2. ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳಿದನು: “ಯೆರೆಮೀಯನೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ಈ ಪುಸ್ತಕವನ್ನು ನೀನೇ ಬರೆಯಬೇಕು.
|
3. ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.” PEPS
|
6. “ಈ ಪ್ರಶ್ನೆಯನ್ನು ಕೇಳಿ ಪರಿಶೀಲಿಸಿರಿ.
ಪುರುಷನು ಮಗುವಿಗೆ ಜನ್ಮಕೊಡಬಲ್ಲನೆ? ಖಂಡಿತವಾಗಿಯೂ ಇಲ್ಲ. ಹಾಗಾದರೆ ಪ್ರತಿಯೊಬ್ಬ ಬಲಿಷ್ಠನೂ ಪ್ರಸವವೇದನೆಪಡುತ್ತಿರುವ ಸ್ತ್ರೀಯಂತೆ ತನ್ನ ಹೊಟ್ಟೆಯನ್ನು ಏಕೆ ಹಿಡಿದುಕೊಂಡಿದ್ದಾನೆ? ಪ್ರತಿಯೊಬ್ಬನ ಮುಖವು ಸತ್ತವನ ಮುಖದಂತೆ ಏಕೆ ಬಿಳಿಚಿದೆ? ಏಕೆಂದರೆ ಜನರು ಬಹಳ ಭಯಪಟ್ಟಿದ್ದಾರೆ. |
7. “ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ.
ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.” PS |
8. ಇದು ಸರ್ವಶಕ್ತನಾದ ಯೆಹೋವನ ನುಡಿ. “ಆ ಸಮಯದಲ್ಲಿ ನಾನು ಇಸ್ರೇಲರ ಮತ್ತು ಯೆಹೂದ್ಯರ ಹೆಗಲ ಮೇಲಿನ ನೊಗವನ್ನು ಮುರಿದುಬಿಡುವೆನು. ನಿಮಗೆ ಕಟ್ಟಿರುವ ಹಗ್ಗಗಳನ್ನು ಕಿತ್ತುಹಾಕುವೆನು. ಪರದೇಶದವರು ಮತ್ತೆಂದಿಗೂ ನನ್ನ ಜನರನ್ನು ದಾಸರನ್ನಾಗಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.
|
9. ಇಸ್ರೇಲರು ಮತ್ತು ಯೆಹೂದ್ಯರು ಪರದೇಶಿಯರ ಸೇವೆಮಾಡುವುದಿಲ್ಲ. ಅವರು ತಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವರು, ಅವರು ತಮ್ಮ ರಾಜನಾದ ದಾವೀದನ ಸೇವೆಮಾಡುವರು, ನಾನು ಆ ರಾಜನನ್ನು ಕಳುಹಿಸುವೆನು.”
|
10. ಯೆಹೋವನು ಹೀಗೆಂದನು:
“ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ. |
11. “ಇಸ್ರೇಲರೇ, ಯೆಹೂದ್ಯರೇ ನಾನು ನಿಮ್ಮೊಂದಿಗಿದ್ದೇನೆ.
ನಾನು ನಿಮ್ಮನ್ನು ರಕ್ಷಿಸುತ್ತೇನೆ. ನಾನು ನಿಮ್ಮನ್ನು ಆ ಜನಾಂಗಗಳ ಬಳಿಗೆ ಕಳುಹಿಸಿದೆ. ಆದರೆ ನಾನು ಆ ಎಲ್ಲಾ ಜನಾಂಗಗಳನ್ನು ಸಂಪೂರ್ಣವಾಗಿ ನಾಶಮಾಡುವೆನು. ಇದು ನಿಜ. ನಾನು ಆ ಜನಾಂಗಗಳನ್ನು ನಾಶಮಾಡುವೆನು. ಆದರೆ ನಾನು ನಿಮ್ಮನ್ನು ನಾಶಮಾಡುವದಿಲ್ಲ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮಗೆ ದಂಡನೆಯಾಗಲೇಬೇಕು. ನಾನು ನಿಮ್ಮನ್ನು ಸರಿಯಾಗಿ ಶಿಕ್ಷಿಸುತ್ತೇನೆ.” |
12. ಯೆಹೋವನು ಹೀಗೆನ್ನುತ್ತಾನೆ:
“ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ. |
14. ನೀವು ಅನೇಕ ಜನಾಂಗಗಳೊಡನೆ ಸ್ನೇಹ ಮಾಡಿದಿರಿ.
