ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
1. ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಆ ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.
2. ಆ ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ.
3. ಆ ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ಆ ದೇಶಕ್ಕೆ ಸಂಭವಿಸುವದನ್ನು ನೋಡುವರು. ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಆ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.
4. ಯೆಹೋವನು ಇಂತೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿ ಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.
5. ಆಗ ಭಯಂಕರವಾದ ಒಂದು ಘಟನೆಯು ನಡೆಯುವದು. ಅದು ಪುಷ್ಪಗಳು ಅರಳುವ ಕಾಲದ ನಂತರ ನಡೆಯುವದು. ಹೊಸ ದ್ರಾಕ್ಷಾಲತೆಗಳು ಚಿಗುರುತ್ತಾ ಬೆಳೆಯುವವು. ಆದರೆ ಅವು ಫಲ ಕೊಡುವದಕ್ಕಿಂತ ಮೊದಲೇ ಶತ್ರುಗಳು ಬಂದು ಬಳ್ಳಿಗಳನ್ನು ಕೊಯ್ದುಹಾಕುವರು. ಬಳ್ಳಿಗಳನ್ನು ನಾಶಮಾಡಿ ವೈರಿಗಳು ಅವುಗಳನ್ನು ದೂರ ಬಿಸಾಡಿಬಿಡುವರು.
6. ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.”
7. ಆ ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಆ ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಈ ಉನ್ನತವಾದ ಈ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಈ ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.

