1. ಯೆಹೋವನ ಸಂದೇಶವಿದು: “ಯೆಹೂದದ ಕುರುಬರಿಗೆ ಒಳ್ಳೆಯದಾಗುವದಿಲ್ಲ. ಈ ಕುರುಬರು ಕುರಿಗಳನ್ನು ಹಾಳುಮಾಡುತ್ತಿದ್ದಾರೆ. ಅವರು ನನ್ನ ಹುಲ್ಲುಗಾವಲಿನಿಂದ ಕುರಿಗಳು ಎಲ್ಲಾ ದಿಕ್ಕುಗಳಿಗೂ ಓಡಿಹೋಗುವಂತೆ ಮಾಡುತ್ತಿದ್ದಾರೆ.” PEPS
|
2. ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.
|
3. “ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.
|
4. ನನ್ನ ಕುರಿಗಳನ್ನು ನೋಡಿಕೊಳ್ಳುವದಕ್ಕೆ ನಾನು ಹೊಸ ಕುರುಬರನ್ನು ನೇಮಿಸುವೆನು. ಆ ಕುರುಬರು ನನ್ನ ಕುರಿಗಳ ಯೋಗಕ್ಷೇಮವನ್ನು ನೋಡಿಕೊಳ್ಳುವರು. ನನ್ನ ಕುರಿಗಳು ಬೆದರುವದಿಲ್ಲ, ಭಯಪಡುವದಿಲ್ಲ. ನನ್ನ ಒಂದು ಕುರಿಯೂ ಕಳೆದುಹೋಗುವದಿಲ್ಲ.” ಇದು ಯೆಹೋವನ ಸಂದೇಶ.
|
5. {ಸದ್ಧರ್ಮದ ಸಸಿ} PS ಇದು ಯೆಹೋವನ ಸಂದೇಶ:
“ನಾನು ಒಳ್ಳೆಯ ‘ಸಸಿಯನ್ನು’ ಚಿಗುರಿಸುವ ಕಾಲ ಬಂದಿದೆ. ಅವನು ಬುದ್ಧಿವಂತಿಕೆಯಿಂದ ಆಳುವ ರಾಜನಾಗಿರುವನು. ಅವನು ದೇಶದಲ್ಲಿ ನೀತಿ ಮತ್ತು ನ್ಯಾಯಬದ್ಧವಾದದ್ದನ್ನು ಮಾಡುವನು. |
6. ಸದ್ಧರ್ಮದ ‘ಸಸಿಯ’ ಸಮಯದಲ್ಲಿ ಯೆಹೂದದ ಜನರು ರಕ್ಷಿಸಲ್ಪಡುವರು
ಮತ್ತು ಇಸ್ರೇಲ್ ಸುರಕ್ಷಿತವಾಗಿರುವುದು. ಯೆಹೋವನೇ, ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು.” PS |
7. ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.
|
8. ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”
|
9. {ಸುಳ್ಳುಪ್ರವಾದಿಗಳ ಬಗ್ಗೆ ನ್ಯಾಯನಿರ್ಣಯ} PS ಪ್ರವಾದಿಗಳಿಗೊಂದು ಸಂದೇಶ.
ನಾನು ಬಹಳ ದುಃಖಿತನಾಗಿದ್ದೇನೆ. ನನ್ನ ಹೃದಯ ಒಡೆದುಹೋಗಿದೆ. ನನ್ನ ಎಲುಬುಗಳೆಲ್ಲಾ ನಡುಗುತ್ತಿವೆ. ನಾನು ಅಮಲೇರಿದವನಂತಿದ್ದೇನೆ. ಯೆಹೋವನೂ ಆತನ ಪರಿಶುದ್ಧ ನುಡಿಗಳೂ ಇದಕ್ಕೆ ಕಾರಣ. |
10. ಯೆಹೂದ ದೇಶವು ವ್ಯಭಿಚಾರಿಗಳಿಂದ ತುಂಬಿಹೋಗಿದೆ.
