1. ಮುಂಜಾನೆ ನಸುಕಿನಲ್ಲೇ, ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಧರ್ಮೋಪದೇಶಕರು ಮತ್ತು ಯೆಹೂದ್ಯ ಸಮಿತಿಯವರು ಸಭೆಸೇರಿ ಯೇಸುವಿಗೆ ಮಾಡಬೇಕಾದದ್ದನ್ನು ನಿರ್ಧರಿಸಿದರು. ಅವರು ಯೇಸುವನ್ನು ಬಂಧಿಸಿ, ರಾಜ್ಯಪಾಲನಾದ ಪಿಲಾತನ ಬಳಿಗೆ ಕರೆದುಕೊಂಡು ಹೋಗಿ ಅವನಿಗೆ ಒಪ್ಪಿಸಿದರು.
|
2. ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು. ಯೇಸು, “ಹೌದು, ನೀನು ಹೇಳಿದ್ದು ಸರಿ” ಎಂದು ಉತ್ತರಿಸಿದನು.
|
4. ಆದ್ದರಿಂದ ಪಿಲಾತನು ಯೇಸುವಿಗೆ ಮತ್ತೊಮ್ಮೆ, “ಈ ಜನರು ನಿನ್ನ ಮೇಲೆ ಅನೇಕ ಅಪರಾಧಗಳನ್ನು ಹೊರಿಸುತ್ತಿದ್ದರೂ ನೀನು ಏಕೆ ಉತ್ತರಿಸುವುದಿಲ್ಲ?” ಎಂದು ಕೇಳಿದನು.
|
6. ಪ್ರತಿ ವರ್ಷವೂ ಪಸ್ಕಹಬ್ಬದ ಸಮಯದಲ್ಲಿ ಜನರು ಬಯಸಿದ ಕೈದಿಯನ್ನು ರಾಜ್ಯಪಾಲನು ಸೆರೆಮನೆಯಿಂದ ಬಿಡುಗಡೆ ಮಾಡುತ್ತಿದ್ದನು.
|
7. ಆ ಸಮಯದಲ್ಲಿ ಬರಬ್ಬ ಎಂಬವನು ದಂಗೆಕೋರರೊಂದಿಗೆ ಸೆರೆಮನೆಯಲ್ಲಿದ್ದನು. ಈ ದಂಗೆಕೋರರು ಒಂದು ಗಲಭೆಯ ಸಮಯದಲ್ಲಿ ಕೊಲೆ ಮಾಡಿದ ಆಪಾದನೆಗೆ ಗುರಿಯಾಗಿದ್ದರು.
|
11. ಆದರೆ ಯೇಸುವನ್ನು ಬಿಡುಗಡೆ ಮಾಡದೆ ಬರಬ್ಬನನ್ನು ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮಹಾಯಾಜಕರು ಜನರನ್ನು ಪ್ರೇರೇಪಿಸಿದರು.
|
14. ಪಿಲಾತನು, “ಏಕೆ? ಅವನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಿದನು. ಅದಕ್ಕೆ ಜನರು, “ಅವನನ್ನು ಶಿಲುಬೆಗೇರಿಸು!” ಎಂದು ಜೋರಾಗಿ ಆರ್ಭಟಿಸಿದರು.
|
15. ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.
|
17. ಸೈನಿಕರು ಯೇಸುವಿನ ಮೇಲೆ ಕಡುಕೆಂಪಾದ ನಿಲುವಂಗಿಯನ್ನು ಹಾಕಿ ಮುಳ್ಳಿನ ಬಳ್ಳಿಗಳಿಂದ ಒಂದು ಕಿರೀಟ ಮಾಡಿ ಯೇಸುವಿನ ತಲೆಯ ಮೇಲೆ ಇಟ್ಟರು.
|
19. ಸೈನಿಕರು ಆತನ ತಲೆಯ ಮೇಲೆ ಅನೇಕ ಸಾರಿ ಬೆತ್ತದಿಂದ ಹೊಡೆದು ಆತನ ಮೇಲೆ ಉಗುಳಿದರು. ನಂತರ ಅವರು ಯೇಸುವಿನ ಮುಂದೆ ಮೊಣಕಾಲೂರಿ, ಆತನನ್ನು ಆರಾಧಿಸುವಂತೆ ನಟಿಸುತ್ತಾ ಪರಿಹಾಸ್ಯ ಮಾಡಿದರು.
