1. ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ಮರುಭೂಮಿಯ ಕಡೆಯಿಂದ ಏನೋ ಬರುತ್ತಿದೆ. ಅದು ನೆಗೆವಿನ ಕಡೆಯಿಂದ ಬೀಸುತ್ತಿರುವ ಗಾಳಿಯಂತೆ ಬರುತ್ತಿದೆ. ಅದು ಭಯಂಕರವಾದ ದೇಶದಿಂದ ಬರುತ್ತಿದೆ.
|
2. ನಡೆಯಲಿರುವ ಒಂದು ಭಯಂಕರ ಘಟನೆಯನ್ನು ನಾನು ದರ್ಶನದಲ್ಲಿ ನೋಡಿದ್ದೇನೆ. ನಿನಗೆ ವಿರುದ್ಧವಾಗಿ ದ್ರೋಹಿಗಳು ಏಳುತ್ತಿದ್ದಾರೆ. ನಿನ್ನ ಧನೈಶ್ವರ್ಯಗಳನ್ನು ಜನರು ಕಿತ್ತುಕೊಳ್ಳುತ್ತಿದ್ದಾರೆ. ಏಲಾಮೇ, ಹೋಗಿ ಆ ಜನರೊಂದಿಗೆ ಹೋರಾಡು. ಮೇದ್ಯವೇ, ಆ ಪಟ್ಟಣವನ್ನು ನಿನ್ನ ಸೈನ್ಯದಿಂದ ಸೋಲಿಸು. ಆ ನಗರದ ಎಲ್ಲಾ ದುಷ್ಟತನವನ್ನು ನಾನು ಕೊನೆಗಾಣಿಸುವೆನು.
|
3. ನಾನು ಆ ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ಆ ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.
|
5. ಜನರಾದರೊ, “ಊಟ ಬಡಿಸಿರಿ! ತಿನ್ನೋಣ, ಕುಡಿಯೋಣ” ಎಂದು ಹೇಳುತ್ತಿದ್ದಾರೆ; ಅದೇ ಸಮಯದಲ್ಲಿ ಸೈನಿಕರು, “ಕಾವಲುಗಾರರನ್ನು ಇರಿಸಿರಿ, ಸೇನಾಪತಿಗಳೇ ಎದ್ದೇಳಿರಿ, ನಿಮ್ಮ ಗುರಾಣಿಗಳನ್ನು ಉಜ್ಜಿ ನಯಗೊಳಿಸಿರಿ” ಎಂದು ಹೇಳುತ್ತಿದ್ದಾರೆ.
|
6. ನನ್ನ ಒಡೆಯನು ನನಗೆ, “ಹೋಗಿ ಈ ನಗರವನ್ನು ಕಾಯಲು ಒಬ್ಬ ಮನುಷ್ಯನನ್ನು ಕಂಡುಹಿಡಿ. ಅವನು ಏನೂ ನೋಡಿದರೂ ನಮಗೆ ತಿಳಿಸಬೇಕು.
|
8. ಒಂದು ದಿವಸ ಆ ಕಾವಲುಗಾರನು, “ನನ್ನ ಒಡೆಯನೇ, ಪ್ರತಿ ದಿನವೂ ನಾನು ಹಗಲಿರುಳು ಕಾವಲಿನ ಬುರುಜಿನಲ್ಲಿ ನಿಂತುಕೊಂಡು ಕಾವಲು ಕಾಯುತ್ತಿದ್ದೇನೆ;
|
9. ನೋಡು, ಅವರು ಬರುತ್ತಿದ್ದಾರೆ. ಅಶ್ವದಳಗಳು ಸಾಲುಸಾಲಾಗಿಯೂ ಬರುತ್ತಿವೆ” ಎಂದು ಕೂಗಿಕೊಂಡನು. ಆಗ ಒಬ್ಬ ದೂತನು, “ಬಾಬಿಲೋನಿಗೆ ಸೋಲಾಯಿತು. ಬಾಬಿಲೋನು ನೆಲಕ್ಕೆ ಅಪ್ಪಳಿಸಲ್ಪಟ್ಟಿತು. ಅದರ ದೇವ ದೇವತೆಯರ ವಿಗ್ರಹಗಳೆಲ್ಲಾ ನೆಲದ ಮೇಲೆ ಚೂರುಚೂರಾಗಿ ಬಿದ್ದಿವೆ” ಎಂದು ಹೇಳಿದನು.
