1. ಆದುದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಟಕಾರ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.
|
2. ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.
|
7. ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.
|
8. ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.
|
9. ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ.
|
10. ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.
|
11. ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.
|
12. ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.
|
13. ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.
|
14. ಆತನು ಅವನಿಗೆ, “ನಾನು ನಿಜವಾಗಿಯೂ ನಿನ್ನನ್ನು ಆಶೀರ್ವದಿಸುತ್ತೇನೆ. ಅನೇಕಾನೇಕ ಸಂತತಿಗಳನ್ನು ನಿನಗೆ ದಯಪಾಲಿಸುವೆನು” ಎಂದು ಹೇಳಿದನು.
|
16. ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.
|
17. ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.
|
18. ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.
|
19. ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.
|
20. ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನ ಯಾಜಕನಾಗಿದ್ದಾನೆ.
|