1. ಮೋಶೆ ಆರೋನರು ಜನರೊಡನೆ ಮಾತಾಡಿದ ನಂತರ ಫರೋಹನ ಬಳಿಗೆ ಹೋಗಿ, “ಇಸ್ರೇಲರ ದೇವರಾದ ಯೆಹೋವನು ನಿನಗೆ, ‘ನನ್ನ ಜನರು ಅರಣ್ಯದೊಳಗೆ ಹೋಗಿ ಜಾತ್ರೆ ನಡೆಸಲು ಅಪ್ಪಣೆಕೊಡಬೇಕು’ ಎನ್ನುತ್ತಾನೆ” ಎಂದು ಹೇಳಿದರು.
|
2. ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.
|
3. ಅದಕ್ಕೆ ಮೋಶೆ ಆರೋನರು, “ಇಬ್ರಿಯರ ದೇವರು ನಮ್ಮ ಸಂಗಡ ಮಾತಾಡಿದ್ದಾನೆ. ಆದ್ದರಿಂದ ನಾವು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವೆವು. ಇಲ್ಲವಾದರೆ ಆತನು ನಮ್ಮನ್ನು ಕಾಯಿಲೆಯಿಂದಲೋ ಕತ್ತಿಯಿಂದಲೋ ಸಂಹರಿಸುವನು” ಎಂದು ಹೇಳಿದರು.
|
4. ಆದರೆ ಈಜಿಪ್ಟಿನ ರಾಜನು ಅವರಿಗೆ, “ಮೋಶೆ ಆರೋನರೇ, ನೀವು ಕೆಲಸಗಾರರಿಗೆ ತೊಂದರೆ ಮಾಡುತ್ತಿದ್ದೀರಿ, ಅವರು ತಮ್ಮ ಕೆಲಸ ಮಾಡಲಿ! ನೀವು ನಿಮ್ಮ ಕೆಲಸವನ್ನು ಮಾಡಿ!
|
7. “ಇಟ್ಟಿಗೆಗಳನ್ನು ಮಾಡುವುದಕ್ಕೆ ಬೇಕಾದ ಹುಲ್ಲನ್ನು ನೀವು ಜನರಿಗೆ ಇಲ್ಲಿಯವರೆಗೆ ಕೊಟ್ಟಿದ್ದೀರಿ. ಆದರೆ ಈಗ ಇಟ್ಟಿಗೆಗಳನ್ನು ಮಾಡಲು ಅವರೇ ಹುಲ್ಲನ್ನು ಕಂಡುಕೊಳ್ಳಬೇಕೆಂದು ಅವರಿಗೆ ಹೇಳಿರಿ.
|
8. ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ.
|
9. ಈ ಜನರಿಗೆ ಇನ್ನೂ ಕಷ್ಟಕರವಾದ ಕೆಲಸವನ್ನು ಕೊಡಿರಿ. ಅವರು ಕಾರ್ಯಮಗ್ನರಾಗಿರುವಂತೆ ನೋಡಿಕೊಳ್ಳಿರಿ. ಆಗ ಅವರಿಗೆ ಮೋಶೆಯ ಸುಳ್ಳುಗಳನ್ನು ಕೇಳುವುದಕ್ಕೆ ಸಮಯವಿರುವುದಿಲ್ಲ” ಎಂದು ಹೇಳಿದನು.
|
10. ಆದ್ದರಿಂದ ಈಜಿಪ್ಟಿನ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು ಮತ್ತು ಮೇಸ್ತ್ರಿಗಳು ಇಸ್ರೇಲರ ಬಳಿಗೆ ಬಂದು, “ಫರೋಹನು ಇಟ್ಟಿಗೆಗಳನ್ನು ಮಾಡಲು ನಿಮಗೆ ಹುಲ್ಲು ಕೊಡುವುದಿಲ್ಲವೆಂದು ತೀರ್ಮಾನಿಸಿದ್ದಾನೆ.
|
11. ಆದ್ದರಿಂದ ನೀವೇ ಹೋಗಿ ಹುಲ್ಲನ್ನು ಕಂಡುಕೊಳ್ಳಿರಿ. ಆದರೆ ನೀವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಹೇಳಿದರು.
|
13. ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳು, ಜನರಿಂದ ಕಷ್ಟಕರವಾದ ಕೆಲಸಗಳನ್ನು ಬಲವಂತದಿಂದ ಮಾಡಿಸುತ್ತಲೇ ಇದ್ದರು. ಮೊದಲು ಅವರಿಗೆ ಹುಲ್ಲನ್ನು ಕೊಟ್ಟಿದ್ದಾಗ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲು ಬಲವಂತದಿಂದ ಮಾಡಿಸಿದರು.
