1. ಒಂದು ಸಬ್ಬತ್ ದಿನದಲ್ಲಿ ಯೇಸು ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದನು. ಅಲ್ಲಿದ್ದ ಜನರೆಲ್ಲರೂ ಯೇಸುವನ್ನೇ ದೃಷ್ಟಿಸಿ ನೋಡುತ್ತಿದ್ದರು.
|
5. ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಿಲಿ ಬಾವಿಗೆ ಬಿದ್ದರೆ, ಆ ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.
|
7. ಅತಿಥಿಗಳಾಗಿ ಬಂದಿದ್ದ ಕೆಲವರು ಊಟಕ್ಕೆ ಕುಳಿತುಕೊಳ್ಳಲು ಉತ್ತಮವಾದ ಸ್ಥಳಗಳನ್ನು ಆರಿಸಿಕೊಳ್ಳುತ್ತಿರುವುದನ್ನು ಕಂಡ ಯೇಸು ಈ ಸಾಮ್ಯವನ್ನು ಹೇಳಿದನು:
|
8. ”ಒಬ್ಬನು ನಿನ್ನನ್ನು ಮದುವೆಗೆ ಆಮಂತ್ರಿಸಿದರೆ, ಉನ್ನತವಾದ ಆಸನದಲ್ಲಿ ಕುಳಿತುಕೊಳ್ಳಬೇಡ. ಅವನು ನಿನಗಿಂತಲೂ ಪ್ರಮುಖನಾದವನನ್ನು ಆಮಂತ್ರಿಸಿದ್ದಿರಬಹುದು.
|
9. ನೀನು ಉನ್ನತವಾದ ಸ್ಥಳದಲ್ಲಿ ಕುಳಿತುಕೊಂಡಿದ್ದರೆ, ನಿನಗೆ ಆಮಂತ್ರಣ ನೀಡಿರುವವನು ಬಂದು, ಈ ಸ್ಥಳವನ್ನು ಇವನಿಗೆ ಬಿಟ್ಟುಕೊಡು؆ ಎಂದು ನಿನಗೆ ಹೇಳಬಹುದು. ಆಗ ನೀನು ನಾಚಿಕೆಯಿಂದ ಕೊನೆಯ ಸ್ಥಳದಲ್ಲಿ ಕುಳಿತುಕೊಳ್ಳಬೇಕಾಗುವುದು.
|
10. ಆದ್ದರಿಂದ ಒಬ್ಬನು ನಿನ್ನನ್ನು ಆಮಂತ್ರಿಸುವಾಗ, ಕೊನೆಯ ಸ್ಥಳದಲ್ಲಿ ಹೋಗಿ ಕುಳಿತುಕೊ. ಆಗ ನಿನ್ನನ್ನು ಆಮಂತ್ರಿಸಿದ ವ್ಯಕ್ತಿಯು ಬಂದು, ಸ್ನೇಹಿತನೇ, ಉನ್ನತವಾದ ಈ ಸ್ಥಳದಲ್ಲಿ ಕುಳಿತುಕೊ!؆ ಎಂದು ನಿನಗೆ ಹೇಳುವನು. ಆಗ ನೆರೆದು ಬಂದ ಅತಿಥಿಗಳೆಲ್ಲಾ ನಿನ್ನನ್ನು ಗೌರವಿಸುವರು.
|
11. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು. ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”
|
12. ಬಳಿಕ ಯೇಸು ತನ್ನನ್ನು ಆಮಂತ್ರಿಸಿದ ಫರಿಸಾಯನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ರಾತ್ರಿಯ ಊಟಕ್ಕೆ ನಿನ್ನ ಸ್ನೇಹಿತರನ್ನು, ಸಹೋದರರನ್ನು, ಸಂಬಂಧಿಕರನ್ನು ಮತ್ತು ಶ್ರೀಮಂತರಾದ ನೆರೆಯವರನ್ನು ಆಮಂತ್ರಿಸಿದರೆ, ಅವರೂ ನಿನ್ನನ್ನು ಮತ್ತೊಮ್ಮೆ ಊಟಕ್ಕೆ ಆಮಂತ್ರಿಸುವರು. ಆಗ ಅದೇ ನಿನಗೆ ಪ್ರತಿಫಲವಾಗುವುದು.
