3. ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.
|
6. ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್ಗಳಷ್ಟು ನೀರು ಹಿಡಿಯುತ್ತಿತ್ತು.
|
7. ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರನ್ನು ತುಂಬಿರಿ” ಎಂದು ಹೇಳಿದನು. ಅಂತೆಯೇ ಸೇವಕರು ಆ ಬಾನೆಗಳ ಕಂಠದವರೆಗೂ ನೀರನ್ನು ತುಂಬಿದರು.
|
8. ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು.
|
9. ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,
|
10. “ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.
|
11. ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.
|
12. ಬಳಿಕ ಯೇಸು ಕಪೆರ್ನೌಮ್ ಎಂಬ ಊರಿಗೆ ಹೋದನು. ಯೇಸುವಿನ ತಾಯಿ ಮತ್ತು ಸಹೋದರರು ಹಾಗೂ ಆತನ ಶಿಷ್ಯರು ಆತನೊಡನೆ ಹೋದರು. ಅವರೆಲ್ಲರೂ ಕಪೆರ್ನೌಮ್ನಲ್ಲಿ ಕೆಲವು ದಿನ ತಂಗಿದ್ದರು.
|
14. ದೇವಾಲಯದಲ್ಲಿ ಜನರು ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುತ್ತಿರುವುದನ್ನು ಯೇಸು ಕಂಡನು. ಇತರ ಕೆಲವು ಜನರು ಮೇಜುಗಳ ಸಮೀಪದಲ್ಲಿ ಕುಳಿತುಕೊಂಡು ಹಣ ವಿನಿಮಯ ಮಾಡುತ್ತಿದ್ದರು ಮತ್ತು ವ್ಯಾಪಾರ ಮಾಡುತ್ತಿದ್ದರು.
|
15. ಯೇಸು ಹಗ್ಗದ ಕೆಲವು ತುಂಡುಗಳನ್ನು ತೆಗೆದುಕೊಂಡು ಅವುಗಳಿಂದ ಒಂದು ಚಾವಟಿ ಮಾಡಿ ಆ ಜನರನ್ನು ಮತ್ತು ದನಕುರಿಗಳನ್ನು ಬಲವಂತವಾಗಿ ದೇವಾಲಯದಿಂದ ಹೊರಗಟ್ಟಿದನು. ಯೇಸು ಮೇಜುಗಳನ್ನು ಕೆಡವಿ, ಹಣ ವಿನಿಮಯ ಮಾಡುತ್ತಿದ್ದ ಜನರ ಹಣವನ್ನು ಚೆಲ್ಲಿದನು.
|
16. ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವುಗಳನ್ನು ಹೊರಗೆ ತೆಗೆದುಕೊಂಡು ಹೋಗಿರಿ! ನನ್ನ ತಂದೆಯ ಮನೆಯನ್ನು ವ್ಯಾಪಾರ ಸ್ಥಳವನ್ನಾಗಿ ಮಾಡಬೇಡಿ!” ಎಂದು ಹೇಳಿದನು.
|
17. “ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಕೀರ್ತನೆ 69:9 ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.
|
18. ಯೆಹೂದ್ಯರು ಯೇಸುವಿಗೆ, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತುಪಡಿಸಲು ಯಾವ ಸೂಚಕಕಾರ್ಯವನ್ನು ಮಾಡುವೆ?” ಎಂದು ಕೇಳಿದರು.
|
20. ಯೆಹೂದ್ಯರು “ಈ ದೇವಾಲಯವನ್ನು ಕಟ್ಟಲು ಜನರು ನಲವತ್ತಾರು ವರ್ಷಗಳ ಕಾಲ ದುಡಿದಿದ್ದಾರೆ! ನೀನು ಮೂರೇ ದಿನಗಳಲ್ಲಿ ಇದನ್ನು ಕಟ್ಟಬಲ್ಲೆಯಾ?” ಎಂದು ಕೇಳಿದರು.
|
22. ಯೇಸು ಸತ್ತವರೊಳಗಿಂದ ಎದ್ದು ಬಂದಾಗ ಆತನ ಶಿಷ್ಯರು ಆತನ ಈ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.)
|
23. ಯೇಸು ಪಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದನು. ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿದಾಗ ಅನೇಕ ಜನರು ಆತನನ್ನು ನಂಬಿದರು.
|
25. ಜನರ ಬಗ್ಗೆ ಆತನಿಗೆ ಯಾರೂ ತಿಳಿಸುವ ಅಗತ್ಯವಿರಲಿಲ್ಲ. ಮನುಷ್ಯನ ಮನಸ್ಸಿನಲ್ಲಿ ಏನಿದೆ ಎಂಬುದು ಯೇಸುವಿಗೆ ಗೊತ್ತಿತ್ತು.
|