2. “ಚರ್ಮರೋಗವಿದ್ದು ವಾಸಿಯಾದ ಜನರು ಅನುಸರಿಸಬೇಕಾದ ನಿಯಮಗಳು ಇಂತಿವೆ. ಇವರನ್ನು ಶುದ್ಧೀಕರಣಕ್ಕಾಗಿ ಯಾಜಕನ ಬಳಿಗೆ ಕರೆದುಕೊಂಡು ಬಂದಾಗ ಅನುಸರಿಸತಕ್ಕ ನಿಯಮಗಳು ಯಾವುವೆಂದರೆ: “ಚರ್ಮರೋಗವಿದ್ದ ವ್ಯಕ್ತಿಯನ್ನು ಯಾಜಕನು ಪರೀಕ್ಷಿಸಬೇಕು.
|
4. ಆ ವ್ಯಕ್ತಿಯು ಆರೋಗ್ಯವಂತನಾಗಿದ್ದರೆ, ಆಗ ಯಾಜಕನು ಈ ಸಂಗತಿಗಳನ್ನು ಮಾಡುವುದಕ್ಕೆ ಅವನಿಗೆ ಹೇಳುವನು. ಆ ವ್ಯಕ್ತಿಯು ಎರಡು ಜೀವಂತವಾದ ಶುದ್ಧ ಪಕ್ಷಿಗಳನ್ನು ತರಬೇಕು. ಅಲ್ಲದೆ, ಅವನು ದೇವದಾರುಮರದ ತುಂಡನ್ನು, ಕೆಂಪು ಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕು.
|
6. ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರುಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.
|
7. ಯಾಜಕನು ಚರ್ಮರೋಗವಿದ್ದ ವ್ಯಕ್ತಿಯ ಮೇಲೆ ರಕ್ತವನ್ನು ಏಳುಸಲ ಚಿಮಿಕಿಸಬೇಕು. ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಬಳಿಕ ಯಾಜಕನು ಬಯಲಿಗೆ ಹೋಗಿ ಜೀವಂತವಾಗಿರುವ ಪಕ್ಷಿಯನ್ನು ಬಿಟ್ಟು ಬಿಡಬೇಕು.
|
8. “ಬಳಿಕ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸರ್ವಾಂಗಕ್ಷೌರ ಮಾಡಿಕೊಂಡು ಸ್ನಾನ ಮಾಡಬೇಕು. ಆಗ ಅವನು ಶುದ್ಧನಾಗುವನು. ಬಳಿಕ ಆ ವ್ಯಕ್ತಿ ಪಾಳೆಯದೊಳಗೆ ಹೋಗಬಹುದು. ಆದರೆ ಅವನು ತನ್ನ ಡೇರೆಯಿಂದ ಏಳು ದಿನಗಳವರೆಗೆ ಹೊರಗೆ ಇರಬೇಕು.
|
9. ಏಳನೆಯ ದಿನದಲ್ಲಿ ಅವನು ತನ್ನ ಎಲ್ಲಾ ಕೂದಲನ್ನು ಕ್ಷೌರ ಮಾಡಿಕೊಳ್ಳಬೇಕು. ಅವನು ತನ್ನ ತಲೆಯ, ಗಡ್ಡದ ಮತ್ತು ಹುಬ್ಬಿನ ಕೂದಲನ್ನು, ಹೌದು, ಎಲ್ಲಾ ಕೂದಲನ್ನು ಕ್ಷೌರ ಮಾಡಿಸಿಕೊಳ್ಳಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದು ನೀರಿನಲ್ಲಿ ಸ್ನಾನಮಾಡಬೇಕು. ಅಂದಿನಿಂದ ಅವನು ಶುದ್ಧನಾಗಿರುವನು.
|
10. “ಎಂಟನೆಯ ದಿನದಲ್ಲಿ ಅವನು ಯಾವ ದೋಷವಿಲ್ಲದ ಎರಡು ಟಗರುಗಳನ್ನೂ ಒಂದು ವರ್ಷದ ಹೆಣ್ಣು ಕುರಿಮರಿಯನ್ನೂ ಎಣ್ಣೆ ಬೆರೆಸಿದ ಇಪ್ಪತ್ತನಾಲ್ಕು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನೂ ತೆಗೆದುಕೊಂಡು ಬರಬೇಕು. ಈ ಶ್ರೇಷ್ಠ ಗೋಧಿಹಿಟ್ಟು ಧಾನ್ಯನೈವೇದ್ಯಕ್ಕಾಗಿರುತ್ತದೆ. ಅವನು ಒಂದು ಸೇರು ಆಲಿವ್ ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.