ಆದರೆ ಆ ಜನಾಂಗಗಳು ನಿಮ್ಮ ಕಡೆಗೆ ಗಮನಕೊಡುವದಿಲ್ಲ. ನಿಮ್ಮ ‘ಸ್ನೇಹಿತರು’ ನಿಮ್ಮನ್ನು ಮರೆತಿದ್ದಾರೆ. ನಾನು ಶತ್ರುವಿನಂತೆ ನಿಮ್ಮನ್ನು ನೋಯಿಸಿದೆ. ನಾನು ನಿಮಗೆ ಬಹಳ ಕಠಿಣವಾದ ಶಿಕ್ಷೆಯನ್ನು ಕೊಟ್ಟೆ. ನಿಮ್ಮ ಮಹಾಪರಾಧಗಳಿಗಾಗಿ ನಾನು ಹೀಗೆ ಮಾಡಿದೆ. ನಿಮ್ಮ ಅನೇಕ ಪಾಪಗಳಿಗಾಗಿ ನಾನು ಹೀಗೆ ಮಾಡಿದೆ. |
15. ಇಸ್ರೇಲೇ, ಯೆಹೂದವೇ, ನೀವು ನಿಮ್ಮ ಗಾಯಗಳಿಗಾಗಿ ಏಕೆ ಅರಚುವಿರಿ?
ನಿಮ್ಮ ಗಾಯಗಳು ಆಳವಾಗಿವೆ ಮತ್ತು ಅದಕ್ಕೆ ಔಷಧಿಯಿಲ್ಲ. ಯೆಹೋವನಾದ ನಾನು ನಿಮ್ಮ ಮಹಾಪರಾಧಕ್ಕಾಗಿ ಹೀಗೆಲ್ಲ ಮಾಡಿದೆ. ನಾನು ನಿಮ್ಮ ಅನೇಕ ಪಾಪಗಳಿಗಾಗಿ ಹೀಗೆಲ್ಲ ಮಾಡಿದೆ. |
16. ಆ ಜನಾಂಗಗಳು ನಿಮ್ಮನ್ನು ನಾಶಗೊಳಿಸಿದವು.
ಆದರೆ ಈಗ ಆ ಜನಾಂಗಗಳನ್ನು ನಾಶಪಡಿಸಲಾಗಿದೆ. ಇಸ್ರೇಲೇ, ಯೆಹೂದವೇ, ನಿಮ್ಮ ಶತ್ರುಗಳು ಬಂಧಿಗಳಾಗುತ್ತಾರೆ. ಅವರು ನಿಮ್ಮ ವಸ್ತುಗಳನ್ನು ಕದ್ದುಕೊಂಡಿದ್ದಾರೆ. ಆದರೆ ಬೇರೆಯವರು ಅವರ ವಸ್ತುಗಳನ್ನು ಕದಿಯುವರು. ಅವರು ಯುದ್ಧದಲ್ಲಿ ನಿಮ್ಮ ವಸ್ತುಗಳನ್ನು ತೆಗೆದುಕೊಂಡರು. ಆದರೆ ಬೇರೆಯವರು ಯುದ್ಧದಲ್ಲಿ ಅವರ ವಸ್ತುಗಳನ್ನು ತೆಗೆದುಕೊಳ್ಳುವರು.” |
17. ಇದು ಯೆಹೋವನ ನುಡಿ:
“ನಾನು ಪುನಃ ನಿಮಗೆ ಆರೋಗ್ಯವನ್ನು ಕೊಡುವೆನು; ನಿಮ್ಮ ಗಾಯಗಳನ್ನು ವಾಸಿಮಾಡುವೆನು. ಏಕೆಂದರೆ ಚೀಯೋನ್ ಭ್ರಷ್ಟಳಾದಳೆಂದೂ ‘ಯಾರಿಗೂ ಬೇಡವಾದ ನಗರ’ವೆಂದೂ ಬೇರೆಯವರು ಹೇಳಿದರು.”b |
18. ಯೆಹೋವನು ಹೀಗೆನ್ನುತ್ತಾನೆ,