ಅವರು ಅನೇಕ ರೀತಿಯಲ್ಲಿ ಅಪನಂಬಿಗಸ್ತರಾಗಿದ್ದಾರೆ. ಯೆಹೋವನು ನಾಡನ್ನು ಶಪಿಸಿದ್ದರಿಂದ ಅದು ಬರಡು ಭೂಮಿಯಾಯಿತು. ಹುಲ್ಲುಗಾವಲಿನ ಸಸಿಗಳು ಒಣಗಿ ಸತ್ತುಹೋಗುತ್ತಲಿವೆ. ಹೊಲಗಳು ಮರುಭೂಮಿಯಂತಾಗಿವೆ. ಪ್ರವಾದಿಗಳು ಸೆರೆ ಒಯ್ಯಲ್ಪಟ್ಟಿದ್ದಾರೆ. ಆ ಪ್ರವಾದಿಗಳು ತಮ್ಮ ಪ್ರಭಾವವನ್ನೂ ಶಕ್ತಿಯನ್ನೂ ತಪ್ಪಾಗಿ ಬಳಸಿಕೊಳ್ಳುತ್ತಿದ್ದಾರೆ. |
11. “ಪ್ರವಾದಿಗಳೂ ಯಾಜಕರೂ ದುಷ್ಟರಾಗಿದ್ದಾರೆ.
ಅವರು ನನ್ನ ಪವಿತ್ರಾಲಯದಲ್ಲಿಯೇ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಇದು ಯೆಹೋವನಿಂದ ಬಂದ ಸಂದೇಶ. |
12. ಆದ್ದರಿಂದ ನಾನು ಅವರಿಗೆ ನನ್ನ ಸಂದೇಶಗಳನ್ನು ಇನ್ನು ಮೇಲೆ ಕೊಡುವುದಿಲ್ಲ.
ಆಗ ಅವರು ಕತ್ತಲಲ್ಲಿ ನಡೆಯಬೇಕಾಗುವುದು. ಆ ಪ್ರವಾದಿಗಳ ಮತ್ತು ಯಾಜಕರ ಮಾರ್ಗಗಳು ಜಾರುವ ದಾರಿಗಳಾಗಿವೆ. ಆ ಪ್ರವಾದಿಗಳು ಮತ್ತು ಯಾಜಕರು ಕತ್ತಲಲ್ಲಿ ಬೀಳುವರು. ನಾನು ಅವರಿಗೆ ಕೇಡನ್ನು ಬರಮಾಡಿ ಅ ವರನ್ನು ದಂಡಿಸುವೆನು.” ಇದು ಯೆಹೋವನಿಂದ ಬಂದ ಸಂದೇಶ. |
13. “ಸಮಾರ್ಯದ ಪ್ರವಾದಿಗಳು ಕೆಟ್ಟದ್ದಾಗಿ ನಡೆದುಕೊಂಡದ್ದನ್ನು ನಾನು ನೋಡಿದ್ದೇನೆ.
ಅವರು ಬಾಳ್ ದೇವತೆಗೋಸ್ಕರ ಆವೇಶದಿಂದ ಪ್ರವಾದಿಸಿದ್ದನ್ನು ನಾನು ಕಂಡಿದ್ದೇನೆ. ಆ ಪ್ರವಾದಿಗಳು ಇಸ್ರೇಲಿನ ಜನರನ್ನು ಯೆಹೋವನಿಂದ ದೂರ ತೆಗೆದುಕೊಂಡು ಹೋಗಿದ್ದಾರೆ. |
14. ಯೆಹೂದದ ಪ್ರವಾದಿಗಳು ಜೆರುಸಲೇಮಿನಲ್ಲಿ
ಭಯಂಕರ ದುಷ್ಕೃತ್ಯಗಳನ್ನು ಮಾಡುವುದನ್ನು ನಾನು ನೋಡಿದ್ದೇನೆ. ಈ ಪ್ರವಾದಿಗಳು ವ್ಯಭಿಚಾರ ಮಾಡುತ್ತಾರೆ. ಅವರು ಸುಳ್ಳುಗಳನ್ನು ಕೇಳಿ, ಆ ಸುಳ್ಳುಬೋಧನೆಗಳನ್ನು ಪಾಲಿಸುತ್ತಾರೆ. ಅವರು ದುಷ್ಟರಿಗೆ ಅವರ ದುಷ್ಟತನವನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತಾರೆ. ಆದ್ದರಿಂದ ಜನರು ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರೆಲ್ಲರು ನನಗೆ ಸೊದೋಮ್ ನಗರದಂತೆ ಇದ್ದಾರೆ. ಜೆರುಸಲೇಮಿನ ಜನರು ಗೊಮೋರ ನಗರದಂತೆ ಇದ್ದಾರೆ.” |
15. ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ,
“ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.” |
16. ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ:
“ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಬಂದವುಗಳೇ ಹೊರತು ನನ್ನಿಂದ ಬಂದವುಗಳಲ್ಲ. |
17. ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ.
ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ. |
18. ಈ ಪ್ರವಾದಿಗಳಲ್ಲಿ ಒಬ್ಬನಾದರೂ ಪರಲೋಕದ ಸಭೆಯಲ್ಲಿ ನಿಂತಿಲ್ಲ.
ಒಬ್ಬನಾದರೂ ಯೆಹೋವನ ಸಂದೇಶವನ್ನು ಕೇಳಿಲ್ಲ, ಅಥವಾ ನೋಡಿಲ್ಲ. ಒಬ್ಬನಾದರೂ ಆತನ ಸಂದೇಶವನ್ನು ಸೂಕ್ಷ್ಮವಾಗಿ ಪರಿಶೀಲಿಸಿಲ್ಲ. |
19. ಈಗ ಯೆಹೋವನಿಂದ ದಂಡನೆಯು ಬಿರುಗಾಳಿಯಂತೆ ಬರುವುದು.
ಯೆಹೋವನ ಕೋಪವು ತೂಫಾನಿನಂತೆ ದುಷ್ಟರ ತಲೆಯ ಮೇಲೆ ಆರ್ಭಟಿಸಿ ಬೀಳುವುದು. |
20. ಆತನು ಮಾಡಬೇಕೆಂದು ಯೋಜಿಸಿದ್ದನ್ನು ಮಾಡಿ ಮುಗಿಸುವವರೆಗೆ
ಆತನ ಕೋಪವು ಕಡಿಮೆಯಾಗುವುದಿಲ್ಲ. ಆ ದಿನವಾದ ಮೇಲೆ ನೀವು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳುವಿರಿ. |
21. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ.
ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು. |
22. ಅವರು ನನ್ನ ಪರಲೋಕದ ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದಲ್ಲಿ
ಅವರು ನನ್ನ ಸಂದೇಶಗಳನ್ನು ಯೆಹೂದದ ಜನರಿಗೆ ಹೇಳಬಹುದಾಗಿತ್ತು. ಅವರ ಕೆಟ್ಟತನವನ್ನೂ ದುಷ್ಟತನವನ್ನೂ ತಡೆಯಬಹುದಾಗಿತ್ತು.” |
24. ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ
ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” PS ಯೆಹೋವನೇ ಇವುಗಳನ್ನು ಹೇಳಿದ್ದಾನೆ. |
25. “ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುವ ಪ್ರವಾದಿಗಳಿದ್ದಾರೆ. ಅವರು ‘ನಾನೊಂದು ಕನಸು ಕಂಡೆ, ನಾನೊಂದು ಕನಸು ಕಂಡೆ’ ಎಂದು ಹೇಳುತ್ತಾರೆ.
|
26. ಎಷ್ಟು ದಿನ ಹೀಗೆ ನಡೆಯುವುದು? ಆ ಪ್ರವಾದಿಗಳು ಸುಳ್ಳುಗಳನ್ನೇ ಯೋಚಿಸುತ್ತಾರೆ. ಆಮೇಲೆ ಆ ಸುಳ್ಳುಗಳನ್ನೇ ಜನರಿಗೆ ಬೋಧಿಸುತ್ತಾರೆ.
|
27. ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.
|
28. ಹೊಟ್ಟು, ಗೋಧಿಯ ಕಾಳಲ್ಲ. ಅದೇ ರೀತಿ, ಆ ಪ್ರವಾದಿಗಳ ಕನಸುಗಳು ನನ್ನ ಸಂದೇಶಗಳಲ್ಲ. ಒಬ್ಬ ವ್ಯಕ್ತಿಗೆ ತನ್ನ ಕನಸಿನ ಬಗ್ಗೆ ಹೇಳಬೇಕೆನಿಸಿದರೆ, ಅವನು ಹೇಳಲಿ. ಆದರೆ ನನ್ನ ಸಂದೇಶವನ್ನು ಕೇಳಿದ ಮನುಷ್ಯನು ಆ ಸಂದೇಶವನ್ನು ಯಥಾರ್ಥವಾಗಿ ಹೇಳಲಿ.