|
11. ಯಾಜಕನು ಅವನನ್ನೂ ಅವನ ಸಮರ್ಪಣೆಗಳನ್ನೂ ದೇವದರ್ಶನಗುಡಾರದ ಬಾಗಿಲಿನಲ್ಲಿ ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು. (ಈ ಯಾಜಕನೇ ಅವನನ್ನು ಶುದ್ಧನೆಂದು ಪ್ರಕಟಿಸುವವನಾಗಿರುತ್ತಾನೆ.)
|
12. ಯಾಜಕನು ಟಗರುಗಳಲ್ಲಿ ಒಂದನ್ನು ದೋಷಪರಿಹಾರಕ ಯಜ್ಞವಾಗಿ ಅರ್ಪಿಸುವನು. ಅವನು ಆ ಟಗರನ್ನೂ ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯ ಸಮರ್ಪಣೆಯಾಗಿ ನಿವಾಳಿಸುವನು.
|
13. ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಞಪಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ.
|
14. “ಯಾಜಕನು ದೋಷಪರಿಹಾರಕ ಯಜ್ಞಪಶುವಿನ ರಕ್ತದಿಂದ ಸ್ವಲ್ಪವನ್ನು ತೆಗೆದುಕೊಂಡು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
|
16. ಬಳಿಕ ಯಾಜಕನು ತನ್ನ ಬಲಗೈಯ ಬೆರಳನ್ನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಎಣ್ಣೆಯನ್ನು ಏಳುಸಲ ಚಿಮಿಕಿಸಬೇಕು.
|
17. ಯಾಜಕನು ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧನಾಗಲಿರುವ ವ್ಯಕ್ತಿಯ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಅಂದರೆ ಬಲಗಿವಿಯ ತುದಿಗೆ, ಬಲಗೈಯ ಹೆಬ್ಬೆರಳಿಗೆ, ಬಲಗಾಲಿನ ಹೆಬ್ಬೆರಳಿಗೆ ಹಚ್ಚುವನು.
|
18. ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಯ ತಲೆಗೆ ಹಚ್ಚುವನು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧನನ್ನಾಗಿ ಮಾಡುವನು.
|
19. “ತರುವಾಯ ಯಾಜಕನು ಶುದ್ಧನಾಗಿ ಮಾಡಲ್ಪಡುವ ವ್ಯಕ್ತಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಬೇಕು. ಯಾಜಕನು ಪಾಪಪರಿಹಾರಕ ಯಜ್ಞಮಾಡುವುದರ ಮೂಲಕ ಆ ವ್ಯಕ್ತಿಯ ಅಶುದ್ಧತ್ವಕ್ಕಾಗಿ ಪ್ರಾಯಶ್ಚಿತ್ತ ಮಾಡುವನು. ಅದರ ನಂತರ ಸರ್ವಾಂಗಹೋಮಕ್ಕಾಗಿ ಯಾಜಕನು ಎರಡನೆಯ ಟಗರನ್ನು ವಧಿಸುವನು.
|
20. ಬಳಿಕ ಯಾಜಕನು ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನು ಅರ್ಪಿಸುವನು. ಈ ರೀತಿಯಾಗಿ ಯಾಜಕನು ಆ ವ್ಯಕ್ತಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವನು ಶುದ್ಧನಾಗುವನು.
|
21. “ಆದರೆ ಅವನು ಬಡವನಾಗಿದ್ದು ಆ ಸಮರ್ಪಣೆಗಳನ್ನು ಕೊಡುವುದಕ್ಕೆ ಅಶಕ್ತನಾಗಿದ್ದರೆ, ಆಗ ಅವನು ದೋಷಪರಿಹಾರಕ್ಕಾಗಿ ಒಂದು ಟಗರನ್ನು ತೆಗೆದುಕೊಳ್ಳಬೇಕು. ಅದು ಯೆಹೋವನಿಗೆ ನೈವೇದ್ಯವಾಗಿ ನಿವಾಳಿಸಲ್ಪಡುವ ಅರ್ಪಣೆಯಾಗಿರುವುದು. ಹೀಗೆ ಯಾಜಕನು ಆ ವ್ಯಕಿಗಾಗಿ ಪ್ರಾಯಶ್ಚಿತ್ತ ಮಾಡಬಹುದು. ಅವನು ಎಣ್ಣೆ ಬೆರೆಸಿದ ಮೂರು ಸೇರು ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಳ್ಳಬೇಕು. ಗೋಧಿಹಿಟ್ಟು ಧಾನ್ಯಸಮರ್ಪಣೆಯಾಗಿ ಉಪಯೋಗಿಸಲ್ಪಡುವುದು. ಅವನು ಒಂದು ಸೇರು ಆಲಿವ್ ಎಣ್ಣೆಯನ್ನು,
|
22. ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.