Notes

No Verse Added

Total 66 Chapters, Current Chapter 18 of Total Chapters 66
ಯೆಶಾಯ 18
1. ಇಥಿಯೋಪ್ಯದ ನದಿಯ ದಡದಲ್ಲಿರುವ ಪ್ರಾಂತ್ಯಗಳನ್ನು ಗಮನಿಸಿರಿ. ಪ್ರಾಂತ್ಯವು ಕ್ರಿಮಿಕೀಟಗಳಿಂದ ತುಂಬಿದೆ. ಅವುಗಳ ರೆಕ್ಕೆಗಳ ಝೇಂಕಾರವನ್ನು ನೀವು ಕೇಳಬಹುದು.
2. ದೇಶದವರು ಬೆಂಡಿನ ದೋಣಿಗಳಲ್ಲಿ ಜನರನ್ನು ಸಮುದ್ರದಾಚೆ ಕಳುಹಿಸುವರು. ವೇಗವುಳ್ಳ ದೂತರೇ, ಉನ್ನತವಾಗಿಯೂ ಬಲಶಾಲಿಗಳಾಗಿಯೂ ಇರುವ ಜನರ ಬಳಿಗೆ ಹೋಗಿರಿ. ಎಲ್ಲಾ ದೇಶಗಳವರು ಉನ್ನತರಾದ ಬಲಶಾಲಿಗಳಾದ ಜನರಿಗೆ ಭಯಪಡುತ್ತಾರೆ. ಅವರು ಬಲಾಢ್ಯ ಜನಾಂಗ. ಅವರ ಜನಾಂಗವು ಬೇರೆ ಜನಾಂಗಗಳನ್ನು ಸೋಲಿಸಿಬಿಡುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿರುತ್ತದೆ.
3. ಜನರಿಗೆ ಕೇಡು ಸಂಭವಿಸಲಿದೆ ಎಂಬ ಎಚ್ಚರಿಕೆಯನ್ನು ಕೊಡು. ಪ್ರಪಂಚದ ಎಲ್ಲಾ ಜನರು ದೇಶಕ್ಕೆ ಸಂಭವಿಸುವದನ್ನು ನೋಡುವರು. ಪರ್ವತದ ತುದಿಯಲ್ಲಿ ಧ್ವಜವೇರಿಸಿದರೆ ಹೇಗೆ ಎಲ್ಲರಿಗೂ ಕಾಣಿಸುತ್ತದೋ ಹಾಗೆಯೇ ಜನರು ಅದನ್ನು ಸ್ಪಷ್ಟವಾಗಿ ನೋಡುವರು. ಲೋಕದೊಳಗೆ ವಾಸಿಸುವ ಜನರೆಲ್ಲಾ ಉನ್ನತ ಬಲಶಾಲಿಗಳಾದ ಜನರಿಗೆ ಸಂಭವಿಸುವ ವಿಷಯಗಳ ವಾರ್ತೆಯನ್ನು ಕೇಳುವರು. ರಣರಂಗದಲ್ಲಿ ತುತ್ತೂರಿಯು ಮೊಳಗುವುದು ಹೇಗೆ ಸ್ಪಷ್ಟವಾಗಿ ಕೇಳಿಸುತ್ತದೋ ಹಾಗೇ ಕೇಳಿಸಿಕೊಳ್ಳುವರು.
4. ಯೆಹೋವನು ಇಂತೆನ್ನುತ್ತಾನೆ: “ನನಗಾಗಿ ಸಿದ್ಧಪಡಿಸಲ್ಪಟ್ಟ ಸ್ಥಳದಲ್ಲಿ ಮೌನವಾಗಿದ್ದು ಇವುಗಳನ್ನೆಲ್ಲಾ ವೀಕ್ಷಿಸುವೆನು. ಬೇಸಿಗೆಯ ಮಧ್ಯಾಹ್ನದ ಹೊತ್ತಿನಲ್ಲಿ ಜನರು ವಿಶ್ರಮಿಸುತ್ತಿರುವರು. ಅದು ಬೇಸಿಗೆಯ ಸುಗ್ಗಿ ಕಾಲವಾಗಿರುವದು; ಮಳೆ ಇರುವದಿಲ್ಲ, ಕೇವಲ ಮುಂಜಾನೆಯ ಇಬ್ಬನಿ ಇರುವದು.
5. ಆಗ ಭಯಂಕರವಾದ ಒಂದು ಘಟನೆಯು ನಡೆಯುವದು. ಅದು ಪುಷ್ಪಗಳು ಅರಳುವ ಕಾಲದ ನಂತರ ನಡೆಯುವದು. ಹೊಸ ದ್ರಾಕ್ಷಾಲತೆಗಳು ಚಿಗುರುತ್ತಾ ಬೆಳೆಯುವವು. ಆದರೆ ಅವು ಫಲ ಕೊಡುವದಕ್ಕಿಂತ ಮೊದಲೇ ಶತ್ರುಗಳು ಬಂದು ಬಳ್ಳಿಗಳನ್ನು ಕೊಯ್ದುಹಾಕುವರು. ಬಳ್ಳಿಗಳನ್ನು ನಾಶಮಾಡಿ ವೈರಿಗಳು ಅವುಗಳನ್ನು ದೂರ ಬಿಸಾಡಿಬಿಡುವರು.
6. ಅವುಗಳನ್ನು ಅಡವಿಯ ಪ್ರಾಣಿಗಳಿಗೂ ಬೆಟ್ಟದಹಕ್ಕಿಗಳಿಗೂ ತಿನ್ನಲು ಬಿಡುವರು. ಪಕ್ಷಿಗಳು ಬೇಸಿಗೆಕಾಲದಲ್ಲಿ ದ್ರಾಕ್ಷಾಲತೆಗಳ ಮೇಲೆ ವಾಸಿಸುತ್ತವೆ; ಚಳಿಗಾಲದಲ್ಲಿ ಕಾಡುಪ್ರಾಣಿಗಳು ದ್ರಾಕ್ಷಾಲತೆಗಳನ್ನು ತಿನ್ನುತ್ತವೆ.”
7. ಸಮಯದಲ್ಲಿ ಸರ್ವಶಕ್ತನಾದ ಯೆಹೋವನಿಗೆ ವಿಶೇಷವಾದ ಕಾಣಿಕೆಯು ಸಮರ್ಪಿಸಲ್ಪಡುವದು. ಕಾಣಿಕೆಯು ಉನ್ನತವಾಗಿರುವ ಬಲಶಾಲಿಗಳಾದ ಜನರಿಂದ ಬರುವದು. ಎಲ್ಲಾ ದೇಶಗಳ ಜನರು ಉನ್ನತವಾದ ಬಲಿಷ್ಠರಿಗೆ ಹೆದರುವರು. ಅವರು ಬಲಾಢ್ಯ ಜನಾಂಗವಾಗಿದ್ದಾರೆ. ಅವರ ಜನಾಂಗವು ಇತರ ಜನಾಂಗಗಳನ್ನು ಸೋಲಿಸುತ್ತದೆ. ಅವರ ದೇಶವು ನದಿಯ ಶಾಖೆಗಳಿಂದ ತುಂಬಿದೆ. ಕಾಣಿಕೆಯನ್ನು ಚೀಯೋನ್ ಪರ್ವತದಲ್ಲಿರುವ ಯೆಹೋವನ ಸ್ಥಳಕ್ಕೆ ತರುವರು.
Total 66 Chapters, Current Chapter 18 of Total Chapters 66
×

Alert

×

kannada Letters Keypad References