|
29. ನನ್ನ ಸಂದೇಶವು ಬೆಂಕಿಯ ಜ್ವಾಲೆಯಂತಿದೆ. ಅದು ಕಲ್ಲುಬಂಡೆಯನ್ನು ಒಡೆದುಹಾಕುವ ಸುತ್ತಿಗೆಯಂತಿದೆ” ಇದು ಯೆಹೋವನ ನುಡಿ. PEPS
|
30. “ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. “ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ. *ಈ ಪ್ರವಾದಿಗಳು … ಕದಿಯುತ್ತಿದ್ದಾರೆ ನಿಜವಾದ ಪ್ರವಾದಿಗಳ ನುಡಿಗಳನ್ನು ಅನುಕರಿಸಿ, ಯಾರು ನಿಜವಾದ ಪ್ರವಾದಿಗಳು ಮತ್ತು ಯಾರು ಸುಳ್ಳುಪ್ರವಾದಿಗಳು ಎಂದು ಶಂಕಿಸಲಾಗದಂತೆ ಮಾಡುತ್ತಿದ್ದ ಸುಳ್ಳುಪ್ರವಾದಿಗಳ ಬಗ್ಗೆ ಯೆರೆಮೀಯನು ಇಲ್ಲಿ ಹೀಗೆ ಹೇಳಿದ್ದಿರಬಹುದು.
|
31. ನಾನು ಸುಳ್ಳುಪ್ರವಾದಿಗಳನ್ನು ವಿರೋಧಿಸುತ್ತೇನೆ.” ಇದು ಯೆಹೋವನ ನುಡಿ. “ಅವರು ತಮ್ಮ ಮಾತುಗಳನ್ನು ಹೇಳಿ ಅದು ನನ್ನ ಸಂದೇಶವೆಂಬುವಂತೆ ನಟನೆ ಮಾಡುತ್ತಾರೆ.
|
32. ನಾನು ಕಾಲ್ಪನಿಕ ಕನಸುಗಳನ್ನು ಬೋಧಿಸುವ ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಪ್ರಭುವಿನ ನುಡಿ. “ಅವರು ತಮ್ಮ ಸುಳ್ಳುಬೋಧನೆಗಳಿಂದ ನನ್ನ ಜನರನ್ನು ಅಡ್ಡದಾರಿಗೆಳೆಯುತ್ತಾರೆ. ನಾನು ಜನರಿಗೆ ಉಪದೇಶ ಮಾಡುವದಕ್ಕಾಗಿ ಆ ಪ್ರವಾದಿಗಳನ್ನು ಕಳುಹಿಸಿಲ್ಲ. ನನಗೋಸ್ಕರವಾಗಿ ಏನನ್ನಾದರೂ ಮಾಡಲು ನಾನು ಅವರಿಗೆ ಎಂದೂ ಆಜ್ಞಾಪಿಸಿಲ್ಲ. ಅವರು ಯೆಹೂದದ ಜನರಿಗೆ ಸ್ವಲ್ಪವೂ ಸಹಾಯವನ್ನು ಮಾಡಲಾರರು” ಇದು ಯೆಹೋವನ ನುಡಿ. PS
|
33. {ಯೆಹೋವನಿಂದ ದುಃಖಕರ ಸಂದೇಶ} PS “ಯೆಹೂದದ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ‘ಯೆರೆಮೀಯನೇ, ಯೆಹೋವನು ದಯಪಾಲಿಸಿರುವ ಪ್ರಕಟನೆಯೇನು?’ ಎಂದು ನಿನ್ನನ್ನು ಕೇಳಬಹುದು. ನೀನು ಅವರಿಗೆ, ‘ಯೆಹೋವನಿಗೆ ನೀವೇ ದೊಡ್ಡ ಭಾರ. †ಭಾರ ಹೀಬ್ರೂ ಭಾಷೆಯಲ್ಲಿ “ಸಂದೇಶ” ಮತ್ತು “ಭಾರ” ಎನ್ನುವದಕ್ಕೆ ಒಂದೇ ಪದವಿದೆ. ಇದು ಶಬ್ಧ ಚಮತ್ಕಾರ. ನಾನು ಆ ಭಾರವನ್ನು ಕೆಳಗೆ ಎಸೆದುಬಿಡುತ್ತೇನೆ’ ” ಎಂದು ಉತ್ತರಿಸು. ಇದು ಯೆಹೋವನ ನುಡಿ. PEPS
|
34. “ಒಬ್ಬ ಪ್ರವಾದಿಯಾಗಲಿ ಯಾಜಕನಾಗಲಿ ಸಾಮಾನ್ಯ ಮನುಷ್ಯನಾಗಲಿ ‘ಇದು ಯೆಹೋವನ ಭಾರ’ ಎಂದು ಹೇಳಿದರೆ ಅವನು ಸುಳ್ಳು ಹೇಳಿದಂತೆಯೇ. ಆದ್ದರಿಂದ ನಾನು ಆ ವ್ಯಕ್ತಿಯನ್ನು ಮತ್ತು ಅವರ ಇಡೀ ಕುಟುಂಬವನ್ನು ದಂಡಿಸುತ್ತೇನೆ.