|
23. “ಎಂಟನೆಯ ದಿನದಲ್ಲಿ, ಅವನು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು. ಅವನು ಶುದ್ಧನಾಗುವಂತೆ ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
|
24. ದೋಷಪರಿಹಾರಕ್ಕಾಗಿ ತಂದ ಕುರಿಮರಿಯನ್ನು ಮತ್ತು ಎಣ್ಣೆಯನ್ನು ಯಾಜಕನು ತೆಗೆದುಕೊಂಡು, ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
|
25. ಬಳಿಕ ದೋಷಪರಿಹಾರಕ ಯಜ್ಞವಾದ ಕುರಿಮರಿಯನ್ನು ಯಾಜಕನು ವಧಿಸುವನು. ಯಾಜಕನು ದೋಷಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
|
28. ಬಳಿಕ ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ದೋಷಪರಿಹಾರಕ ಯಜ್ಞದ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಹಚ್ಚುವನು; ಸ್ವಲ್ಪ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೆ ಹಚ್ಚಬೇಕು; ಸ್ವಲ್ಪ ಎಣ್ಣೆಯನ್ನು ಬಲಗೈಯ ಹೆಬ್ಬೆರಳಿಗೂ ಸ್ವಲ್ಪ ಎಣ್ಣೆಯನ್ನು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
|
29. ಯಾಜಕನು ತನ್ನ ಅಂಗೈಯಲ್ಲಿ ಉಳಿದ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ತಲೆಗೆ ಹಚ್ಚಬೇಕು. ಹೀಗೆ ಯಾಜಕನು ಆ ವ್ಯಕ್ತಿಯನ್ನು ಯೆಹೋವನ ಸನ್ನಿಧಿಯಲ್ಲಿ ಶುದ್ಧೀಕರಿಸುವನು.
|
30. “ಬಳಿಕ ಯಾಜಕನು ಬೆಳವಕ್ಕಿಗಳಲ್ಲಿ ಅಥವಾ ಪಾರಿವಾಳ ಮರಿಗಳಲ್ಲಿ ಒಂದನ್ನು ಸಮರ್ಪಿಸಬೇಕು (ಆ ವ್ಯಕ್ತಿಯು ಯಾವುದನ್ನು ಕೊಡಲು ಶಕ್ತನಾಗಿದ್ದಾನೊ ಅದನ್ನು ಅವನು ಸಮರ್ಪಿಸಬೇಕು.)
|
31. ಅವನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಅವನು ಪಕ್ಷಿಗಳನ್ನು ಧಾನ್ಯಸಮರ್ಪಣೆಯೊಂದಿಗೆ ಅರ್ಪಿಸಬೇಕು. ಹೀಗೆ ಯಾಜಕನು ಆ ವ್ಯಕ್ತಿಯ ಶುದ್ಧೀಕರಣಕ್ಕಾಗಿ ಯೆಹೋವನ ಸನ್ನಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು; ಆಗ ಆ ವ್ಯಕ್ತಿ ಶುದ್ಧನಾಗುವನು.”
|
32. ಚರ್ಮರೋಗದಿಂದ ವಾಸಿಯಾದವನನ್ನು ಶುದ್ಧೀಕರಿಸುವ ನಿಯಮಗಳು ಇವೇ. ಶುದ್ಧರಾಗಲು ವಿಧಿಬದ್ಧವಾದ ಯಜ್ಞಗಳನ್ನು ಅರ್ಪಿಸುವುದಕ್ಕೆ ಶಕ್ತರಲ್ಲದ ಜನರಿಗೋಸ್ಕರವಿರುವ ನಿಯಮಗಳು ಇವೇ.
|
34. “ನಾನು ನಿಮ್ಮ ಜನರಿಗೆ ಕಾನಾನ್ ದೇಶವನ್ನು ಕೊಡುತ್ತಿದ್ದೇನೆ. ನಿಮ್ಮ ಜನರು ಆ ದೇಶದಲ್ಲಿ ಪ್ರವೇಶಿಸಿ ನೆಲೆಸುವರು. ಆಗ ಯಾರ ಮನೆಯಲ್ಲಾದರೂ ಬೂಷ್ಟು ಉಂಟಾದರೆ,
|
36. “ಆಗ ಯಾಜಕನು ಬೂಷ್ಟನ್ನು ನೋಡಲು ಮನೆಯ ಒಳಗೆ ಹೋಗುವುದಕ್ಕಿಂತ ಮೊದಲು ಆ ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರತೆಗೆಯಲು ಜನರಿಗೆ ಆಜ್ಞಾಪಿಸಬೇಕು. ಆಗ ಯಾಜಕನು ಮನೆಯಲ್ಲಿರುವ ಪ್ರತಿಯೊಂದು ವಸ್ತುವನ್ನು ಅಶುದ್ಧವೆಂದು ಹೇಳಬೇಕಾಗಿರುವುದಿಲ್ಲ. ಜನರು ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರಗೆ ತೆಗೆದ ನಂತರ ಯಾಜಕನು ಮನೆಯೊಳಗೆ ಹೋಗುವನು.
