5. ನೀವು ನ್ಯಾಯವಂತರೆಂದು ನಾನು ಒಪ್ಪಿಕೊಳ್ಳುವುದಿಲ್ಲ. ನಾನು ನಿರಪರಾಧಿಯೆಂದು ನನ್ನ ಮರಣದ ದಿನದವರೆಗೂ ಹೇಳುತ್ತಲೇ ಇರುವೆನು.
|
6. ನನ್ನ ನೀತಿಯನ್ನು ಬಲವಾಗಿ ಹಿಡಿದುಕೊಳ್ಳುವೆನು; ಅದನ್ನೆಂದಿಗೂ ಬಿಟ್ಟುಕೊಡೆನು. ನಾನು ಜೀವದಿಂದಿರುವತನಕ ನನ್ನ ಮನಸ್ಸಾಕ್ಷಿಯು ನನ್ನನ್ನು ಕಾಡಿಸುವುದೇ ಇಲ್ಲ.
|
11. “ನಾನು ನಿಮಗೆ ದೇವರ ಶಕ್ತಿಯ ಬಗ್ಗೆ ಉಪದೇಶಿಸುವೆನು. ಸರ್ವಶಕ್ತನಾದ ದೇವರ ಆಲೋಚನೆಗಳನ್ನು ನಾನು ನಿಮಗೆ ಮರೆಮಾಡುವುದಿಲ್ಲ.
|
15. ದುಷ್ಟನ ಮಕ್ಕಳೂ ಇನ್ನೂ ಉಳಿದುಕೊಂಡಿದ್ದರೆ ಭಯಂಕರವಾದ ರೋಗಗಳಿಂದ ಸಾಯುವರು; ಅವರ ವಿಧವೆಯರು ಅವರಿಗೋಸ್ಕರ ದುಃಖಿಸುವುದಿಲ್ಲ.
|
19. ದುಷ್ಟನು ಮಲಗಿಕೊಳ್ಳುವಾಗ ಐಶ್ವರ್ಯವಂತನಾಗಿದ್ದರೂ ನಿದ್ರೆಯಿಂದ ಎಚ್ಚೆತ್ತಾಗ ಅವನ ಐಶ್ವರ್ಯವೆಲ್ಲಾ ಹೊರಟು ಹೋಗಿರುವುದು.
|
20. ಆಪತ್ತುಗಳು ಇದ್ದಕ್ಕಿದ್ದಂತೆ ಬರುವ ಪ್ರವಾಹದಂತೆ ಅವನನ್ನು ಆವರಿಸಿಕೊಳ್ಳುತ್ತವೆ. ಬಿರುಗಾಳಿಯು ಅವನನ್ನು ರಾತ್ರಿಯಲ್ಲಿ ಹೊತ್ತುಕೊಂಡು ಹೋಗುವುದು.
|
21. ಪೂರ್ವದ ಗಾಳಿಯು ಅವನನ್ನು ಹೊತ್ತುಕೊಂಡು ಹೋಗುವುದರಿಂದ ಅವನು ಇಲ್ಲವಾಗುವನು. ಬಿರುಗಾಳಿಯು ಅವನನ್ನು ಮನೆಯೊಳಗಿಂದ ಹೊತ್ತುಕೊಂಡು ಹೋಗುವುದು.
|
22. ದುಷ್ಟನು ಬಿರುಗಾಳಿಯ ಶಕ್ತಿಯಿಂದ ಓಡಿಹೋಗಲು ಪ್ರಯತ್ನಿಸುವನು. ಆದರೆ ಬಿರುಗಾಳಿಯು ಕರುಣೆಯಿಲ್ಲದೆ ಅವನಿಗೆ ಬಡಿಯುವುದು.
|
23. ದುಷ್ಟನು ಓಡಿಹೋಗುತ್ತಿರಲು ಜನರು ಚಪ್ಪಾಳೆ ತಟ್ಟುವರು; ಅವನ ಮನೆಯೊಳಗಿಂದ ಓಡಿಹೋಗುತ್ತಿರಲು ಜನರು ಸೀಟಿ ಹೊಡೆಯುವರು.
|