ಆದರೆ ರಾಜನು ತನಗೆ ಇಷ್ಟಬಂದಂತೆ ಆಜ್ಞೆಗಳನ್ನು ಕೊಡುತ್ತಾನೆಂಬುದು ಜ್ಞಾಪಕದಲ್ಲಿರಲಿ.
|
5. ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.
|
6. ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು.
|
7. ಯಾಕೆಂದರೆ ಮುಂದೆ ಏನಾಗುವುದೊ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ.
|
8. ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟು ಹೋಗುವುದಿಲ್ಲ.
|
9. ನಾನು ಇವುಗಳನ್ನೆಲ್ಲಾ ನೋಡಿ ಈ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಇನ್ನೊಬ್ಬರ ಮೇಲೆ ಅಧಿಪತಿಗಳಾಗಿರಲು ಪ್ರಯಾಸ ಪಡುತ್ತಾರೆ. ಇದು ಅವರಿಗೆ ಹಾನಿಕರ.
|
10. ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ.
|
12. ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹು ಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.
|
13. ದುಷ್ಟರಿಗೆ ದೇವರಲ್ಲಿ ಭಯಭಕ್ತಿಯಿಲ್ಲದಿರುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ; ಅವರ ಜೀವಿತವು ಸಾಯಂಕಾಲದ ನೆರಳಿನಂತೆ ಇಲ್ಲವಾಗುವುದು.
|
14. ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ. ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ.
|
15. ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.
|
16. ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.
|
17. ಇದಲ್ಲದೆ ದೇವರ ಅನೇಕ ಕಾರ್ಯಗಳನ್ನು ಸಹ ನಾನು ನೋಡಿದ್ದೇನೆ. ಭೂಮಿಯ ಮೇಲೆ ದೇವರು ಮಾಡುವ ಕಾರ್ಯಗಳನ್ನೆಲ್ಲಾ ಜನರು ಅರ್ಥಮಾಡಿಕೊಳ್ಳಲಾರರು. ಒಬ್ಬನು ಅರ್ಥಮಾಡಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅವನು ಅರ್ಥಮಾಡಿಕೊಳ್ಳಲಾರನು. ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬಲ್ಲೆನೆಂದು ಜ್ಞಾನಿಯು ಹೇಳಿಕೊಂಡರೂ ಅದು ಸತ್ಯವಲ್ಲ. ಅವುಗಳನ್ನೆಲ್ಲ ಯಾರೂ ಅರ್ಥಮಾಡಿಕೊಳ್ಳಲಾರರು.
|