1. ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.
|
3. ಆದ್ದರಿಂದ ಯೇಸುವಿನ ಸಹೋದರರು ಆತನಿಗೆ, “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಆಗ ಅಲ್ಲಿರುವ ನಿನ್ನ ಹಿಂಬಾಲಕರು ನೀನು ಮಾಡುವ ಅದ್ಭುತಕಾರ್ಯಗಳನ್ನು ನೋಡುವರು.
|
4. ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.
|
6. ಯೇಸು ತನ್ನ ಸಹೋದರರಿಗೆ, “ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ. ನಿಮಗಾದರೋ ಹೋಗಲು ಎಲ್ಲಾ ಸಮಯವೂ ಸರಿಯಾಗಿರುತ್ತದೆ.
|
7. ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.
|
8. ಆದ್ದರಿಂದ ನೀವು ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ” ಎಂದು ಹೇಳಿದನು.
|
12. ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.
|
13. ಆದರೆ ಯೇಸುವಿನ ಬಗ್ಗೆ ಬಹಿರಂಗವಾಗಿ ಮಾತಾಡಲು ಆ ಜನರಲ್ಲಿ ಯಾರಿಗೂ ಸಾಕಷ್ಟು ಧೈರ್ಯವಿರಲಿಲ್ಲ. ಜನರು ಯೆಹೂದ್ಯ ನಾಯಕರುಗಳಿಗೆ ಹೆದರಿಕೊಂಡಿದ್ದರು.
|
15. ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.
|
16. ಯೇಸು, “ನಾನು ಉಪದೇಶಿಸುವ ಸಂಗತಿಗಳು ನನ್ನ ಸ್ವಂತವಾದವುಗಳಲ್ಲ. ನನ್ನ ಉಪದೇಶವು ನನ್ನನ್ನು ಕಳುಹಿಸಿದಾತನಿಂದ (ದೇವರು) ಬರುತ್ತದೆ.
|
17. ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.
|
18. ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟು ಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.
|
19. ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.
|
20. ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು.
|
22. ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಈ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್ದಿನದಲ್ಲಿ ಮಗುವಿಗೆ ಸುನ್ನತಿ ಮಾಡುತ್ತೀರಿ.
|
23. ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?
|
26. ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.
|
27. ಆದರೆ ಈ ಮನುಷ್ಯನ ಮನೆಯು ಎಲ್ಲಿದೆ ಎಂಬುದು ನಮಗೆ ಗೊತ್ತಿದೆ. ಅಲ್ಲದೆ, ಕ್ರಿಸ್ತನು ಬಂದಾಗ, ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿಯುವುದಿಲ್ಲ” ಎಂದು ಮಾತಾಡಿಕೊಂಡರು.
|
28. ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.
|
29. ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು, ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
|
30. ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.
|
31. ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.
|
32. ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.
|
33. ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.
|
34. ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡು ಕೊಳ್ಳುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.
|
35. ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?
|
36. ಇವನು (ಯೇಸು), ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ؆ ಎನ್ನುತ್ತಾನೆ. ಅಲ್ಲದೆ ಇವನು, ನಾನು ಇರುವಲ್ಲಿಗೆ ನೀವು ಬರಲಾರಿರಿ؆ ಎನ್ನುತ್ತಾನೆ. ಇದರರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
|
37. ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
|
38. ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.
|
39. ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.
|
42. ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೇತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.
|
45. ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು.
|
48. ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ!
|
49. ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು.
|
51. ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.
|
52. ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.
|