|
20. ಆ ಬಳಿಕ ಸೈನಿಕರು ಕಡುಕೆಂಪಾದ ನಿಲುವಂಗಿಯನ್ನು ತೆಗೆದುಬಿಟ್ಟು, ಆತನ ಬಟ್ಟೆಗಳನ್ನೇ ಮತ್ತೆ ತೊಡಿಸಿದರು. ನಂತರ ಅವರು ಯೇಸುವನ್ನು ಶಿಲುಬೆಗೇರಿಸಲು ಕರೆದುಕೊಂಡು ಹೋದರು.
|
21. ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹೊಲದಿಂದ ಬರುತ್ತಿದ್ದನು. ಅವನು ಅಲೆಕ್ಸಾಂಡರ್ ಮತ್ತು ರೂಫಸ್ ಎಂಬವರ ತಂದೆ. ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಸಿಮೋನನನ್ನು ಬಲವಂತ ಮಾಡಿದರು.
|
23. ಗೊಲ್ಗೊಥದಲ್ಲಿ ಸೈನಿಕರು ಯೇಸುವಿಗೆ ರಕ್ತಬೋಳ ಮಿಶ್ರಿತವಾದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ಕುಡಿಯಲಿಲ್ಲ.
|
24. ಸೈನಿಕರು ಯೇಸುವನ್ನು ಶಿಲುಬೆಗೆ ನೇತುಹಾಕಿ, ಮೊಳೆಗಳನ್ನು ಜಡಿದರು. ನಂತರ ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು.
|
27. ಅಲ್ಲದೆ ಅವರು ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದರು. ಅವರು ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.
|
29. ಅಲ್ಲಿ ನಡೆದು ಹೋಗುತ್ತಿದ್ದವರು ತಮ್ಮ ತಲೆಯಾಡಿಸುತ್ತಾ, “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ಕಟ್ಟುತ್ತೇನೆಂದು ಹೇಳಿದೆ.
|
31. ಅಲ್ಲಿದ್ದ ಮಹಾಯಾಜಕರು ಹಾಗೂ ಧರ್ಮೋಪದೇಶಕರು ಸಹ, “ಅವನು ಇತರ ಜನರನ್ನು ರಕ್ಷಿಸಿದನು. ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
|
32. ಅವನು ನಿಜವಾಗಲೂ ಇಸ್ರೇಲರ ರಾಜನಾದ ಕ್ರಿಸ್ತನಾಗಿದ್ದರೆ, ಈಗ ಶಿಲುಬೆಯಿಂದ ಕೆಳಗಿಳಿದು ಬಂದು ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ. ಆಗ ನಾವು ಅವನನ್ನು ನಂಬುತ್ತೇವೆ” ಎಂದು ಅಪಹಾಸ್ಯ ಮಾಡಿದರು. ಯೇಸುವಿನ ಪಕ್ಕದ ಶಿಲುಬೆಗಳಿಗೆ ಹಾಕಲ್ಪಟ್ಟಿದ್ದ ಕಳ್ಳರು ಸಹ ಆತನನ್ನು ಗೇಲಿಮಾಡಿದರು.
|
34. ಮೂರು ಗಂಟೆಗೆ, ಯೇಸು ದೊಡ್ಡ ಧ್ವನಿಯಿಂದ, “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದು ಕೂಗಿದನು. “ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟೆ?’ ಎಂಬುದೇ ಇದರರ್ಥ.
|
36. ಅಲ್ಲಿದ್ದ ಒಬ್ಬನು ಓಡಿಹೋಗಿ, ಸ್ಪಂಜನ್ನು ತೆಗೆದುಕೊಂಡು ಅದನ್ನು ಹುಳಿರಸದಿಂದ ತುಂಬಿಸಿ, ಒಂದು ಕೋಲಿಗೆ ಕಟ್ಟಿ ಯೇಸುವಿಗೆ ಕುಡಿಯಲು ಕೊಡುತ್ತಾ, ಎಲೀಯನು ಇವನನ್ನು ಶಿಲುಬೆಯಿಂದ ಕೆಳಗಿಳಿಸಲು ಬರಬಹುದೇನೋ ನಾವು ಕಾಯ್ದು ನೋಡಬೇಕು” ಎಂದನು.
