2. “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುತ್ತಿರುವ ದೇಶಕ್ಕೆ ನೀವು ಪ್ರವೇಶಿಸುವಿರಿ. ಆ ಸಮಯದಲ್ಲಿ ನೀವು ಭೂಮಿಗೆ ವಿಶ್ರಾಂತಿಯ ಸಮಯವಿರುವುದಕ್ಕೆ ಬಿಡಬೇಕು. ಇದು ಯೆಹೋವನನ್ನು ಸನ್ಮಾನಿಸುವುದಕ್ಕಾಗಿರುವ ವಿಶೇಷವಾದ ವಿಶ್ರಾಂತಿಯ ಸಮಯವಾಗಿರುವುದು.
|
3. ನೀವು ಆರು ವರ್ಷಗಳು ನಿಮ್ಮ ಹೊಲದಲ್ಲಿ ಬೀಜಬಿತ್ತುವಿರಿ. ಆರು ವರ್ಷಗಳು ನಿಮ್ಮ ದ್ರಾಕ್ಷಿ ತೋಟಗಳಲ್ಲಿ ಕೆಲಸಮಾಡುವಿರಿ. ಅದರ ಫಲಗಳನ್ನು ಒಟ್ಟುಗೂಡಿಸುವಿರಿ.
|
4. ಆದರೆ ಏಳನೆಯ ವರ್ಷದಲ್ಲಿ ನೀವು ಭೂಮಿಗೆ ವಿಶ್ರಾಂತಿ ಕೊಡುವಿರಿ. ಇದು ಯೆಹೋವನನ್ನು ಸನ್ಮಾನಿಸಲು ನೇಮಕವಾದ ವಿಶ್ರಾಂತಿಯ ವಿಶೇಷ ಸಮಯವಾಗಿರುವುದು. ನೀವು ನಿಮ್ಮ ಹೊಲಗಳಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
|
5. ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು.
|
6. “ಸಬ್ಬತ್ ವರ್ಷದಲ್ಲಿ ಭೂಮಿಯು ತಾನಾಗಿ ಫಲಿಸುವ ಬೆಳೆಯಿಂದ ನಿಮಗೆ ಸಾಕಷ್ಟು ಆಹಾರವಿರುವುದು. ನಿಮ್ಮ ದಾಸದಾಸಿಯರಿಗೂ ಸಾಕಷ್ಟು ಆಹಾರವಿರುವುದು. ನಿಮ್ಮ ದೇಶದಲ್ಲಿ ವಾಸವಾಗಿರುವ ಕೂಲಿಯಾಳುಗಳಿಗೂ ಪರದೇಶಸ್ಥರಿಗೂ ಸಾಕಷ್ಟು ಆಹಾರವಿರುವುದು.
|
8. “ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು.
|
9. ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.
|
10. ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.
|
11. ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ.
|
12. ಆ ವರ್ಷ ಜ್ಯೂಬಿಲಿಯಾಗಿದೆ. ಅದು ನಿಮಗೆ ಪವಿತ್ರ ಸಮಯವಾಗಿರುವುದು. ಹೊಲದಿಂದ ದೊರಕುವ ಪೈರುಗಳು ನಿಮಗೆ ಆಹಾರವಾಗಿರುವುದು.
|
15. ನಿಮ್ಮ ನೆರೆಯವನ ಭೂಮಿಯನ್ನು ಕೊಂಡುಕೊಳ್ಳಲು ನೀವು ಬಯಸುವುದಾದರೆ, ಆಗ ಕಳೆದ ಜ್ಯೂಬಿಲಿ ವರ್ಷದಿಂದ ಈಗ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ. ನೀವು ಭೂಮಿಯನ್ನು ಮಾರುವುದಾದರೆ, ಪೈರುಗಳನ್ನು ಕೊಯ್ಯುವುದಕ್ಕಿರುವ ವರ್ಷಗಳನ್ನು ಲೆಕ್ಕಿಸಿ ಸರಿಯಾದ ಬೆಲೆಯನ್ನು ನಿರ್ಣಯಿಸಿರಿ.