“ಯಾಕೋಬಿನ ಜನರು ಈಗ ಬಂಧಿಗಳಾಗಿದ್ದಾರೆ. ಆದರೆ ಅವರು ಹಿಂತಿರುಗಿ ಬರುವರು. ಯಾಕೋಬಿನ ಮನೆಗಳ ಮೇಲೆ ನಾನು ಕನಿಕರ ತೋರುವೆನು. ನಗರವು ಈಗ ಕೇವಲ ಹಾಳುಬಿದ್ದ ಮನೆಗಳಿಂದ ಕೂಡಿದ ಒಂದು ದಿಬ್ಬವಾಗಿದೆ. ಆದರೆ ಆ ನಗರವು ಮತ್ತೆ ನಿರ್ಮಿಸಲ್ಪಡುವುದು. ಮುಂಚೆ ಇದ್ದ ಸ್ಥಳದಲ್ಲಿ ಅರಮನೆಯನ್ನು ಕಟ್ಟಲಾಗುವುದು. |
19. ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು.
ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ. |
20. ಯಾಕೋಬಿನ ಸಂತಾನದವರು ಮೊದಲಿನ ಸ್ಥಿತಿಯನ್ನು ಹೊಂದುವರು.
ನಾನು ಇಸ್ರೇಲರನ್ನೂ ಯೆಹೂದ್ಯರನ್ನೂ ಬಲಶಾಲಿಗಳನ್ನಾಗಿ ಮಾಡುವೆನು. ಅವರನ್ನು ಪೀಡಿಸುವ ಜನರನ್ನು ಶಿಕ್ಷಿಸುವೆನು. |
21. ಅವರಲ್ಲೇ ಒಬ್ಬನು ಅವರಿಗೆ ನಾಯಕನಾಗಿರುವನು.
ಆ ನಾಯಕನು ನನ್ನ ಜನರಿಂದಲೇ ಬರುವನು. ನಾನು ಹೇಳಿದರೆ ಮಾತ್ರ ಜನರು ನನ್ನ ಹತ್ತಿರಕ್ಕೆ ಬರಲು ಸಾಧ್ಯ. ಆದ್ದರಿಂದ ನಾನು ಆ ನಾಯಕನನ್ನು ನನ್ನ ಹತ್ತಿರ ಬರಲು ಹೇಳುವೆನು. ಅವನು ನನಗೆ ತುಂಬಾ ಹತ್ತಿರದವನಾಗುವನು. |
23. ಯೆಹೋವನು ಬಹಳ ಕೋಪ ತಾಳಿದ್ದನು.
ಅವನು ಜನರನ್ನು ಶಿಕ್ಷಿಸಿದನು. ಆ ಶಿಕ್ಷೆಯು ಒಂದು ಬಿರುಗಾಳಿಯಂತೆ ಬಂದಿತು. ಆ ಶಿಕ್ಷೆಯು ದುಷ್ಟಜನರ ಮೇಲೆ ತೂಫಾನಿನಂತೆ ಬಂದಿತು. |
24. ಜನರನ್ನು ಸಂಪೂರ್ಣವಾಗಿ ಶಿಕ್ಷಿಸುವವರೆಗೆ
ಯೆಹೋವನು ಕೋಪಿಷ್ಟನಾಗಿಯೇ ಇರುವನು. ಯೆಹೂದದ ಜನರಾದ ನೀವು ಅದನ್ನು ಕೊನೆಯ ದಿನಗಳಲ್ಲಿ ತಿಳಿದುಕೊಳ್ಳುವಿರಿ. PE |