2. ಮನುಷ್ಯನು ಉರಿಬಿಸಿಲಿನಲ್ಲಿ ಪ್ರಯಾಸಪಟ್ಟು ದುಡಿದ ಮೇಲೆ ತಂಪಾದ ನೆರಳನ್ನು ಬಯಸುವ ಗುಲಾಮನಂತಿದ್ದಾನೆ. ಮನುಷ್ಯನು, ದಿನದ ಕೂಲಿಗಾಗಿ ಕಾಯುತ್ತಿರುವ ಕೂಲಿಯವನಂತಿದ್ದಾನೆ.
|
4. ಮಲಗಿಕೊಳ್ಳುವಾಗ, ‘ಯಾವಾಗ ಏಳುವೆನೋ’ ಅಂದುಕೊಳ್ಳುವೆನು. ರಾತ್ರಿಯು ಬೆಳೆಯುತ್ತಾ ಹೋಗುವುದು; ಸೂರ್ಯೋದಯದವರೆಗೂ ಹೊರಳಾಡುವೆನು.
|
5. ನನ್ನ ದೇಹವು ಹುಳಗಳಿಂದಲೂ ಧೂಳಿನಿಂದಲೂ ಆವರಿಸಿಕೊಂಡಿದೆ. ನನ್ನ ಚರ್ಮವು ಬಿರಿದುಹೋಗಿ ಕೀವು ಸೋರುತ್ತಿರುವ ಕುರುಗಳಿಂದ ತುಂಬಿ ಹೋಗಿದೆ.
|
9. ಮೋಡವು ಕಣ್ಣಿಗೆ ಕಾಣದೆ ಇಲ್ಲವಾಗುವುದು. ಅದೇ ರೀತಿಯಲ್ಲಿ, ಸತ್ತು ಸಮಾಧಿಯಲ್ಲಿ ಹೂಳಲ್ಪಟ್ಟವನು ಹಿಂತಿರುಗಿ ಬರುವುದಿಲ್ಲ.
|
11. “ಆದ್ದರಿಂದ ನಾನು ಮೌನವಾಗಿರುವುದಿಲ್ಲ! ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರುಹೇಳುವೆನು.
|
13. ನನ್ನ ಹಾಸಿಗೆಯು ನನ್ನನ್ನು ಸಂತೈಸುತ್ತದೆ; ನನ್ನ ಮಂಚವು ನನಗೆ ವಿಶ್ರಾಂತಿಯನ್ನೂ ಉಪಶಮನವನ್ನೂ ಕೊಡುತ್ತದೆ ಎಂದು ನಾನು ಆಲೋಚಿಸುವಾಗ,
|
16. ನನ್ನ ಜೀವಿತವು ನನಗೆ ಅಸಹ್ಯವಾಗಿದೆ. ಶಾಶ್ವತವಾಗಿ ಬದುಕಲು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬಂಟಿಗನನ್ನಾಗಿ ಬಿಟ್ಟು ಬಿಡು! ನನ್ನ ಜೀವಿತಕ್ಕೆ ಅರ್ಥವೇ ಇಲ್ಲ!
|
19. ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ.
|
20. ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನಿನ್ನ ಗುರಿ ತರಬೇತಿಗಾಗಿ ನನ್ನನ್ನೇಕೆ ಉಪಯೋಗಿಸಿದೆ? ನಾನು ನಿನಗೆ ಸಮಸ್ಯೆಯಾದೆನೇ?
|
21. ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”
|