|
16. ಇನ್ನೂ ಅನೇಕ ವರ್ಷಗಳು ಇದ್ದರೆ, ಬೆಲೆ ಹೆಚ್ಚಾಗಿರುವುದು. ವರ್ಷಗಳು ಕಡಿಮೆಯಾಗಿದ್ದರೆ, ಬೆಲೆ ಕಡಿಮೆಯಾಗಿರುವುದು. ಯಾಕೆಂದರೆ ನಿಮ್ಮ ನೆರೆಯವನು ನಿಜವಾಗಿ ಕೇವಲ ಕೆಲವೇ ಪೈರುಗಳನ್ನು ನಿಮಗೆ ಮಾರುತ್ತಿದ್ದಾನೆ. ಮುಂದಿನ ಜ್ಯೂಬಿಲಿ ವರ್ಷದಲ್ಲಿ ಭೂಮಿಯು ತಿರುಗಿ ಅವನ ಕುಟುಂಬಕ್ಕೆ ಸೇರುವುದು.
|
18. “ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಿರಿ. ಅವುಗಳಿಗೆ ವಿಧೇಯರಾಗಿರಿ. ಆಗ ನೀವು ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.
|
19. ಮತ್ತು ಭೂಮಿಯು ಒಳ್ಳೆಯ ಪೈರುಗಳನ್ನು ಕೊಡುವುದು. ಆಗ ನಿಮಗೆ ಬೇಕಾದಷ್ಟು ಆಹಾರವಿರುವುದು ಮತ್ತು ನೀವು ದೇಶದಲ್ಲಿ ಸುರಕ್ಷಿತವಾಗಿ ಜೀವಿಸುವಿರಿ.
|
20. “ಒಂದುವೇಳೆ ನೀವು, ‘ನಾವು ಬೀಜಗಳನ್ನು ಬಿತ್ತದಿದ್ದರೆ ಅಥವಾ ಪೈರುಗಳನ್ನು ಸಂಗ್ರಹಿಸದಿದ್ದರೆ ಏಳನೆಯ ವರ್ಷದಲ್ಲಿ ನಮಗೆ ತಿನ್ನಲು ಏನೂ ಇರುವುದಿಲ್ಲ’ ಎಂದು ಹೇಳಬಹುದು.
|
21. ಚಿಂತೆ ಮಾಡಬೇಡಿರಿ! ಆರನೆಯ ವರ್ಷದಲ್ಲಿ ನನ್ನ ಆಶೀರ್ವಾದವು ನಿಮ್ಮ ಮೇಲಿರುವುದು. ಆ ವರ್ಷ ಭೂಮಿಯಲ್ಲಿ ಬೆಳೆದ ಪೈರುಗಳು ಮೂರು ವರ್ಷಗಳವರೆಗೆ ಬೆಳೆಯುತ್ತಿರುವುದು.
|
22. ನೀವು ಎಂಟನೆಯ ವರ್ಷದಲ್ಲಿ ಬೀಜ ಬಿತ್ತಿದಾಗ, ನೀವು ಇನ್ನೂ ಹಳೆಯ ಬೆಳೆಯನ್ನು ತಿನ್ನುತ್ತಿರುವಿರಿ. ಒಂಭತ್ತನೆಯ ವರ್ಷದವರೆಗೆ ಅಂದರೆ ಎಂಟನೆಯ ವರ್ಷದಲ್ಲಿ ಬೀಜ ಫಸಲು ಕೊಡುವವರೆಗೆ ನೀವು ಹಳೆಯ ಬೆಳೆಯನ್ನು ತಿನ್ನುವಿರಿ.
|
23. “ಭೂಮಿಯು ನನಗೆ ಸೇರಿದ್ದು. ಆದ್ದರಿಂದ ನೀವು ನಿಜವಾಗಿಯೂ ಅದನ್ನು ಶಾಶ್ವತವಾಗಿ ಮಾರುವುದಕ್ಕಾಗುವುದಿಲ್ಲ. ನೀವು ಕೇವಲ ನನ್ನ ಆಶ್ರಯದಲ್ಲಿ ವಾಸಿಸುತ್ತಿರುವ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೀರಿ.