|
14. ಈಜಿಪ್ಟಿನ ಈ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಆರಿಸಿ ಜನರು ಮಾಡಿದ ಕೆಲಸಕ್ಕೆ ಅವರನ್ನು ಜವಾಬ್ದಾರರನ್ನಾಗಿ ಮಾಡಿದರು. ಈಜಿಪ್ಟಿನ ಅಧಿಕಾರಿಗಳು ಇಬ್ರಿಯ ಮೇಸ್ತ್ರಿಗಳನ್ನು ಹೊಡೆದು, “ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಯಾಕೆ ಮಾಡುತ್ತಿಲ್ಲ? ಹಿಂದೆ ನೀವು ಮಾಡಲು ಸಾಧ್ಯವಾಗಿದ್ದರೆ, ಈಗಲೂ ನೀವು ಮಾಡಬಹುದು” ಎಂದು ಹೇಳಿದರು.
|
16. ನೀನು ನಮಗೆ ಹುಲ್ಲು ಕೊಡುವುದಿಲ್ಲ. ಆದರೆ ನಾವು ಮೊದಲು ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕೆಂದು ನಮಗೆ ಅಪ್ಪಣೆಯಾಗಿರುವುದರಿಂದ ನಾವು ಅಧಿಕಾರಿಗಳಿಂದ ಹೊಡೆತ ತಿನ್ನಬೇಕಾಯಿತು. ಹೀಗೆ ನಿನ್ನ ಜನರು ತಪ್ಪು ಮಾಡುತ್ತಿದ್ದಾರೆ” ಎಂದು ದೂರು ಹೇಳಿದರು.
|
17. ಫರೋಹನು, “ನೀವು ಸೋಮಾರಿಗಳು. ನಿಮಗೆ ಕೆಲಸ ಮಾಡಲು ಇಷ್ಟವಿಲ್ಲ. ಆದುದರಿಂದ ನಿಮ್ಮನ್ನು ಹೋಗಗೊಡಿಸಬೇಕೆಂದು ನೀವು ನನ್ನನ್ನು ಕೇಳುತ್ತೀರಿ. ಇಲ್ಲಿಂದ ಹೊರಟು ಹೋಗಿ ಯೆಹೋವನಿಗೆ ಯಜ್ಞಗಳನ್ನು ಮಾಡಬೇಕೆಂದು ಅಪೇಕ್ಷಿಸುತ್ತೀರಿ.
|
18. ಈಗ ನಿಮ್ಮ ಕೆಲಸಕ್ಕೆ ಹೋಗಿರಿ! ನಾವು ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೆ ನೀವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಮಾಡಬೇಕು” ಎಂದು ಉತ್ತರಿಸಿದನು.
|
19. ಇಬ್ರಿಯ ಮೇಸ್ತ್ರಿಗಳಿಗೆ ತಾವು ತೊಂದರೆಯಲ್ಲಿದ್ದೇವೆಂದು ತಿಳಿಯಿತು. ತಾವು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ತಮ್ಮಿಂದ ಮಾಡಲಾಗುವುದಿಲ್ಲವೆಂದು ಅವರಿಗೆ ಗೊತ್ತಿತ್ತು.
|
21. “ನಮಗೆ ಹೋಗಲು ಅಪ್ಪಣೆಕೊಡಬೇಕೆಂದು ನೀವು ಫರೋಹನನ್ನು ಕೇಳಿ ನಮಗೆ ಕೆಟ್ಟದ್ದನ್ನು ಮಾಡಿದಿರಿ. ಫರೋಹನು ಮತ್ತು ಅವನ ಅಧಿಕಾರಿಗಳು ನಮ್ಮನ್ನು ದ್ವೇಷಿಸುವಂತೆ ನೀವು ಮಾಡಿದ್ದರಿಂದ ಯೆಹೋವನು ನಿಮಗೆ ತೀರ್ಪು ನೀಡಲಿ. ಅವರು ನಮ್ಮನ್ನು ಕೊಲ್ಲುವುದಕ್ಕೆ ನೀವು ಅವಕಾಶ ಮಾಡಿಕೊಟ್ಟಿರಿ” ಎಂದು ಹೇಳಿದರು.
|
22. ಆಗ ಮೋಶೆಯು ಯೆಹೋವನಿಗೆ ಪ್ರಾರ್ಥಿಸಿ, “ಯೆಹೋವನೇ, ನಿನ್ನ ಜನರಿಗೆ ಈ ಕೇಡನ್ನು ಏಕೆ ಮಾಡಿದೆ? ನನ್ನನ್ನು ಯಾಕೆ ಇಲ್ಲಿಗೆ ಕಳುಹಿಸಿದೆ?
|
23. ನಾನು ಫರೋಹನ ಬಳಿಗೆ ಹೋಗಿ ನೀನು ಹೇಳಿದ್ದನ್ನೇ ತಿಳಿಸಿದೆ. ಆದರೆ ಅಂದಿನಿಂದ ಅವನು ಜನರನ್ನು ಕೀಳಾಗಿ ಕಾಣುತ್ತಿದ್ದಾನೆ. ಅಲ್ಲದೆ ನೀನೂ ನಿನ್ನ ಜನರಿಗೆ ಸಹಾಯ ಮಾಡುತ್ತಿಲ್ಲ” ಅಂದನು.
|