3. ನನ್ನ ದುಃಖವನ್ನು ನೀನು ಅರ್ಥಮಾಡಿಕೊಳ್ಳುವಿ! ನನ್ನ ದುಃಖವು ಸಮುದ್ರದ ಮರಳಿಗಿಂತಲೂ ಭಾರವಾಗಿದೆ. ಆದ್ದರಿಂದಲೇ ನನ್ನ ಮಾತುಗಳು ಮೂರ್ಖತನದಂತೆ ಕಾಣುತ್ತಿವೆ.
|
4. ಸರ್ವಶಕ್ತನಾದ ದೇವರ ಬಾಣಗಳು ನನಗೆ ನಾಟಿಕೊಂಡಿವೆ. ನನ್ನ ಪ್ರಾಣವು ಅವುಗಳ ವಿಷವನ್ನು ಕುಡಿಯುತ್ತಿದೆ. ದೇವರು ಕಳುಹಿಸಿದ ಅಪಾಯಗಳು ನನಗೆ ವಿರೋಧವಾಗಿ ವ್ಯೂಹಕಟ್ಟಿವೆ.
|
10. ಆಗ ನನಗೆ ಆದರಣೆಯಾಗುವುದು. ಮಿತಿಯಿಲ್ಲದ ಯಾತನೆಯಲ್ಲಿಯೂ ಉಲ್ಲಾಸಿಸುವೆನು; ಪವಿತ್ರವಾಗಿರುವಾತನ ಆಜ್ಞೆಗಳಿಗೆ ನಾನು ಅವಿಧೇಯನಾಗಲೇ ಇಲ್ಲ.”
|
11. “ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇನಾಗುವುದೊ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೇ?
|
14. “ಕಷ್ಟದಲ್ಲಿರುವವನಿಗೆ ಅವನ ಸ್ನೇಹಿತನು ದಯೆ ತೋರಬೇಕು; ಒಂದುವೇಳೆ ಅವನು ಸರ್ವಶಕ್ತನಾದ ದೇವರಿಗೆ ವಿಮುಖನಾಗಿದ್ದರೂ ಅವನ ಸ್ನೇಹಿತನು ನಂಬಿಗಸ್ತನಾಗಿರಬೇಕು.
|
15. ಆದರೆ ನನ್ನ ಸಹೋದರರಾದ ನೀವು ನಂಬಿಗಸ್ತರಲ್ಲ. ನಾನು ನಿಮ್ಮನ್ನು ಆಶ್ರಯಿಸಿಕೊಳ್ಳಲಾರೆ. ಕೆಲವೊಮ್ಮೆ ಹರಿಯುವ, ಕೆಲವೊಮ್ಮೆ ಹರಿಯದಿರುವ ತೊರೆಗಳಂತೆ ನೀವು ದ್ರೋಹಿಗಳಾಗಿದ್ದೀರಿ.
|
17. ಆದರೆ ಆ ತೊರೆಗಳು ಬೇಸಿಗೆಕಾಲದಲ್ಲಿ ಇದ್ದಕ್ಕಿದ್ದಂತೆ ಹರಿಯದೆ ನಿಂತುಹೋಗುತ್ತವೆ. ಬೇಸಿಗೆ ಕಾಲದ ಕಾವಿಗೆ ನೀರು ಬತ್ತಿಹೋಗುತ್ತದೆ; ತೊರೆಗಳು ಇಲ್ಲವಾಗುತ್ತವೆ.
|
18. ವರ್ತಕರ ತಂಡಗಳು ಅವುಗಳ ದಾರಿಗಳಿಂದ ಬೇರೆ ಕಡೆಗೆ ತಿರುಗಿಕೊಳ್ಳುವರು. ಅವರು ಅಲೆಯುತ್ತಾ ಮರುಭೂಮಿಗೆ ಹೋಗಿ ಕಾಣದಂತಾಗುವರು.
|
22. ‘ನನಗೆ ಏನಾದರೂ ಕೊಡಿ’ ಎಂದಾಗಲಿ ‘ನನಗೋಸ್ಕರವಾಗಿ ನಿಮ್ಮ ಐಶ್ವರ್ಯದಿಂದ ಇಂಥವನಿಗೆ ಲಂಚಕೊಡಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.
|
23. ‘ಶತ್ರುವಿನ ಶಕ್ತಿಯಿಂದ ನನ್ನನ್ನು ರಕ್ಷಿಸಿರಿ. ವೈರಿಯಿಂದ ನನ್ನನ್ನು ರಕ್ಷಿಸಲು ಪ್ರಾಯಶ್ಚಿತ್ತ ಕೊಡಿರಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.
|
27. ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟ ಮಾಡುವವರಾಗಿದ್ದೀರಿ.
|
29. ಆದ್ದರಿಂದ ಈಗ ನಿಮ್ಮ ಮನಸ್ಸನ್ನು ಬದಲಾಯಿಸಿರಿ. ಆನ್ಯಾಯಸ್ಥರಾಗಿರಬೇಡಿ. ಹೌದು, ಮತ್ತೊಮ್ಮೆ ಯೋಚಿಸಿರಿ. ನಾನೇನೂ ತಪ್ಪು ಮಾಡಿಲ್ಲ.
|