|
25. ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.
|
26. ತನ್ನ ಭೂಮಿಯನ್ನು ಮರಳಿ ಪಡೆಯಲು ಒಬ್ಬನಿಗೆ ಹತ್ತಿರದ ಸಂಬಂಧಿ ಇಲ್ಲದಿರಬಹುದು. ಆದರೆ ತನ್ನ ಭೂಮಿಯನ್ನು ತನಗಾಗಿ ಮರಳಿ ಪಡೆಯುಲು ಅವನು ಸಾಕಷ್ಟು ಹಣವನ್ನು ಪಡೆಯಬಹುದು.
|
27. ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಆ ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು.
|
28. ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ತಿರುಗಿ ಅದರ ಸರಿಯಾದ ಕುಟುಂಬಕ್ಕೆ ಸೇರುವುದು.
|
29. “ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ (ಮರಳಿ ಪಡೆಯುವ) ಹಕ್ಕು ಒಂದು ವರ್ಷದವರೆಗೆ ಇರುವುದು.
|
30. ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಯಜಮಾನನಿಗೆ ಸೇರುವುದಿಲ್ಲ.
|
31. ಗೋಡೆಗಳಿಲ್ಲದ ಪಟ್ಟಣಗಳನ್ನು ಬಯಲಿನ ಹೊಲಗಳಂತೆ ಪರಿಗಣಿಸಬೇಕು. ಆದ್ದರಿಂದ ಆ ಸಣ್ಣ ಪಟ್ಟಣಗಳಲ್ಲಿ ಕಟ್ಟಿದ ಮನೆಗಳು ಜ್ಯೂಬಿಲಿ ವರ್ಷದಲ್ಲಿ ಅವುಗಳ ಮೊದಲಿನ ಯಜಮಾನನಿಗೆ ಮರುಳಿ ಹೋಗುತ್ತವೆ.
|
32. “ಆದರೆ ಲೇವಿಯರ ಪಟ್ಟಣಗಳ ಕುರಿತು ಹೇಳುವುದಾದರೆ, ಲೇವಿಯರು ತಮಗೆ ಸೇರಿದ ಪಟ್ಟಣಗಳಲ್ಲಿರುವ ತಮ್ಮ ಮನೆಗಳನ್ನು ಯಾವಾಗ ಬೇಕಾದರೂ ಹಿಂದಕ್ಕೆ ಕೊಂಡುಕೊಳ್ಳಬಹುದು.
|
33. ಒಬ್ಬನು ಲೇವಿಯಿಂದ ಮನೆಯನ್ನು ಕೊಂಡುಕೊಂಡರೆ, ಲೇವಿಯರ ಪಟ್ಟಣದಲ್ಲಿರುವ ಆ ಮನೆಯು ಜ್ಯೂಬಿಲಿ ಸಮಯದಲ್ಲಿ ತಿರುಗಿ ಲೇವಿಯರಿಗೆ ಸೇರುವುದು. ಯಾಕೆಂದರೆ ಲೇವಿಯರ ಪಟ್ಟಣಗಳಲ್ಲಿರುವ ಮನೆಗಳು ಲೇವಿ ಕುಟುಂಬಕ್ಕೆ ಸೇರಿದ್ದಾಗಿವೆ. ಇಸ್ರೇಲ್ ಜನರು ಆ ಪಟ್ಟಣಗಳನ್ನು ಲೇವಿಯರಿಗೆ ಕೊಟ್ಟಿದ್ದಾರೆ. ಅವು ಇಸ್ರೇಲರ ಮಧ್ಯದಲ್ಲಿರುವ ಲೇವಿಯರ ಆಸ್ತಿಯಾಗಿವೆ.
|
34. ಅಲ್ಲದೆ ಲೇವಿಯರ ಪಟ್ಟಣಗಳ ಸುತ್ತಲಿರುವ ಹೊಲಗಳನ್ನು ಮತ್ತು ಹುಲ್ಲುಗಾವಲುಗಳನ್ನು ಮಾರಬಾರದು. ಆ ಹೊಲಗಳು ಎಂದೆಂದಿಗೂ ಲೇವಿಯರಿಗೆ ಸೇರಿವೆ.