|
14. ಆಗ ನಿನಗೆ ಆಶೀರ್ವಾದ ದೊರೆಯುವುದು. ಏಕೆಂದರೆ, ಈ ಜನರು ನಿನ್ನನ್ನು ಔತಣಕ್ಕೆ ಆಮಂತ್ರಿಸಲಾರರು. ಅವರಲ್ಲಿ ಏನೂ ಇಲ್ಲ. ಆದರೆ ನೀತಿವಂತರು ಜೀವಂತವಾಗಿ ಎದ್ದುಬರುವಾಗ, ನಿನಗೆ ಪ್ರತಿಫಲ ದೊರೆಯುವುದು” ಎಂದು ಹೇಳಿದನು.
|
15. ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.
|
17. ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ಬನ್ನಿರಿ! ಊಟ ಸಿದ್ಧವಾಗಿದೆ؆ ಎಂದು ಅತಿಥಿಗಳಿಗೆ ತಿಳಿಸಿದನು.
|
18. ಆದರೆ ಎಲ್ಲಾ ಅತಿಥಿಗಳು ತಾವು ಬರಲಾಗುವುದಿಲ್ಲವೆಂದು ಹೇಳಿದರು. ಪ್ರತಿಯೊಬ್ಬನೂ ಒಂದೊಂದು ನೆವ ಹೇಳಿದನು. ಮೊದಲನೆಯವನು, ನಾನು ಇದೀಗ ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ಆದ್ದರಿಂದ ನಾನು ಹೋಗಿ ಅದನ್ನು ನೋಡಬೇಕು. ದಯಮಾಡಿ ಕ್ಷಮಿಸು؆ ಎಂದು ಹೇಳಿದನು.
|
19. ಎರಡನೆಯವನು, ನಾನು ಇದೀಗ ಐದು ಜೊತೆ ಎತ್ತುಗಳನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ. ನಾನು ಹೋಗಿ ಅವುಗಳನ್ನು ಪರೀಕ್ಷಿಸಬೇಕು. ದಯಮಾಡಿ ಕ್ಷಮಿಸು؆ ಎಂದು ಹೇಳಿದನು.
|
21. ಆದ್ದರಿಂದ ಆ ಸೇವಕನು ಹಿಂತಿರುಗಿ ಹೋಗಿ ಅವರು ಹೇಳಿದ್ದನ್ನೆಲ್ಲ ತನ್ನ ಯಜಮಾನನಿಗೆ ತಿಳಿಸಿದನು. ಆಗ ಯಜಮಾನನು ಬಹಳ ಕೋಪಗೊಂಡು ಆ ಸೇವಕನಿಗೆ, ಈ ಊರಿನ ಬೀದಿಗಳಿಗೂ ಸಂದಿಗಳಿಗೂ ಬೇಗನೆ ಹೋಗಿ ಬಡವರನ್ನೂ ಅಂಗವಿಕಲರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿಗೆ ಕರೆದುಕೊಂಡು ಬಾ؆ ಎಂದು ಹೇಳಿದನು.
|
22. ತರುವಾಯ ಆ ಸೇವಕನು ಬಂದು, ಸ್ವಾಮೀ, ನೀನು ಹೇಳಿದಂತೆಯೇ ಮಾಡಿದೆನು. ಆದರೆ ನಮ್ಮಲ್ಲಿ ಇನ್ನೂ ಹೆಚ್ಚು ಜನರಿಗೆ ಸ್ಥಳವಿದೆ.؆ಎಂದು ಹೇಳಿದನು.
|
23. ಆಗ ಯಜಮಾನನು ಆ ಸೇವಕನಿಗೆ, ಹೆದ್ದಾರಿಗಳಿಗೂ ರಸ್ತೆಗಳಿಗೂ ಹೋಗಿ, ಅಲ್ಲಿರುವ ಜನರನ್ನೆಲ್ಲಾ ಆಮಂತ್ರಿಸು. ನನ್ನ ಮನೆಯು ಜನರಿಂದ ತುಂಬಿಹೋಗಬೇಕೆಂಬುದೇ ನನ್ನ ಅಪೇಕ್ಷೆ.