|
37. ಯಾಜಕನು ಬೂಷ್ಟನ್ನು ನೋಡುವನು. ಗೋಡೆಗಳಲ್ಲಿರುವ ಬೂಷ್ಟಿನಲ್ಲಿ ರಂಧ್ರಗಳಿದ್ದು ಅದು ಹಸಿರು ಅಥವಾ ಕೆಂಪು ಬಣ್ಣದ್ದಾಗಿದ್ದರೆ ಮತ್ತು ಬೂಷ್ಟು ಗೋಡೆಗಿಂತ ತಗ್ಗಾಗಿದ್ದರೆ,
|
40. ಆಗ ಯಾಜಕನು ಬೂಷ್ಟು ಇರುವ ಕಲ್ಲುಗಳನ್ನು ಒಡೆದುಹಾಕಿ ಬಿಸಾಡಬೇಕೆಂದು ಆಜ್ಞಾಪಿಸಬೇಕು. ಅವರು ಆ ಕಲ್ಲುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.
|
41. ತರುವಾಯ ಯಾಜಕನು ಮನೆಯ ಒಳಗಿನ ಗೋಡೆಯನ್ನೆಲ್ಲಾ ಕೆರೆಯಿಸಬೇಕು. ಜನರು ಕೆರೆದುಹಾಕುವ ಮಣ್ಣನ್ನು ಪಟ್ಟಣದ ಹೊರಗೆ ಎಸೆದುಬಿಡಬೇಕು. ಅವರು ಅದನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.
|
43. “ಒಂದುವೇಳೆ ಒಬ್ಬನು ಹಳೆಯ ಕಲ್ಲುಗಳನ್ನು ಮತ್ತು ಮಣ್ಣನ್ನು ತೆಗೆಸಿ ಹೊಸ ಕಲ್ಲುಗಳನ್ನು ಮಣ್ಣನ್ನು ಮತ್ತು ಹೊಸ ಮಡ್ಡಿಯನ್ನು ಹಾಕಿಸಿದ್ದರೂ ಬೂಷ್ಟು ಮತ್ತೆ ಆ ಮನೆಯಲ್ಲಿ ಕಾಣಿಸಿಕೊಂಡರೆ,
|
44. ಯಾಜಕನು ಬಂದು ಆ ಮನೆಯನ್ನು ಪರೀಕ್ಷಿಸಬೇಕು. ರೋಗದ ಗುರುತು ಮನೆಯಲ್ಲಿ ಹರಡಿದ್ದರೆ, ಆಗ ಅದು ಬಹುಬೇಗನೆ ಇತರ ಸ್ಥಳಗಳಿಗೆ ಹರಡುವ ರೋಗವಾಗಿದೆ. ಆದ್ದರಿಂದ ಆ ಮನೆಯು ಅಶುದ್ಧವಾಗಿದೆ.
|
45. ಆ ವ್ಯಕ್ತಿಯು ಆ ಮನೆಯನ್ನು ಕೆಡವಿಹಾಕಿಸಬೇಕು. ಅವರು ಅದರ ಎಲ್ಲಾ ಕಲ್ಲುಗಳನ್ನು, ಮಣ್ಣನ್ನು ಮತ್ತು ಮರದ ತುಂಡುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.
|
48. “ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು.
|
49. “ಬಳಿಕ ಮನೆಯನ್ನು ಶುದ್ಧೀಕರಿಸುವುದಕ್ಕೆ ಅವನು ಎರಡು ಪಕ್ಷಿಗಳನ್ನು ದೇವದಾರುಮರದ ಒಂದು ತುಂಡನ್ನು, ಕೆಂಪು ಬಟ್ಟೆಯನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಬರಬೇಕು.
|
51. ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮಿಕಿಸುವನು.
|
53. ಯಾಜಕನು ಪಟ್ಟಣದ ಹೊರಗಿರುವ ಬಯಲಿಗೆ ಹೋಗಿ, ಸಜೀವವಾದ ಪಕ್ಷಿಯನ್ನು ಸ್ವತಂತ್ರವಾಗಿ ಬಿಟ್ಟುಬಿಡಬೇಕು. ಹೀಗೆ ಯಾಜಕನು ಆ ಮನೆಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಆ ಮನೆಯು ಶುದ್ಧವಾಗುವುದು.”
|