2. ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು.
|
4. ”ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.
|
6. ಅವನು ತನ್ನ ಸ್ನೇಹಿತರ ಮತ್ತು ನೆರೆಹೊರೆಯವರ ಬಳಿಗೆ ಹೋಗಿ, ನನ್ನೊಡನೆ ಸಂತೋಷಪಡಿರಿ, ಕಳೆದುಹೋದ ನನ್ನ ಕುರಿ ಸಿಕ್ಕಿತು؆ ಎಂದು ಹೇಳುವನು.
|
7. ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.
|
8. ”ಒಬ್ಬ ಸ್ತ್ರೀಯ ಬಳಿ ಹತ್ತು ಬೆಳ್ಳಿನಾಣ್ಯಗಳು ಇವೆಯೆಂದು ಭಾವಿಸಿಕೊಳ್ಳಿರಿ. ಆಕೆಯು ಅವುಗಳಲ್ಲಿ ಒಂದನ್ನು ಕಳೆದುಕೊಳ್ಳುತ್ತಾಳೆ. ಆಕೆ ದೀಪವನ್ನು ತಂದು ಮನೆಯನ್ನು ಗುಡಿಸುತ್ತಾಳೆ. ಆ ನಾಣ್ಯವು ಸಿಕ್ಕುವ ತನಕ ಆಕೆ ಎಚ್ಚರಿಕೆಯಿಂದ ಹುಡುಕುತ್ತಾಳೆ.
|
9. ಕಳೆದುಹೋದ ಆ ನಾಣ್ಯ ಸಿಕ್ಕಿದಾಗ ಆಕೆ ತನ್ನ ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕರೆದು, ನನ್ನೊಡನೆ ಸಂತೋಷಪಡಿರಿ ಕಳೆದುಹೋಗಿದ್ದ ನನ್ನ ನಾಣ್ಯ ಸಿಕ್ಕಿತು؆ ಎಂದು ಹೇಳುವಳು.
|
12. ಕಿರಿಯ ಮಗನು ತಂದೆಗೆ, ನಿನ್ನ ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಡು؆ ಎಂದು ಕೇಳಿದನು. ಆದ್ದರಿಂದ ತಂದೆಯು ತನ್ನ ಆಸ್ತಿಯನ್ನು ಹಂಚಿಕೊಟ್ಟನು.
|
13. ಆಗ ಕಿರಿಮಗನು ತನಗೆ ದೊರೆತ ಪಾಲನ್ನೆಲ್ಲಾ ಕೂಡಿಸಿಕೊಂಡು ದೂರದೇಶಕ್ಕೆ ಪ್ರಯಾಣಮಾಡಿದನು. ಅಲ್ಲಿ ಅವನು ಪಟಿಂಗನಾಗಿ ಬದುಕಿ ತನ್ನ ಹಣವನ್ನೆಲ್ಲಾ ಹಾಳುಮಾಡಿಕೊಂಡನು.
|
14. ಸ್ವಲ್ಪಕಾಲದ ನಂತರ, ಆ ದೇಶದಲ್ಲಿ ಕ್ಷಾಮ ಉಂಟಾಯಿತು. ಆ ದೇಶದ ಯಾವ ಭಾಗದಲ್ಲಿಯೂ ಸಾಕಷ್ಟು ಆಹಾರವಿರಲಿಲ್ಲ. ಅವನು ಬಹಳ ಹಸಿವೆಗೊಂಡಿದ್ದನು. ಅವನಿಗೆ ಹಣದ ಅಗತ್ಯತೆಯಿತ್ತು.
|
15. ಆದ್ದರಿಂದ ಅವನು ಆ ದೇಶದ ನಿವಾಸಿಯೊಬ್ಬನ ಬಳಿ ಕೂಲಿಕೆಲಸಕ್ಕೆ ಸೇರಿಕೊಂಡನು. ಆ ಮನುಷ್ಯನು ಹಂದಿ ಮೇಯಿಸುವುದ್ಕಕಾಗಿ ಅವನನ್ನು ಹೊಲಕ್ಕೆ ಕಳುಹಿಸಿದನು.
|
16. ಆಗ ಅವನು ಬಹಳ ಹಸಿವೆಗೊಂಡಿದ್ದನು. ಆದ್ದರಿಂದ ಹಂದಿಗಳು ತಿನ್ನುತ್ತಿದ್ದ ಕಾಯಿಗಳನ್ನೇ ತಿನ್ನಲು ಹಂಬಲಿಸಿದನು. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.
|
17. ಆಗ ಅವನಿಗೆ ತಾನು ಮಾಡಿದ ಬುದ್ಧಿಹೀನ ಕಾರ್ಯದ ಅರಿವಾಯಿತು. ಅವನು ತನ್ನೊಳಗೆ, ನನ್ನ ತಂದೆಯ ಬಳಿಯಲ್ಲಿರುವ ಸೇವಕರಿಗೆ ಬೇಕಾದಷ್ಟು ಆಹಾರವಿದೆ. ನಾನಾದರೋ ಇಲ್ಲಿ ಊಟವಿಲ್ಲದೆ ಸಾಯುತ್ತಿದ್ದೇನೆ.
