1. ಹಿಂದಿನ ಕಾಲದಲ್ಲಿ, ಜೆಬುಲೂನ್ ಮತ್ತು ನಫ್ತಾಲಿ ಪ್ರಾಂತ್ಯಗಳು ವಿಶೇಷವಾದವುಗಳಲ್ಲ ಎಂದು ಜನರು ತಿಳಿದುಕೊಂಡಿದ್ದರು. ಆದರೆ ಆಮೇಲೆ ಸಮುದ್ರಕ್ಕೆ ಸಮೀಪದಲ್ಲಿರುವ ಪ್ರಾಂತ್ಯ, ಜೋರ್ಡನಿನ ಆಚೆಗಿರುವ ಸ್ಥಳ ಮತ್ತು ಯೆಹೂದ್ಯರಲ್ಲದವರು ವಾಸಿಸುವ ಗಲಿಲಾಯ ಪ್ರಾಂತ್ಯ ಇವುಗಳನ್ನು ಮುಂದೆ ದೇವರು ಮಹಾದೇಶವನ್ನಾಗಿ ಮಾಡುವನು.
|
2. ಈಗ ಅವರು ಕತ್ತಲಲ್ಲಿ ವಾಸಿಸುವರು. ಆದರೆ ಒಂದು ದೊಡ್ಡ ಬೆಳಕನ್ನು ಅವರು ನೋಡುವರು. ಅವರಿರುವ ಸ್ಥಳವು ಮರಣದ ಸ್ಥಳದಂತೆ ಅಂಧಕಾರದಿಂದ ತುಂಬಿದೆ. ಆದರೆ ದೊಡ್ಡ ಬೆಳಕು ಅವರ ಮೇಲೆ ಪ್ರಕಾಶಿಸುವದು.
|
3. ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.
|
4. ಯಾಕೆಂದರೆ ಅವರ ಮೇಲಿದ್ದ ಭಾರವನ್ನು ನೀನು ತೆಗೆದುಬಿಡುವೆ. ಅವರ ಬೆನ್ನಿನ ಮೇಲಿದ್ದ ಭಾರವಾದ ನೊಗವನ್ನು ನೀನು ತೆಗೆದುಹಾಕುವೆ; ವೈರಿಗಳು ನಿನ್ನ ಜನರನ್ನು ಶಿಕ್ಷಿಸಲು ಉಪಯೋಗಿಸುವ ಬೆತ್ತವನ್ನು ತೆಗೆದು ಬಿಡುವೆ. ಆ ಸಮಯವು ನೀನು ಮಿದ್ಯಾನರನ್ನು ಸೋಲಿಸಿದ ಸಮಯದಂತಿರುವದು.
|
5. ರಣರಂಗದಲ್ಲಿ ನಡೆಯುವ ಪ್ರತಿಯೊಂದು ಪಾದರಕ್ಷೆಯನ್ನೂ ನಾಶಮಾಡಲಾಗುವುದು; ರಕ್ತದ ಕಲೆಯಿರುವ ಪ್ರತಿಯೊಂದು ಸಮವಸ್ತ್ರವನ್ನೂ ನಾಶಮಾಡಲಾಗುವದು. ಆವುಗಳೆಲ್ಲವನ್ನು ಬೆಂಕಿಯಲ್ಲಿ ಹಾಕಲಾಗುವದು.
|
6. ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.
|
7. ಆತನ ರಾಜ್ಯದಲ್ಲಿ ಸಮಾಧಾನವೂ ಅಧಿಕಾರವೂ ಇರುತ್ತದೆ. ದಾವೀದನ ಕುಟುಂಬದವನ ರಾಜ್ಯದಲ್ಲಿ ಅವು ಸ್ಥಿರವಾಗಿರುತ್ತವೆ. ಈ ಅರಸನು ನ್ಯಾಯನೀತಿಗಳಿಂದ ನಿತ್ಯಕಾಲಕ್ಕೂ ರಾಜ್ಯವಾಳುವನು. ಸರ್ವಶಕ್ತನಾದ ಯೆಹೋವನಿಗೆ ತನ್ನ ಜನರ ಮೇಲೆ ಬಲವಾದ ಪ್ರೀತಿಯಿದೆ. ಆತನ ಈ ಕಾರ್ಯಗಳನ್ನೆಲ್ಲಾ ಮಾಡಲು ಬಲವಾದ ಪ್ರೀತಿಯೇ ಕಾರಣ.