|
39. ಶಿಲುಬೆಯ ಮುಂದೆ ನಿಂತಿದ್ದ ಸೈನ್ಯದ ಅಧಿಕಾರಿಯು ಯೇಸು ಪ್ರಾಣಬಿಟ್ಟಾಗ ನಡೆದದ್ದನ್ನು ನೋಡಿ, “ಈ ಮನುಷ್ಯನು ನಿಜವಾಗಿಯೂ ದೇವರ ಮಗನು” ಎಂದನು.
|
40. ಕೆಲವು ಸ್ತ್ರೀಯರು ಶಿಲುಬೆಯಿಂದ ದೂರದಲ್ಲಿ ನಿಂತುಕೊಂಡು ನೋಡುತ್ತಾ ಇದ್ದರು. ಈ ಸ್ತ್ರೀಯರಲ್ಲಿ ಕೆಲವರೆಂದರೆ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬ ಯೋಸೆಯರ ತಾಯಿಯಾದ ಮರಿಯಳು (ಯಾಕೋಬನು ಅವಳ ಕಿರಿಯ ಮಗ.)
|
41. ಈ ಸ್ತ್ರೀಯರು ಗಲಿಲಾಯದಲ್ಲಿ ಯೇಸುವನ್ನು ಹಿಂಬಾಲಿಸಿ ಆತನ ಸೇವೆ ಮಾಡಿದವರು. ಯೇಸುವಿನೊಡನೆ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಸ್ತ್ರೀಯರು ಅಲ್ಲಿದ್ದರು.
|
43. ಅರಿಮಥಾಯ ಊರಿನ ಯೋಸೇಫ ಎಂಬವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ತನಗೆ ಕೊಡಬೇಕೆಂದು ಧೈರ್ಯದಿಂದ ಕೇಳಿದನು. ಯೋಸೇಫನು ಯೆಹೂದ್ಯರ ಸಮಿತಿಯಲ್ಲಿ ಒಬ್ಬ ಮುಖ್ಯ ಸದಸ್ಯನಾಗಿದ್ದನು. ದೇವರ ರಾಜ್ಯ ಬರಲೆಂದು ಬಯಸಿದ ಜನರಲ್ಲಿ ಇವನೂ ಒಬ್ಬನಾಗಿದ್ದನು.
|
44. ಯೇಸು ಇಷ್ಟು ಬೇಗನೆ ಸತ್ತದ್ದನ್ನು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಯೇಸುವನ್ನು ಕಾವಲು ಕಾಯುತ್ತಿದ್ದ ಸೈನ್ಯಾಧಿಕಾರಿಯನ್ನು ಪಿಲಾತನು ಕರೆದು, “ಯೇಸು ಸತ್ತುಹೋದನೇ?” ಎಂದು ಕೇಳಿದನು.
|
45. ಆ ಅಧಿಕಾರಿಯು, “ಹೌದು” ಎಂದು ಹೇಳಿದ್ದರಿಂದ ಆತನ ದೇಹವನ್ನು ತೆಗೆದುಕೊಳ್ಳಲು ಪಿಲಾತನು ಯೋಸೇಫನಿಗೆ ಅಪ್ಪಣೆಕೊಟ್ಟನು.
|
46. ಯೋಸೇಫನು ನಾರುಬಟ್ಟೆಯನ್ನು ತೆಗೆದುಕೊಂಡು ಬಂದು, ಶಿಲುಬೆಯಿಂದ ದೇಹವನ್ನು ಇಳಿಸಿ, ಅದನ್ನು ಆ ಬಟ್ಟೆಯಿಂದ ಸುತ್ತಿದನು. ಅನಂತರ, ಬಂಡೆಯ ಸಮಾಧಿಯಲ್ಲಿ ಅದನ್ನಿರಿಸಿ ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಮುಚ್ಚಿದನು.
|