1. {ಫಿಲಿಷ್ಟಿಯರ ಬಗ್ಗೆ ಸಂದೇಶ} PS ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಬಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಬಂದಿತು.
|
2. ಯೆಹೋವನು ಹೀಗೆನ್ನುತ್ತಾನೆ:
“ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು. |
3. ಅವರು ವೇಗವಾಗಿ ಓಡುವ
ಕುದುರೆಗಳ ಶಬ್ಧವನ್ನು ಕೇಳುವರು. ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು ಕೊಡಲಾಗದಷ್ಟು ದುಬರ್ಲರಾಗಿರುವರು. |
4. ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ.
ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು. |
5. ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು.
ಅಷ್ಕೆಲೋನಿನ ಜನರನ್ನು ಸ್ತಬ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ? |
6. “ಅಯ್ಯೋ, ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ?
ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? ನಿನ್ನ ಒರೆಯಲ್ಲಿ ಹೋಗು! ಸುಮ್ಮನಿರು, ಶಾಂತವಾಗಿರು! |
7. ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ?
ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ ಧಾಳಿ ಮಾಡಬೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಧಿಸಿದ್ದಾನೆ.” PE |