2. ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ.
ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು. |
3. ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ.
ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು. |
4. ಅವರು ತಮ್ಮ ವಿಗ್ರಹಗಳನ್ನು ಬೆಳ್ಳಿಬಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ.
ಸುತ್ತಿಗೆಯಿಂದ ಮೊಳೆ ಬಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ. |
5. ಬೇರೆ ಜನಾಂಗದವರ ವಿಗ್ರಹಗಳು
ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.” |
7. ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ.
ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ. |
8. ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ;
ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ. |
9. ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ
ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ. |
10. ಯೆಹೋವನೊಬ್ಬನೇ ನಿಜವಾದ ದೇವರು.
ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು. |
11. ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು:
‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’ ” |
12. ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು.
ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ. |
13. ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ.
ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ. |
14. ಜನರು ಬುದ್ಧಿಗೇಡಿಗಳಾಗಿದ್ದಾರೆ.
ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ. *ಅವುಗಳಲ್ಲಿ ಜೀವವಿಲ್ಲ ಅಕ್ಷರಶಃ ಅವುಗಳಲ್ಲಿ ಆತ್ಮವಿಲ್ಲ. ಅವುಗಳು ಜೀವಂತವಾಗಿಲ್ಲ ಎಂದಾಗಲಿ ದೇವರಾತ್ಮವು ಅವುಗಳಲ್ಲಿಲ್ಲ ಎಂದಾಗಲಿ ಇದು ಅರ್ಥಕೊಡಬಲ್ಲದು. |
15. ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ.
ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು. |
16. ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ.
ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸಾಬಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ. |
17. {ವಿನಾಶವು ಬರುತ್ತಿದೆ} PS ನಿಮ್ಮದಾದ ಎಲ್ಲವನ್ನು ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ.
ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ. ವೈರಿಯು ನಗರವನ್ನು ಮುತ್ತಿದ್ದಾನೆ. |
18. ಯೆಹೋವನು ಹೇಳುತ್ತಾನೆ:
“ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.” |
19. ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ.
ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ. |
20. ನನ್ನ ಗುಡಾರವು ಹಾಳಾಗಿದೆ.
ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ. |
21. ಕುರುಬರು ಬುದ್ಧಿಗೇಡಿಗಳಾಗಿದ್ದಾರೆ.
ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು. |
22. ಕೇಳಿರಿ, ಉತ್ತರ ದಿಕ್ಕಿನಿಂದ
ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು. |
25. ನಿನಗೆ ಕೋಪ ಬಂದಿದ್ದರೆ
ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು. PE |