|
10. ನನ್ನ ಬಡಿತಕ್ಕೆ ಈಡಾದ ಜನರೇ, ಸರ್ವಶಕ್ತನೂ ದೇವರೂ ಆಗಿರುವ ಯೆಹೋವನು ಹೇಳಿದ್ದನ್ನೆಲ್ಲಾ ಇಸ್ರೇಲರಾದ ನಿಮಗೆ ತಿಳಿಸಿದ್ದೇನೆ. ಕಣದಲ್ಲಿ ಧಾನ್ಯವು ನುಚ್ಚುನೂರಾಗುವಂತೆ ನೀವು ನಜ್ಜು ಗುಜ್ಜಾಗುವಿರಿ.
|
11. ದೂಮದ ಕುರಿತು ದುಃಖದ ದೈವೋಕ್ತಿ: ಸೇಯಿರ್ನಿಂದ ಎದೋಮನ್ನು ಯಾರೋ ಒಬ್ಬನು, “ಕಾವಲುಗಾರನೇ, ರಾತ್ರಿ ಮುಗಿಯಲು ಎಷ್ಟು ಸಮಯ ಉಂಟು? ರಾತ್ರಿಗೆ ಇನ್ನು ಎಷ್ಟು ಕಾಲ ಉಂಟು?” ಎಂದು ಕೇಳಿದನು.
|
12. ಅದಕ್ಕೆ ಕಾವಲುಗಾರ, “ಮುಂಜಾನೆ ಬರುತ್ತಿದೆ. ಆದರೆ ರಾತ್ರಿ ತಿರುಗಿ ಬರುತ್ತಿದೆ. ನೀನೇನಾದರೊ ಕೇಳಬೇಕಿದ್ದರೆ ಮತ್ತೆ ಬಂದು ವಿಚಾರಿಸು” ಎಂದು ಉತ್ತರಿಸಿದನು.
|
13. ಅರೇಬಿಯದ ಬಗ್ಗೆ ದುಃಖಕರವಾದ ಸಂದೇಶ: ದೇದಾನಿನಿಂದ ಬಂದ ಪ್ರಯಾಣಿಕರು ಅರೇಬಿಯ ಮರುಭೂಮಿಯಲ್ಲಿನ ಪೊದೆಗಳಲ್ಲಿ ರಾತ್ರಿ ತಂಗಿದರು.
|
15. ಅವರು ತಮ್ಮನ್ನು ಸಾಯಿಸಲಿಕ್ಕಿದ್ದ ಕತ್ತಿಯಿಂದ ತಪ್ಪಿಸಿಕೊಂಡು ಬಂದವರು. ಅವರು ತಮ್ಮನ್ನು ಹೊಡೆಯಲು ಸಿದ್ಧವಾಗಿದ್ದ ಬಾಣಗಳಿಂದ ಪಾರಾಗಿ ಬಂದವರು. ಅವರು ಘೋರ ರಣರಂಗದಿಂದ ಓಡಿಬಂದವರು.
|
16. ನನ್ನ ಒಡೆಯನಾದ ಯೆಹೋವನು ಈ ವಿಷಯಗಳು ಸಂಭವಿಸುವವೆಂದು ಹೇಳಿದನು. ಆತನು ಹೇಳಿದ್ದೇನೆಂದರೆ: “ಇನ್ನೊಂದು ವರ್ಷದಲ್ಲಿ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಕೇದಾರಿನ ಘನತೆಯೆಲ್ಲವೂ ಹೋಗಿ ಬಿಡುವದು.
|
17. ಆ ಸಮಯದಲ್ಲಿ ಕೆಲವೇ ಮಂದಿ ಬಿಲ್ಲುಗಾರರು ಕೇದಾರಿನ ವೀರರೊಳಗಿಂದ ಉಳಿಯುವರು.” ಇಸ್ರೇಲರ ದೇವರಾದ ಯೆಹೋವನು ಇದನ್ನು ನುಡಿದನು.
|