|
18. ನಾನು ಇಲ್ಲಿಂದ ನನ್ನ ತಂದೆಯ ಬಳಿಗೆ ಹೊರಟು ಹೋಗುತ್ತೇನೆ. ನಾನು ನನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪ ಮಾಡಿದ್ದೇನೆ.
|
19. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ. ನೀನು ನನ್ನನ್ನು ನಿನ್ನ ಸೇವಕರಲ್ಲಿ ಒಬ್ಬನನ್ನಾಗಿ ಸೇರಿಸಿಕೊ ಎಂದು ಹೇಳುವೆನು؆ ಅಂದುಕೊಂಡನು.
|
20. ಅಂತೆಯೇ ಅವನು ಹೊರಟು ತನ್ನ ತಂದೆಯ ಬಳಿಗೆ ಹೋದನು. “ಮಗನು ಇನ್ನೂ ಬಹುದೂರದಲ್ಲಿ ಬರುತ್ತಿರುವಾಗಲೇ ತಂದೆಯು ಅವನನ್ನು ಗುರುತಿಸಿ ಕನಿಕರದಿಂದ ಅವನ ಬಳಿಗೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು.
|
21. ಮಗನು ತನ್ನ ತಂದೆಗೆ, ಅಪ್ಪಾ, ನಾನು ದೇವರಿಗೆ ವಿರೋಧವಾಗಿಯೂ ನಿನಗೆ ವಿರೋಧವಾಗಿಯೂ ಪಾಪಮಾಡಿದ್ದೇನೆ. ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
|
22. ಆದರೆ ತಂದೆಯು ತನ್ನ ಸೇವಕರಿಗೆ, ತ್ವರೆಮಾಡಿರಿ! ಉತ್ತಮವಾದ ಉಡುಪುಗಳನ್ನು ತಂದು ಇವನಿಗೆ ತೊಡಿಸಿರಿ. ಇವನ ಬೆರಳಿಗೆ ಉಂಗುರವನ್ನು ಹಾಕಿರಿ. ಪಾದಗಳಿಗೆ ಒಳ್ಳೆಯ ಪಾದರಕ್ಷೆಗಳನ್ನು ತೊಡಿಸಿರಿ.
|
24. ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೊ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೊ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು.
|
27. ಆ ಸೇವಕನು, ನಿನ್ನ ತಮ್ಮ ಮರಳಿ ಬಂದಿದ್ದಾನೆ. ನಿನ್ನ ತಂದೆಯು ಕೊಬ್ಬಿದ ಕರುವನ್ನು ಕೊಯ್ಸಿದ್ದಾನೆ. ನಿನ್ನ ತಮ್ಮನು ಮನೆಗೆ ಸುರಕ್ಷಿತವಾಗಿ ಬಂದದ್ದಕ್ಕಾಗಿ ನಿನ್ನ ತಂದೆಯು ಸಂತೋಷಗೊಂಡಿದ್ದಾನೆ!’ ಎಂದು ಹೇಳಿದನು.
|
29. ಹಿರಿಮಗನು ತಂದೆಗೆ, ನಾನು ಗುಲಾಮನಂತೆ ನಿನಗೆ ಅನೇಕ ವರ್ಷಗಳವರೆಗೆ ಸೇವೆಮಾಡಿದೆನು! ನಾನು ಯಾವಾಗಲೂ ನಿನ್ನ ಅಪ್ಪಣೆಗಳಿಗೆ ವಿಧೇಯನಾದೆನು. ಆದರೆ ನೀನು ನನಗೋಸ್ಕರ ಎಂದೂ ಒಂದು ಆಡನ್ನಾಗಲಿ ಕೊಯ್ಯಲಿಲ್ಲ. ನನಗಾಗಿ ಮತ್ತು ನನ್ನ ಸ್ನೇಹಿತರಿಗಾಗಿ ನೀನೆಂದೂ ಒಂದು ಔತಣಕೂಟವನ್ನು ಏರ್ಪಡಿಸಲಿಲ್ಲ.
|
30. ಆದರೆ ನಿನ್ನ ಕಿರಿಯ ಮಗನು ನಿನ್ನ ಎಲ್ಲ ಹಣವನ್ನು ಸೂಳೆಯರಿಗೆ ಖರ್ಚುಮಾಡಿ ಮನೆಗೆ ಹಿಂತಿರುಗಿ ಬಂದಾಗ ನೀನು ಅವನಿಗಾಗಿ ಕೊಬ್ಬಿದ ಕರುವನ್ನು ಕೊಯ್ಸಿದ್ದಿ!’ ಅಂದನು.
|
32. ನಾವು ಸಂತೋಷಪಡಬೇಕು. ಉಲ್ಲಾಸಪಡಬೇಕು, ಏಕೆಂದರೆ ನಿನ್ನ ತಮ್ಮನು ಸತ್ತುಹೋಗಿದ್ದನು, ಈಗಲಾದರೂ ಮತ್ತೆ ಜೀವಂತವಾಗಿ ಬಂದಿದ್ದಾನೆ. ಅವನು ಕಳೆದುಹೋಗಿದ್ದನು, ಈಗಲಾದರೊ ಮತ್ತೆ ಸಿಕ್ಕಿದ್ದಾನೆ’ ಅಂದನು.”
|