|
36. ನೀವು ಪುನಃ ಎಂದಿಗೂ ‘ಯೆಹೋವನ ಭಾರ’ ಎಂಬ ಮಾತನ್ನು ಉಪಯೋಗಿಸಕೂಡದು. ಏಕೆಂದರೆ ಯೆಹೋವನ ಸಂದೇಶವು ಯಾರಿಗೂ ಭಾರವಾಗಬೇಕಾಗಿಲ್ಲ. ಆದರೆ ನೀವು ನಿಮ್ಮ ದೇವರ ಮಾತುಗಳನ್ನು ತಲೆಕೆಳಗೆ ಮಾಡಿದ್ದೀರಿ. ಆತನು ಸರ್ವಶಕ್ತನಾಗಿದ್ದಾನೆ ಮತ್ತು ಜೀವಸ್ವರೂಪನಾದ ದೇವರಾಗಿದ್ದಾನೆ. PEPS
|
37. “ನೀವು ದೇವರ ಸಂದೇಶವನ್ನು ತಿಳಿದುಕೊಳ್ಳ ಬಯಸಿದರೆ ಪ್ರವಾದಿಯನ್ನು ಕುರಿತು ‘ಯೆಹೋವನು ನಿನಗೆ ಏನೆಂದು ಉತ್ತರವನ್ನು ಕೊಟ್ಟನು?’ ಅಥವಾ ‘ಯೆಹೋವನು ಏನು ಹೇಳಿದನು?’ ಎಂದು ಕೇಳಿರಿ.
|
38. ಆದರೆ ‘ಯೆಹೋವನ ಭಾರವೇನು?’ ಎಂದು ಕೇಳಬೇಡಿರಿ. ನೀವು ಆ ಪದಗಳನ್ನು ಬಳಸಿದರೆ ಯೆಹೋವನು ನಿಮಗೆ ಹೀಗೆ ಹೇಳುವನು: ‘ನೀವು ನನ್ನ ಸಂದೇಶವನ್ನು “ಯೆಹೋವನ ಭಾರವೆಂದು” ಹೇಳಬಾರದಾಗಿತ್ತು. ಆ ಪದಗಳನ್ನು ಬಳಸಬಾರದೆಂದು ನಾನು ನಿಮಗೆ ಹೇಳಿದ್ದೇನೆ.
|
39. ಆದರೆ ನೀವು ನನ್ನ ಸಂದೇಶವನ್ನು ಭಾರವಾದ ಹೊರೆ ಎಂದು ಹೇಳಿದ್ದೀರಿ. ಆದ್ದರಿಂದ ನಾನು ನಿಮ್ಮನ್ನು ಒಂದು ಭಾರವಾದ ಹೊರೆಯಂತೆ ಎತ್ತಿ ನನ್ನಿಂದ ದೂರ ಎಸೆಯುತ್ತೇನೆ. ನಾನು ನಿಮ್ಮ ಪೂರ್ವಿಕರಿಗೆ ಜೆರುಸಲೇಮ್ ನಗರವನ್ನು ಕೊಟ್ಟೆ. ಆದರೆ ನಾನು ನಿಮ್ಮನ್ನೂ ಆ ನಗರವನ್ನೂ ನನ್ನಿಂದ ದೂರ ಎಸೆಯುವೆನು.
|