1. ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೊ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
|
2. ಯೇಸು ಮತ್ತು ಆತನ ಶಿಷ್ಯರು ರಾತ್ರಿಯ ಊಟಕ್ಕಾಗಿ ಕುಳಿತುಕೊಂಡಿದ್ದರು. ಯೇಸುವಿಗೆ ದ್ರೋಹ ಮಾಡುವಂತೆ ಸೈತಾನನು ಇಸ್ಕರಿಯೋತ ಯೂದನನ್ನು ಈಗಾಗಲೇ ಪ್ರೇರೇಪಿಸಿದ್ದನು. (ಯೂದನು ಸಿಮೋನನ ಮಗ.)
|
3. ತಂದೆಯು ಪ್ರತಿಯೊಂದರ ಮೇಲೆ ತನಗೆ ಅಧಿಕಾರವನ್ನು ಕೊಟ್ಟಿದ್ದಾನೆಂಬುದು ಯೇಸುವಿಗೆ ತಿಳಿದಿತ್ತು. ಅಲ್ಲದೆ ತಾನು ದೇವರ ಬಳಿಯಿಂದ ಬಂದಿರುವುದಾಗಿಯೂ ಮತ್ತು ಈಗ ದೇವರ ಬಳಿಗೆ ಮರಳಿ ಹೋಗುತ್ತಿರುವುದಾಗಿಯೂ ಆತನಿಗೆ ಗೊತ್ತಿತ್ತು.
|
4. ಅವರು ಊಟ ಮಾಡುತ್ತಿದ್ದಾಗ ಯೇಸು ಎದ್ದು ತನ್ನ ಮೇಲಂಗಿಯನ್ನು ತೆಗೆದಿಟ್ಟನು; ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡನು.
|
5. ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.
|
7. ಯೇಸು, “ಈಗ ನಾನು ಏನು ಮಾಡುತ್ತಿರುವೆನೆಂದು ನಿನಗೆ ಗೊತ್ತಿಲ್ಲ. ಆದರೆ ಮುಂದೆ ನೀನು ಅರ್ಥಮಾಡಿಕೊಳ್ಳುವೆ” ಎಂದು ಉತ್ತರಕೊಟ್ಟನು.
|
8. ಪೇತ್ರನು, “ಇಲ್ಲ! ನನ್ನ ಪಾದಗಳನ್ನು ನೀನು ಎಂದಿಗೂ ತೊಳೆಯಕೂಡದು” ಎಂದು ಪ್ರತಿಭಟಿಸಿದನು. ಯೇಸು, “ನಿನ್ನ ಪಾದಗಳನ್ನು ನಾನು ತೊಳೆಯದಿದ್ದರೆ, ನನ್ನಲ್ಲಿ ನಿನಗೆ ಪಾಲು ಇಲ್ಲ”ಎಂದು ಹೇಳಿದನು.
|
9. ಆಗ ಸೀಮೋನ್ ಪೇತ್ರನು, “ಪ್ರಭುವೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನೂ ತೊಳೆ!” ಎಂದು ಕೇಳಿಕೊಂಡನು.
|
10. ಯೇಸು, “ಸ್ನಾನಮಾಡಿಕೊಂಡವನ ದೇಹವೆಲ್ಲಾ ಶುದ್ಧವಾಗಿರುತ್ತದೆ. ಅವನು ತನ್ನ ಪಾದಗಳನ್ನು ತೊಳೆದುಕೊಂಡರೆ ಸಾಕು. ನೀವು ಸಹ ಶುದ್ಧರಾಗಿದ್ದೀರಿ, ಆದರೆ ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
|
11. ತನಗೆ ದ್ರೋಹ ಮಾಡುವ ವ್ಯಕ್ತಿ ಯಾರೆಂದು ಯೇಸುವಿಗೆ ತಿಳಿದಿತ್ತು. ಆದಕಾರಣ ಆತನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಶುದ್ಧನಲ್ಲ” ಎಂದು ಹೇಳಿದನು.
|
12. ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಇಂತೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ?
|
13. ನೀವು ನನ್ನನ್ನು, ಗುರುವೇ, ಪ್ರಭುವೇ؆ ಎಂದು ಕರೆಯುತ್ತೀರಿ. ನೀವು ಹಾಗೆ ಕರೆಯುವುದು ಸರಿ. ಏಕೆಂದರೆ ನಾನು ಗುರುವೂ ಹೌದು, ಪ್ರಭುವೂ ಹೌದು.
|
14. ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು.
|
16. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸೇವಕನು ಒಡೆಯನಿಗಿಂತ ದೊಡ್ಡವನಲ್ಲ. ಆದ್ದರಿಂದ ಕೆಲಸಕ್ಕಾಗಿ ಕಳುಹಿಸಲ್ಪಟ್ಟವನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
|
18. ”ನಾನು ನಿಮ್ಮೊಲ್ಲರ ಬಗ್ಗೆ ಮಾತಾಡುತ್ತಿಲ್ಲ. ನಾನು ಆರಿಸಿಕೊಂಡಿರುವ ಜನರ ಬಗ್ಗೆ ನನಗೆ ಗೊತ್ತಿದೆ. ಆದರೆ ನನ್ನೊಂದಿಗೆ ಊಟ ಮಾಡುವವನೇ ನನಗೆ ದ್ರೋಹ ಬಗೆದನು.؆ ಎಂಬ ಪವಿತ್ರ ಗ್ರಂಥದ ಮಾತು ನೆರವೇರಬೇಕು.