|
26. ”ನನ್ನ ಬಳಿಗೆ ಬರುವವನು ನನ್ನನ್ನು ಪ್ರೀತಿಸುವುದಕ್ಕಿಂತಲೂ ಹೆಚ್ಚಾಗಿ ತನ್ನ ತಂದೆತಾಯಿಗಳನ್ನು, ಹೆಂಡತಿಯನ್ನು, ಮಕ್ಕಳನ್ನು, ಸಹೋದರ ಸಹೋದರಿಯರನ್ನು ಮತ್ತು ತನ್ನನ್ನು ಪ್ರೀತಿಸುವುದಾದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.
|
27. ನನ್ನನ್ನು ಹಿಂಬಾಲಿಸುವವನು ತನಗೆ ಕೊಡಲ್ಪಟ್ಟಿರುವ ಶಿಲುಬೆಯನ್ನು (ಶ್ರಮೆ) ಹೊತ್ತುಕೊಂಡು ಹೋಗದಿದ್ದರೆ, ಅವನು ನನ್ನ ಶಿಷ್ಯನಾಗಿರಲು ಸಾಧ್ಯವಿಲ್ಲ.
|
28. ನೀನು ಒಂದು ಕಟ್ಟಡವನ್ನು ಕಟ್ಟಬೇಕೆಂದಿದ್ದರೆ ಮೊದಲು ನೀನು ಕುಳಿತುಕೊಂಡು ಅದಕ್ಕೆ ಎಷ್ಟು ಖರ್ಚಾಗುತ್ತದೆ ಎಂಬುದನ್ನು ಆಲೋಚಿಸು. ಆ ಕಟ್ಟಡವನ್ನು ಪೂರೈಸಲು ನಿನ್ನಲ್ಲಿ ಸಾಕಷ್ಟು ಹಣವಿದೆಯೋ ಎಂದು ಲೆಕ್ಕಹಾಕಿ ನೋಡು.
|
29. ಇಲ್ಲವಾದರೆ, ನೀನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದರೂ ಅದನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಜನರು ನಿನ್ನನ್ನು ನೋಡಿ,
|
31. ”ಒಬ್ಬ ಅರಸನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವಾಗ, ಮೊದಲು ಅವನು ಕುಳಿತುಕೊಂಡು ಯೋಜನೆ ಮಾಡುವನು. ಅರಸನ ಬಳಿಯಲ್ಲಿ ಕೇವಲ ಹತ್ತುಸಾವಿರ ಮಂದಿ ಸೈನಿಕರಿದ್ದರೆ, ಇಪ್ಪತ್ತುಸಾವಿರ ಮಂದಿ ಸೈನಿಕರಿರುವ ಇನ್ನೊಬ್ಬ ಅರಸನನ್ನು ಸೋಲಿಸಲು ತನಗೆ ಸಾಧ್ಯವೇ ಎಂದು ಆಲೋಚಿಸುವನು.
|
32. ಅವನು ಇನ್ನೊಬ್ಬ ಅರಸನನ್ನು ಸೋಲಿಸಲಾಗದಿದ್ದರೆ, ತನ್ನ ರಾಯಭಾರಿಗಳನ್ನು ಕಳುಹಿಸಿ, ಶಾಂತಿಒಪ್ಪಂದಕ್ಕಾಗಿ ಕೇಳಿಕೊಳ್ಳುವನು.
|
33. ಅದೇರೀತಿಯಲ್ಲಿ ನೀವೆಲ್ಲರೂ ಮೊದಲು ಯೋಜನೆ ಮಾಡಬೇಕು. ನೀವು ನನ್ನನ್ನು ಹಿಂಬಾಲಿಸಬೇಕೆಂದಿದ್ದರೆ ನಿಮ್ಮಲ್ಲಿರುವ ಪ್ರತಿಯೊಂದನ್ನೂ ತ್ಯಜಿಸಿಬಿಡಬೇಕು. ಇಲ್ಲವಾದರೆ, ನನ್ನ ಶಿಷ್ಯರಾಗಲು ಸಾಧ್ಯವಿಲ್ಲ!
|
34. ”ಉಪ್ಪು ಒಳ್ಳೆಯ ಪದಾರ್ಥ. ಆದರೆ ಉಪ್ಪು ತನ್ನ ರುಚಿ ಕಳೆದುಕೊಂಡರೆ ಅದಕ್ಕೆ ಯಾವ ಬೆಲೆಯೂ ಇಲ್ಲ. ನೀವು ಅದಕ್ಕೆ ಮತ್ತೆ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯವಿಲ್ಲ.
|
35. ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”
|