9. ಅವರ ಕುಟುಂಬಗಳು ಸುರಕ್ಷಿತವಾಗಿರುವುದರಿಂದ ಅವರಿಗೆ ಭಯವಿಲ್ಲ. ದೇವರು ದುಷ್ಟರನ್ನು ತನ್ನ ದೊಣ್ಣೆಯಿಂದ ದಂಡಿಸುವುದಿಲ್ಲ.
|
11. ದುಷ್ಟರು ತಮ್ಮ ಮಕ್ಕಳನ್ನು ಕುರಿಮರಿಗಳಂತೆ ಆಟವಾಡಲು ಹೊರಗೆ ಕಳುಹಿಸುವರು. ಅವರ ಮಕ್ಕಳು ಸುತ್ತಮುತ್ತ ಕುಣಿದಾಡುವರು.
|
14. ಆದರೆ ದುಷ್ಟರು ದೇವರಿಗೆ, ‘ನಮ್ಮನ್ನು ನಮ್ಮಷ್ಟಕ್ಕೇ ಬಿಟ್ಟುಕೊಡು! ನಿನ್ನ ಮಾರ್ಗದ ತಿಳುವಳಿಕೆಯೇ ನಮಗೆ ಬೇಡ’ ಎನ್ನುವರು.
|
15. ದುಷ್ಟರು, ‘ಸರ್ವಶಕ್ತನಾದ ದೇವರು ಯಾರು? ನಾವು ಆತನ ಸೇವೆಮಾಡುವ ಅಗತ್ಯವಿಲ್ಲ! ಆತನಿಗೆ ಪ್ರಾರ್ಥಿಸುವುದರಿಂದ ಪ್ರಯೋಜನವೇನೂ ಇಲ್ಲ’ ಎಂದು ಹೇಳುವರು.
|
16. “ತಮ್ಮ ಏಳಿಗೆಗೆ ಕಾರಣ ತಾವೇ ಎಂದು ದುಷ್ಟರು ಯೋಚಿಸಿಕೊಂಡಿದ್ದಾರೆ. ಆದರೆ ಅವರ ಆಲೋಚನೆಗಳನ್ನು ನಾನು ತಿರಸ್ಕರಿಸುವೆ.
|
17. ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು?
|
18. ಗಾಳಿಯು ಹುಲ್ಲನ್ನೂ ಬಿರುಗಾಳಿಯು ಹೊಟ್ಟನ್ನೂ ಬಡಿದುಕೊಂಡು ಹೋಗುವಂತೆ ದೇವರು ದುಷ್ಟರನ್ನು ಎಷ್ಟು ಸಲ ಬಡಿದುಕೊಂಡು ಹೋಗುವನು?
|
19. ‘ದುಷ್ಟನ ಮಕ್ಕಳಿಗೆ ದೇವರು ದಂಡನೆಯನ್ನು ಶೇಖರಿಸಿಡುತ್ತಾನೆ’ ಎಂದು ನೀವು ಹೇಳುತ್ತೀರಿ. ಇಲ್ಲ! ದೇವರು ದುಷ್ಟನನ್ನೇ ದಂಡಿಸಲಿ. ಆಗ, ತನ್ನ ಸ್ವಂತ ಪಾಪಗಳಿಗಾಗಿ ತನಗೆ ದಂಡನೆಯಾಯಿತೆಂದು ಅವನು ತಿಳಿದುಕೊಳ್ಳುವನು.
|
23. ಒಬ್ಬನು ತನ್ನ ಜೀವಮಾನವೆಲ್ಲಾ ಯಶಸ್ವಿಯಾಗಿ ಬಾಳಿ ಸಾಯುವನು. ಅವನು ಸುರಕ್ಷಿತವೂ ಸುಖಕರವೂ ಆದ ಬಾಳ್ವೆಯನ್ನು ನಡೆಸಿದನು.
|
31. ದುಷ್ಟನ ಕೆಟ್ಟಕಾರ್ಯದ ಬಗ್ಗೆ ಅವನ ಮುಖದೆದುರಿನಲ್ಲಿ ಯಾರೂ ಟೀಕಿಸುವುದಿಲ್ಲ. ಅವನು ಮಾಡಿದ ಕೇಡಿಗಾಗಿ ಯಾರೂ ಅವನನ್ನು ದಂಡಿಸುವುದಿಲ್ಲ.
|
33. ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.
|