1. ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.
|
4. ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.
|
5. ಅವನು ತನ್ನೊಂದಿಗೆ ಮರಿಯಳನ್ನೂ ಕರೆದುಕೊಂಡು ಹೋದನು. ಆಕೆಗೆ ಅವನೊಂದಿಗೆ ನಿಶ್ಚಿತಾರ್ಥವಾಗಿತ್ತು. (ಮರಿಯಳು ಆಗ ಗರ್ಭಿಣಿಯಾಗಿದ್ದಳು.)
|
7. ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದುದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.
|
9. ಪ್ರಭುವಿನ ದೂತನೊಬ್ಬನು ಕುರುಬರ ಮುಂದೆ ನಿಂತನು. ಅವರ ಸುತ್ತಲೂ ಪ್ರಭುವಿನ ಪ್ರಭೆಯು ಪ್ರಕಾಶಿಸಿತು. ಕುರುಬರು ಬಹಳವಾಗಿ ಹೆದರಿದರು.
|
10. ದೇವದೂತನು ಅವರಿಗೆ, “ಹೆದರಬೇಡಿರಿ, ಜನರೆಲ್ಲರಿಗೆ ಮಹಾಸಂತೋಷವನ್ನು ಉಂಟುಮಾಡುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ. ಅದೇನಂದರೆ:
|
12. ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು.
|
14. “ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದವರಿಗೆ ಸಮಾಧಾನ” ಎಂದು ಹೇಳುತ್ತಾ ದೇವರನ್ನು ಸ್ತುತಿಸಿದರು.
|
15. ದೇವದೂತರು ಕುರುಬರ ಬಳಿಯಿಂದ ಪರಲೋಕಕ್ಕೆ ಹಿಂತಿರುಗಿದ ಮೇಲೆ ಕುರುಬರು, “ನಾವು ಈಗಲೇ ಬೆತ್ಲೆಹೇಮಿಗೆ ಹೋಗಿ, ಪ್ರಭುವು ನಮಗೆ ತಿಳಿಸಿದ ಈ ಘಟನೆಯನ್ನು ನೋಡೋಣ” ಎಂದು ಮಾತಾಡಿಕೊಂಡರು.
|
20. ಕುರುಬರು ತಾವು ಕಂಡು ಕೇಳಿದ ಪ್ರತಿಯೊಂದು ಸಂಗತಿಗಾಗಿ ದೇವರನ್ನು ಕೊಂಡಾಡುತ್ತಾ ಆತನನ್ನು ಸ್ತುತಿಸುತ್ತಾ ತಮ್ಮ ಕುರಿಗಳಿದ್ದಲ್ಲಿಗೆ ಮರಳಿ ಹೋದರು. ದೇವದೂತರು ಅವರಿಗೆ ತಿಳಿಸಿದಂತೆಯೇ ಪ್ರತಿಯೊಂದು ಸಂಗತಿಯೂ ನಡೆದಿತ್ತು.
|
21. ಮಗುವಿಗೆ ಎಂಟು ದಿನವಾದಾಗ ಸುನ್ನತಿ ಆಯಿತು ಮತ್ತು ಆತನಿಗೆ ‘ಯೇಸು’ ಎಂದು ಹೆಸರಿಡಲಾಯಿತು. ಮರಿಯಳ ಗರ್ಭದಲ್ಲಿ ಮಗುವು ಬೆಳೆಯುವುದಕ್ಕೆ ಪ್ರಾರಂಭಿಸುವ ಮೊದಲೇ ದೇವದೂತನು ಈ ಹೆಸರನ್ನೇ ಕೊಡಬೇಕೆಂದು ಸೂಚಿಸಿದ್ದನು.
|
22. ಶುದ್ಧೀಕರಣದ ಬಗ್ಗೆ ಮೋಶೆಯ ಧರ್ಮಶಾಸ್ತ್ರವು ಬೋಧಿಸಿದ್ದ ಕಾರ್ಯಗಳನ್ನು ಮರಿಯಳು ಮತ್ತು ಯೋಸೇಫನು ಮಾಡುವ ಸಮಯ ಬಂತು. ಯೇಸುವನ್ನು ಪ್ರಭುವಿಗೆ (ದೇವರಿಗೆ) ಪ್ರತಿಷ್ಠಿಸಲು ಯೋಸೇಫನು ಮತ್ತು ಮರಿಯಳು ಅತನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದರು.