|
35. “ಒಂದುವೇಳೆ ನಿಮ್ಮ ಸ್ವದೇಶದ ವ್ಯಕ್ತಿಯೊಬ್ಬನು ಬಹಳ ಬಡವನಾಗಿ ಗತಿಹೀನನಾಗಬಹುದು. ಅವನು ನಿಮ್ಮ ಮಧ್ಯದಲ್ಲಿ ಪ್ರವಾಸಿಯಂತೆ ವಾಸಿಸಲು ನೀವು ಅವಕಾಶ ಕೊಡಬೇಕು.
|
36. ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.
|
37. ನೀವು ಅವನಿಗೆ ಸಾಲಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ನೀವು ಅವನಿಗೆ ಮಾರುವ ಆಹಾರ ಪದಾರ್ಥಗಳಿಂದ ಲಾಭವನ್ನು ಗಳಿಸಲು ಪ್ರಯತ್ನಿಸಬಾರದು.
|
38. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮಗೆ ಕಾನಾನ್ ದೇಶವನ್ನು ಕೊಟ್ಟು ನಿಮ್ಮ ದೇವರಾಗಿರಲು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದೆನು.
|
39. “ಒಂದುವೇಳೆ ನಿಮ್ಮ ಸ್ವದೇಶಸ್ಥನು ಬಹಳ ಬಡವನಾಗಿ ತನ್ನನ್ನು ಗುಲಾಮನನ್ನಾಗಿ ನಿಮಗೆ ಮಾರಿಕೊಂಡರೆ ನೀವು ಅವನನ್ನು ಗುಲಾಮನನ್ನಾಗಿ ದುಡಿಸಬಾರದು.
|
41. ಬಳಿಕ ನಿಮ್ಮನ್ನು ಬಿಟ್ಟುಹೋಗಲು ಅವನಿಗೆ ಹಕ್ಕಿದೆ. ಅವನು ತನ್ನ ಮಕ್ಕಳನ್ನು ಕರೆದುಕೊಂಡು ತನ್ನ ಕುಟುಂಬಕ್ಕೆ ಮರಳಿ ಹೋಗಬಹುದು. ಅವನು ತನ್ನ ಪೂರ್ವಿಕರ ಸ್ವತ್ತನ್ನು ಹಿಂದಕ್ಕೆ ಪಡೆಯಬಹುದು.
|
42. ಯಾಕೆಂದರೆ ಅವರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ಗುಲಾಮತನದಿಂದ ಹೊರಗೆ ಬರಮಾಡಿದೆನು; ಅವರು ಮತ್ತೆ ಗುಲಾಮರಾಗಬಾರದು.
|
45. ಅಲ್ಲದೆ ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಂದ ಮಕ್ಕಳನ್ನು ಗುಲಾಮರನ್ನಾಗಿ ಕೊಂಡುಕೊಳ್ಳಬಹುದು. ಗುಲಾಮರಾದ ಮಕ್ಕಳು ನಿಮಗೆ ಸೇರಿದವರಾಗಿದ್ದಾರೆ.
|
46. ಗುಲಾಮರಾದ ಈ ಪರದೇಶಸ್ಥರನ್ನು ನೀವು ಸತ್ತನಂತರ ನಿಮ್ಮ ಮಕ್ಕಳಿಗೆ ಕೊಡಬೇಕು. ಹೀಗೆ ಅವರು ನಿಮ್ಮ ಮಕ್ಕಳಿಗೆ ಸೇರಿದವರಾಗುವರು. ಅವರು ಎಂದೆಂದೂ ನಿಮ್ಮ ಗುಲಾಮರಾಗಿರುವರು. ನಿಮ್ಮ ಈ ಪರದೇಶಸ್ಥರನ್ನು ಗುಲಾಮರನ್ನಾಗಿ ಮಾಡಿಕೊಳ್ಳಬಹುದು. ಆದರೆ ನೀವು ಇಸ್ರೇಲ್ ಜನರಾದ ನಿಮ್ಮ ಸ್ವಂತ ಸಹೋದರರ ಮೇಲೆ ಕ್ರೂರವಾದ ಒಡೆಯರಾಗಿರಬಾರದು.
