ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಹಬಕ್ಕೂಕ್ಕ
1. ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ.
2. ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವಿ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ.
3. ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುತ್ತೀ.
4. ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದುದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.
5. ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವಿ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವಿ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ.
6. ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶ ಮಾಡಿಕೊಳ್ಳುವರು.
7. ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟಬಂದ ಹಾಗೆ ಮಾಡುವರು; ಇಷ್ಟಬಂದ ಕಡೆಗೆ ಹೋಗುವರು.
8. ಅವರ ಕುದುರೆಗಳು ಚಿರತೆಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.
9. ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.
10. “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.
11. ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”
12. ಆಗ ಹಬಕ್ಕೂಕನು ಹೇಳಿದ್ದೇನೆಂದರೆ, “ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿದ್ದೀ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿದ್ದೀ.
13. ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೇ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವಿ?
14. “ಸಮುದ್ರದಲ್ಲಿರುವ ಮೀನುಗಳಂತೆ ನೀನು ಜನರನ್ನು ಸೃಷ್ಟಿಸಿದ್ದೀ. ಅವರು ಒಬ್ಬ ನಾಯಕನಿಂದ ಸಮುದ್ರಪ್ರಾಣಿಗಳಂತಿದ್ದಾರೆ,
15. ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.
16. ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೇ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.
17. ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶ ಮಾಡುತ್ತಲೇ ಇರುವನೋ?

Notes

No Verse Added

History

No History Found

Total 3 Chapters, Current Chapter 1 of Total Chapters 3
1 2 3
ಹಬಕ್ಕೂಕ್ಕ 1
1. ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ.
2. ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವಿ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ.
3. ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುತ್ತೀ.
4. ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದುದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ.
5. ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವಿ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವಿ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ.
6. ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶ ಮಾಡಿಕೊಳ್ಳುವರು.
7. ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟಬಂದ ಹಾಗೆ ಮಾಡುವರು; ಇಷ್ಟಬಂದ ಕಡೆಗೆ ಹೋಗುವರು.
8. ಅವರ ಕುದುರೆಗಳು ಚಿರತೆಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು.
9. ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ.
10. “ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು.
11. ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.”
12. ಆಗ ಹಬಕ್ಕೂಕನು ಹೇಳಿದ್ದೇನೆಂದರೆ, “ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿದ್ದೀ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿದ್ದೀ.
13. ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೇ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವಿ?
14. “ಸಮುದ್ರದಲ್ಲಿರುವ ಮೀನುಗಳಂತೆ ನೀನು ಜನರನ್ನು ಸೃಷ್ಟಿಸಿದ್ದೀ. ಅವರು ಒಬ್ಬ ನಾಯಕನಿಂದ ಸಮುದ್ರಪ್ರಾಣಿಗಳಂತಿದ್ದಾರೆ,
15. ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು.
16. ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೇ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು.
17. ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶ ಮಾಡುತ್ತಲೇ ಇರುವನೋ?
Total 3 Chapters, Current Chapter 1 of Total Chapters 3
1 2 3
×

Alert

×

kannada Letters Keypad References