|
8. ಯಾಕೋಬನ ಜನರಿಗೆ, ನನ್ನ ದೇವರಾದ ಯೆಹೋವನು ಆಜ್ಞೆಯನ್ನು ಕೊಟ್ಟಿದ್ದಾನೆ. ಇಸ್ರೇಲರಿಗೆ ವಿರುದ್ಧವಾಗಿರುವ ಈ ಆಜ್ಞೆಯು ನೆರವೇರಲ್ಪಡುವುದು.
|
10. “ಈ ಇಟ್ಟಿಗೆಗಳು ಕೆಳಗೆ ಬಿದ್ದರೂ ನಾವು ಅವುಗಳನ್ನು ಮತ್ತೆ ಕಟ್ಟುತ್ತೇವೆ. ನಾವು ಅದನ್ನು ಬಲವಾದ ಕಲ್ಲುಗಳಿಂದ ಕಟ್ಟುವೆವು. ಈ ಸಣ್ಣಸಣ್ಣ ಮರಗಳು ಕಡಿದುಹಾಕಲ್ಪಟ್ಟರೂ ಆ ಸ್ಥಳದಲ್ಲಿ ನಾವು ದೇವದಾರು ಮರಗಳನ್ನು ನೆಡುವೆವು. ಆ ದೇವದಾರು ಮರಗಳು ಎತ್ತರವಾಗಿಯೂ ಬಲವಾಗಿಯೂ ಇರುತ್ತವೆ.”
|
11. ಹೀಗೆ ಯೆಹೋವನು ಇಸ್ರೇಲಿಗೆ ವಿರುದ್ಧವಾಗಿ ಯುದ್ಧ ಮಾಡುವವರನ್ನು ಕಂಡುಹಿಡಿಯುವನು. ಯೆಹೋವನು ರೆಚೀನನ ವೈರಿಗಳನ್ನು ಅವರಿಗೆ ವಿರುದ್ಧವಾಗಿ ಎಬ್ಬಿಸುವನು.
|
12. ಯೆಹೋವನು ಪೂರ್ವದಿಂದ ಅರಾಮ್ಯರನ್ನೂ ಪಶ್ಚಿಮದಿಂದ ಫಿಲಿಷ್ಟಿಯರನ್ನೂ ಕರೆ ತರುವನು. ಆ ಶತ್ರುಗಳು ಇಸ್ರೇಲರನ್ನು ಅವರ ಸೈನ್ಯದೊಂದಿಗೆ ಸೋಲಿಸಿಬಿಡುವರು. ಆದರೆ ಯೆಹೋವನು ಇಸ್ರೇಲರ ಮೇಲೆ ಕೋಪಗೊಂಡಿರುವುದರಿಂದ ಅವರನ್ನು ಶಿಕ್ಷಿಸಲು ಇನ್ನೂ ಸಿದ್ಧನಾಗಿರುವನು.
|
13. ದೇವರು ಜನರನ್ನು ಶಿಕ್ಷಿಸಿದರೂ ಅವರು ಪಾಪ ಮಾಡುವದನ್ನು ನಿಲ್ಲಿಸುವದಿಲ್ಲ. ಅವರು ಆತನ ಬಳಿಗೆ ಹಿಂದಿರುಗಿ ಬರುವದಿಲ್ಲ. ಸರ್ವಶಕ್ತನಾದ ಯೆಹೋವನನ್ನು ಅವರು ಹಿಂಬಾಲಿಸುವುದಿಲ್ಲ.
|
14. ಆದುದರಿಂದ ಯೆಹೋವನು ಇಸ್ರೇಲರ ತಲೆಯನ್ನೂ ಬಾಲವನ್ನೂ ಕತ್ತರಿಸುವನು. ಒಂದೇ ದಿವಸದಲ್ಲಿ ಯೆಹೋವನು ಮರದ ಕಾಂಡವನ್ನೂ ಕೊಂಬೆಗಳನ್ನೂ ಕತ್ತರಿಸಿ ಬಿಡುವನು.
|
16. ಜನರಿಗೆ ಮಾರ್ಗದರ್ಶನ ಮಾಡುವ ನಾಯಕರು ಜನರನ್ನು ತಪ್ಪುದಾರಿಯಲ್ಲಿ ನಡಿಸುತ್ತಿದ್ದಾರೆ. ಅವರನ್ನು ಹಿಂಬಾಲಿಸುವ ಜನರು ನಾಶವಾಗುವರು.