|
23. ಏಕೆಂದರೆ “ಪ್ರತಿ ಕುಟುಂಬದಲ್ಲಿ, ‘ಚೊಚ್ಚಲು ಗಂಡುಮಗುವನ್ನು ಪ್ರಭುವಿಗೆ ಪ್ರತಿಷ್ಠಿಸಬೇಕು”‘ ಎಂದು ಪ್ರಭುವಿನ ಧರ್ಮಶಾಸ್ತ್ರದಲ್ಲಿ ಬರೆದಿದೆ.
|
24. “ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದುದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.
|
25. ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ (ಯೆಹೂದ್ಯರಿಗೆ) ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.
|
26. ಪ್ರಭುವು ಕಳುಹಿಸುವ ಕ್ರಿಸ್ತನನ್ನು ನೋಡುವ ತನಕ ನೀನು ಸಾಯುವುದಿಲ್ಲ ಎಂದು ಪವಿತ್ರಾತ್ಮನು ಸಿಮೆಯೋನನಿಗೆ ತಿಳಿಸಿದ್ದನು.
|
27. ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.
|
32. ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ (ಯೆಹೂದ್ಯರಿಗೆ) ಕೀರ್ತಿಯಾಗುವುದು.”
|
34. ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.
|
35. ಜನರು ಗುಟ್ಟಾಗಿ ಯೋಚಿಸುವ ಸಂಗತಿಗಳು ಬಯಲಾಗುವವು. ಮುಂದೆ ಸಂಭವಿಸುವ ಸಂಗತಿಗಳಿಂದ ನಿನ್ನ ಹೃದಯಕ್ಕೆ ಅಲಗು ನಾಟಿದಂತಾಗುವುದು” ಎಂದು ಹೇಳಿದನು.
|
36. ದೇವಾಲಯದಲ್ಲಿ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆಯು ಅಸೇರನ ವಂಶದ ಫನುವೇಲನ ಕುಟುಂಬದವಳಾಗಿದ್ದಳು. ಅನ್ನಳು ಬಹಳ ಮುಪ್ಪಿನವಳಾಗಿದ್ದಳು. ಆಕೆಯು ಮದುವೆಯಾದ ಏಳು ವರ್ಷಕ್ಕೆ ಗಂಡನನ್ನು ಕಳೆದುಕೊಂಡಳು.
|
37. ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.
|
38. ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರು ನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.
|
39. ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.
|
43. ಹಬ್ಬದ ದಿನಗಳು ಮುಗಿದ ನಂತರ ಅವರು ಮನೆಗೆ ಹೋದರು. ಆದರೆ ಬಾಲಕನಾದ ಯೇಸು ಜೆರುಸಲೇಮಿನಲ್ಲಿ ಉಳಿದುಕೊಂಡನು. ಆತನ ತಂದೆತಾಯಿಗಳಿಗೆ ಇದು ತಿಳಿದಿರಲಿಲ್ಲ. ಯೇಸುವು ಯಾತ್ರಿಕರ ಗುಂಪಿನಲ್ಲಿರಬಹುದೆಂದು ಭಾವಿಸಿಕೊಂಡ
|
44. ಯೋಸೇಫನು ಮತ್ತು ಮರಿಯಳು ಒಂದು ದಿನವೆಲ್ಲ ಪ್ರಯಾಣ ಮಾಡಿದರು. ನಂತರ ಮಗನನ್ನು ಕಾಣದೆ ತಮ್ಮ ಕುಟುಂಬದವರ ಮತ್ತು ಆಪ್ತಸ್ನೇಹಿತರ ಮಧ್ಯದಲ್ಲಿ ಆತನಿಗಾಗಿ ಹುಡುಕತೊಡಗಿದರು.
|
46. ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.
|
48. ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು.
|
49. ಯೇಸು ಅವರಿಗೆ, “ನೀವು ನನಗೋಸ್ಕರ ಏಕೆ ಹುಡುಕಬೇಕಿತ್ತು? ನನ್ನ ತಂದೆಯ (ದೇವರ) ಕೆಲಸ ಎಲ್ಲಿರುತ್ತದೋ ಅಲ್ಲಿ ನಾನು ಇರಬೇಕು ಎಂಬುದನ್ನು ನೀವು ತಿಳಿದಿರಬೇಕಾಗಿತ್ತು!” ಎಂದು ಹೇಳಿದನು.
|
51. ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.
|