|
47. “ಒಂದುವೇಳೆ ನಿಮ್ಮ ಸ್ವದೇಶದವನು ಬಡವನಾಗಿದ್ದು, ನಿಮ್ಮ ಮಧ್ಯದಲ್ಲಿ ವಾಸಿಸಲು ಬಂದ ಐಶ್ವರ್ಯವಂತನಾದ ಪರದೇಶಸ್ಥನಿಗಾಗಲಿ ಅಥವಾ ಅವನ ಕುಟುಂಬದ ಸದಸ್ಯನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ತನ್ನನ್ನು ಬಿಡಿಸಿಕೊಳ್ಳುವ ಹಕ್ಕಿದೆ.
|
49. ಅವನ ದೊಡ್ಡಪ್ಪನಾಗಲಿ ಚಿಕ್ಕಪ್ಪನಾಗಲಿ ಅವರ ಮಕ್ಕಳಾಗಲಿ ಅವನನ್ನು ಮರಳಿ ಕೊಂಡುಕೊಳ್ಳಬಹುದು. ಅವನ ಹತ್ತಿರದ ಸಂಬಂಧಿಯು ಅವನನ್ನು ಕೊಂಡುಕೊಳ್ಳಬಹುದು. ಅವನಿಗೆ ಸಾಕಷ್ಟು ಹಣ ದೊರಕಿದರೆ, ಅವನು ತಾನೇ ಹಣ ಕೊಟ್ಟು ಮತ್ತೆ ಸ್ವತಂತ್ರನಾಗಬಹುದು.
|
50. “ನೀವು ಬೆಲೆಯನ್ನು ತೀರ್ಮಾನಿಸುವುದು ಹೇಗೆಂದರೆ: ಅವನು ತನ್ನನ್ನು ಪರದೇಶಸ್ಥನಿಗೆ ಮಾರಿಕೊಂಡ ದಿನದಿಂದ ಹಿಡಿದು ಮುಂದಿನ ಜ್ಯೂಬಿಲಿ ವರ್ಷದವರೆಗೆ ವರ್ಷಗಳನ್ನು ಲೆಕ್ಕಿಸಿ ಬೆಲೆಯನ್ನು ತೀರ್ಮಾನಿಸಿರಿ. ಯಾಕೆಂದರೆ ಅವನು ತನ್ನನ್ನು ಕೇವಲ ಕೆಲವು ವರ್ಷಗಳವರೆಗೆ ಕೂಲಿಗೆ ಒಪ್ಪಿಸಿದ್ದಾನೆ.
|
53. ಆದರೆ ಅವನು ಪರದೇಶಸ್ಥನೊಡನೆ ಪ್ರತಿ ವರ್ಷ ಕೂಲಿಯಾಳಾಗಿ ವಾಸಿಸುವನು. ಪರದೇಶಸ್ಥನು ಆ ವ್ಯಕ್ತಿಯ ಮೇಲೆ ಕ್ರೂರ ಯಜಮಾನನಾಗಿ ಇರುವುದಕ್ಕೆ ಬಿಡಬೇಡಿರಿ.
|
55. ಯಾಕೆಂದರೆ, ಇಸ್ರೇಲರು ನನ್ನ ಸೇವಕರಾಗಿದ್ದಾರೆ. ನಾನು ಅವರನ್ನು ಈಜಿಪ್ಟಿನಲ್ಲಿ ದಾಸತ್ವದಿಂದ ಬಿಡಿಸಿದ್ದರಿಂದ ಅವರು ನನ್ನ ದಾಸರಾಗಿದ್ದಾರೆ. ನಾನೇ ನಿಮ್ಮ ದೇವರಾದ ಯೆಹೋವನು!
|