|
17. ಜನರೆಲ್ಲರೂ ದುಷ್ಟರಾಗಿದ್ದಾರೆ. ಆದುದರಿಂದ ಯೆಹೋವನು ಯುವಕರಲ್ಲಿ ಸಂತೋಷಿಸುವದಿಲ್ಲ. ಅವರ ವಿಧವೆಯರಿಗೆ ಮತ್ತು ಅನಾಥರಿಗೆ ದೇವರು ದಯೆ ತೋರಿಸುವುದಿಲ್ಲ; ಯಾಕೆಂದರೆ ಎಲ್ಲಾ ಜನರು ದುಷ್ಟರಾಗಿದ್ದಾರೆ. ಅವರು ದೇವರಿಗೆ ವಿರುದ್ಧವಾಗಿ ನಡೆಯುತ್ತಾರೆ. ಅವರು ಸುಳ್ಳಾಡುತ್ತಾರೆ. ಆದುದರಿಂದ ದೇವರು ಅವರ ಮೇಲೆ ಕೋಪದಿಂದಲೇ ಇರುವನು; ಅವರನ್ನು ದಂಡಿಸುತ್ತಲೇ ಇರುವನು.
|
18. ದುಷ್ಟತನವು ಒಂದು ಚಿಕ್ಕ ಬೆಂಕಿಯಂತಿದೆ. ಮೊಟ್ಟ ಮೊದಲು ಬೆಂಕಿಯು ಹಣಜಿಗಳನ್ನು ಮತ್ತು ಮುಳ್ಳುಗಿಡಗಳನ್ನು ಸುಡುವುದು. ಅನಂತರ ಬೆಂಕಿಯು ಕಾಡಿನ ದೊಡ್ಡ ಪೊದೆಗಳನ್ನು ಸುಡುವುದು. ಕೊನೆಗದು ದೊಡ್ಡ ಗಾತ್ರದ ಬೆಂಕಿಯಾಗಿ ಎಲ್ಲವನ್ನೂ ಸುಟ್ಟುಬಿಟ್ಟು ಎಲ್ಲವೂ ಹೊಗೆಯಾಗಿ ಪರಿಣಮಿಸುವದು.
|
19. ಸರ್ವಶಕ್ತನಾದ ಯೆಹೋವನು ಕೋಪಗೊಂಡಿರುವುದರಿಂದ ದೇಶವೆಲ್ಲಾ ಸುಟ್ಟುಹೋಗುವದು. ಆ ಬೆಂಕಿಯಲ್ಲಿ ಜನರೆಲ್ಲಾ ಸುಟ್ಟುಹೋಗುವರು. ಯಾರೂ ತನ್ನ ಸಹೋದರರನ್ನು ರಕ್ಷಿಸಲು ಪ್ರಯತ್ನಿಸುವದಿಲ್ಲ.
|
20. ಜನರು ತಮ್ಮ ಬಲಗಡೆಯಲ್ಲಿರುವದನ್ನು ಕಿತ್ತುಕೊಳ್ಳುವರು. ಆದರೆ ಅದು ಅವರ ಹಸಿವೆಯನ್ನು ನೀಗುವುದಿಲ್ಲ. ಜನರು ಎಡಬದಿಯಲ್ಲಿರುವದನ್ನು ತಿನ್ನುವರು; ಆದರೆ ಅವರ ಹೊಟ್ಟೆತುಂಬುವದಿಲ್ಲ. ಆ ಬಳಿಕ ಪ್ರತಿಯೊಬ್ಬನು ತನ್ನ ಶರೀರವನ್ನೇ ತಿನ್ನಲು ಪ್ರಾರಂಭಿಸುವನು.
|
21. ಇದರರ್ಥವೇನೆಂದರೆ ಮನಸ್ಸೆಯು ಎಫ್ರಾಯೀಮನೊಡನೆ ಯುದ್ಧ ಮಾಡುವನು ಮತ್ತು ಎಫ್ರಾಯೀಮನು ಮನಸ್ಸೆಯೊಂದಿಗೆ ಯುದ್ಧಮಾಡುವನು. ಆಮೇಲೆ ಅವರಿಬ್ಬರೂ ಸೇರಿ ಯೆಹೂದದೊಂದಿಗೆ ಯುದ್ಧ ಮಾಡುವರು. ಯೆಹೋವನು ಇಸ್ರೇಲರ ಮೇಲೆ ಇನ್ನೂ ಕೋಪದಿಂದಿದ್ದಾನೆ; ತನ್ನ ಜನರನ್ನು ಇನ್ನೂ ಶಿಕ್ಷಿಸಲು ಸಿದ್ಧನಾಗಿದ್ದಾನೆ.
|