2. “ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ.
|
5. “ದೇವರು ಮಹಾಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ಮಹಾಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು!
|
7. ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.
|
11. ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು.
|
13. “ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ.
|
15. ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು.
|
16. “ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ.
|
18. ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ.
|
23. ದೇವರಿಗೆ ಕೆಲಸವನ್ನು ನೇಮಿಸಲು ಯಾರಿಗೆ ಸಾಧ್ಯ? ಆತನಿಗೆ, ‘ನೀನು ತಪ್ಪನ್ನು ಮಾಡಿರುವೆ’ ಎಂದು ಹೇಳಲು ಯಾರಿಗೆ ಸಾಧ್ಯ?
|
24. “ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ. ಜನರು ಆತನನ್ನು ಕುರಿತು ಅನೇಕ ಸುತ್ತಿಗೀತೆಗಳನ್ನು ಬರೆದಿದ್ದಾರೆ.
|
26. ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. ಆತನು ಎಂದಿನಿಂದ ಜೀವಿಸಿರುವನೊ ನಮಗೆ ತಿಳಿಯದು.
|
27. “ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ.
|
29. ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು.
|
31. ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು.
|
32. ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು ಅದು ಆತನ ಚಿತ್ತಕ್ಕನುಸಾರವಾಗಿ ಹೊಡೆಯುವುದು.
|
33. ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು.”
|