|
19. ಅದು ನೆರವೇರುವಾಗ ನಾನೇ ಕ್ರಿಸ್ತನೆಂದು ನೀವು ನಂಬಬೇಕೆಂದು, ಅದು ನೆರವೇರವುದಕ್ಕಿಂತ ಮೊದಲೇ ಅದನ್ನು ನಿಮಗೆ ತಿಳಿಸುತ್ತಿದ್ದೇನೆ.
|
20. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನು ಕಳುಹಿಸುವ ಯಾರನ್ನಾದರೂ ಸ್ವೀಕರಿಸಿಕೊಳ್ಳುವವನು ನನ್ನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ. ನನ್ನನ್ನು ಸ್ವೀಕರಿಸಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುವವನಾಗಿದ್ದಾನೆ.”
|
21. ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.
|
22. ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ.
|
24. ಸೀಮೋನ್ ಪೇತ್ರನು ಈ ಶಿಷ್ಯನಿಗೆ, ಯಾರನ್ನು ಕುರಿತು ಯೇಸು ಹೇಳುತ್ತಿದ್ದಾನೆಂದು ಕೇಳಿ ತಿಳಿದುಕೊಳ್ಳಲು ಸನ್ನೆ ಮಾಡಿದನು.
|
26. ಯೇಸು, “ನಾನು ಈ ರೊಟ್ಟಿಯನ್ನು ಬಟ್ಟಲಲ್ಲಿ ಅದ್ದಿ ಅದನ್ನು ಯಾರಿಗೆ ಕೊಡುತ್ತೇನೋ ಅವನೇ ನನಗೆ ದ್ರೋಹ ಮಾಡುವನು” ಎಂದು ಹೇಳಿ ರೊಟ್ಟಿಯ ತುಂಡೊಂದನ್ನು ತೆಗೆದುಕೊಂಡು ಅದನ್ನು ಬಟ್ಟಲಲ್ಲಿ ಅದ್ದಿ ಸಿಮೋನನ ಮಗನಾದ ಇಸ್ಕರಿಯೋತ ಯೂದನಿಗೆ ಕೊಟ್ಟನು.
|
27. ಯೂದನು ಆ ರೊಟ್ಟಿಯನ್ನು ತೆಗೆದುಕೊಂಡಾಗ ಸೈತಾನನು ಅವನೊಳಗೆ ಪ್ರವೇಶಿಸಿದನು. ಯೇಸು ಯೂದನಿಗೆ, “ನೀನು ಮಾಡುವ ಕೆಲಸವನ್ನು ಬೇಗನೆ ಮಾಡು!” ಎಂದು ಹೇಳಿದನು.
|
29. ಶಿಷ್ಯಸಮುದಾಯದ ಹಣದ ಪೆಟ್ಟಿಗೆಯು ಯೂದನ ವಶದಲ್ಲಿತ್ತು. ಆದ್ದರಿಂದ ಹಬ್ಬಕ್ಕೆ ಅಗತ್ಯವಾದ ಕೆಲವು ವಸ್ತುಗಳನ್ನು ತೆಗೆದುಕೊಂಡು ಬರುವುದಕ್ಕಾಗಲಿ ಬಡಜನರಿಗೆ ಏನಾದರೂ ಕೊಡುವುದಕ್ಕಾಗಲಿ ಯೇಸು ಅವನಿಗೆ ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿಕೊಂಡರು.
|
31. ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು.
|
33. ಯೇಸು, “ನನ್ನ ಮಕ್ಕಳೇ, ಇನ್ನು ಸ್ವಲ್ಪ ಸಮಯ ಮಾತ್ರ ನಾನು ನಿಮ್ಮೊಂದಿಗೆ ಇರುತ್ತೇನೆ. ನೀವು ನನಗಾಗಿ ಹುಡುಕುವಿರಿ. ನಾನು ಯೆಹೂದ್ಯರಿಗೆ ಹೇಳಿದ್ದನ್ನು ನಿಮಗೂ ಹೇಳುತ್ತೇನೆ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ.
|
35. ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನೀವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ನೀವು ನನ್ನ ಶಿಷ್ಯರೆಂಬುದನ್ನು ಎಲ್ಲಾ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು.
|
36. ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನೀನು ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು. ಯೇಸು, “ನಾನು ಹೋಗುವಲ್ಲಿಗೆ ಈಗ ನೀನು ಹಿಂಬಾಲಿಸಿಕೊಂಡು ಬರಲಾರೆ. ಆದರೆ ಮುಂದೆ ನೀನು ಹಿಂಬಾಲಿಸಿಕೊಂಡು ಬರುವೆ” ಎಂದು ಉತ್ತರಕೊಟ್ಟನು.
|
37. ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.
|
38. ಯೇಸು, “ನೀನು ನನಗೋಸ್ಕರ ನಿನ್ನ ಪ್ರಾಣವನ್ನು ನಿಜವಾಗಿಯೂ ಕೊಡುವಿಯಾ? ನಾನು ನಿನಗೆ ಸತ್ಯವನ್ನು ಹೇಳುತ್ತೇನೆ, ನಾಳೆ ಮುಂಜಾನೆ ಕೋಳಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ತಿಳಿದಿಲ್ಲವೆಂದು ಮೂರುಸಾರಿ ಹೇಳುವೆ” ಎಂದು ಉತ್ತರಕೊಟ್ಟನು.
|