5. ಈಗಲಾದರೋ ನಿನಗೆ ಕೇಡು ಬಂದಿದೆ; ಆದ್ದರಿಂದ ನೀನು ನಿರಾಶನಾಗಿರುವೆ. ಕೇಡು ನಿನಗೆ ಬಡಿದಿರುವುದರಿಂದ ಭ್ರಮೆಗೊಂಡಿರುವೆ.
|
6. ನೀನು ದೇವರಲ್ಲಿ ಭಯಭಕ್ತಿಯಿಂದಿರುವುದರಿಂದ ಆತನಲ್ಲಿ ಭರವಸವಿಡು. ನೀನು ನೀತಿವಂತನಾಗಿರುವುದರಿಂದ ಅದೇ ನಿನ್ನ ನಿರೀಕ್ಷೆಯಾಗಿರಲಿ.
|
10. ದುಷ್ಟರು ಸಿಂಹಗಳಂತೆ ಗರ್ಜಿಸುತ್ತಾ ಗುರುಗುಟ್ಟುವರು. ಆದರೆ ದೇವರು ದುಷ್ಟರನ್ನು ಸುಮ್ಮನಿರಿಸಿ, ಅವರ ಹಲ್ಲುಗಳನ್ನು ಮುರಿದುಹಾಕುವನು.
|
16. ಯಾವುದೋ ಒಂದು ಆತ್ಮ ನನ್ನ ಕಣ್ಣೆದುರಿನಲ್ಲಿ ಬಂದು ನಿಂತುಕೊಂಡಿತು; ಅದು ಏನೆಂಬುದು ನನಗೆ ಗೊತ್ತಾಗಲಿಲ್ಲ. ಸೂಕ್ಷ್ಮ ಧ್ವನಿಯೊಂದು ನನಗೆ ಕೇಳಿಬಂತು.
|
17. ಅದೇನಂದರೆ: ‘ದೇವರಿಗಿಂತಲೂ ನೀತಿವಂತನಾದ ಮನುಷ್ಯನಿರುವನೇ? ಮನುಷ್ಯನು ತನ್ನ ಸೃಷ್ಟಿ ಕರ್ತನಿಗಿಂತಲೂ ಶುದ್ಧನಾಗಿರುವನೇ?
|
18. ದೇವರು ತನ್ನ ಪರಲೋಕದ ಸೇವಕರುಗಳಲ್ಲಿಯೂ ಭರವಸವಿಡುವುದಿಲ್ಲ. ದೇವರು ತನ್ನ ದೂತರುಗಳಲ್ಲಿಯೂ ತಪ್ಪನ್ನು ಕಂಡುಹಿಡಿಯುವನು.
|
19. ಹೀಗಿರಲು ದೇವರು ಮನುಷ್ಯರಲ್ಲಿ ಎಷ್ಟೋ ತಪ್ಪುಗಳನ್ನು ಕಂಡುಹಿಡಿಯುವನು; ಮನುಷ್ಯರು ಮಣ್ಣಿನ ಮನೆಗಳಲ್ಲಿ ವಾಸಿಸುತ್ತಾರೆ. ಈ ಮಣ್ಣಿನ ಮನೆಗಳ ಅಸ್ತಿವಾರಗಳು ಧೂಳಿನಲ್ಲಿವೆ. ಅವರು ಹುಳಕ್ಕಿಂತಲೂ ಸುಲಭವಾಗಿ ಸಾವಿಗೀಡಾಗುವರು!
|
20. ಸೂರ್ಯೋದಯ ಮತ್ತು ಸೂರ್ಯಾಸ್ತಮಾನಗಳ ನಡುವೆ ಅವರು ನಜ್ಜುಗುಜ್ಜಾಗುವರು. ಅವರು ಸತ್ತು ನಿತ್ಯ ನಾಶವಾಗುವುದನ್ನು ಯಾರೂ ಗಮನಿಸುವುದಿಲ್ಲ.
|