1. {ಯೇಸುವಿನ ಪುನರುತ್ಥಾನ} (ಮತ್ತಾಯ 28:1-8; ಲೂಕ 24:1-12; ಯೋಹಾನ 20:1-10) PS ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.
|
3. ಆ ಸ್ತ್ರೀಯರು ಒಬ್ಬರಿಗೊಬ್ಬರು, “ದೊಡ್ಡ ಬಂಡೆಯಿಂದ ಸಮಾಧಿಯ ಬಾಗಿಲನ್ನು ಮುಚ್ಚಲಾಗಿದೆ. ಈ ಬಂಡೆಯನ್ನು ನಮಗಾಗಿ ಯಾರು ಉರುಳಿಸುತ್ತಾರೆ?” ಎಂದುಕೊಂಡರು. PEPS
|
4. ಆ ಸ್ತ್ರೀಯರು ಸಮಾಧಿಯನ್ನು ತಲುಪಿದಾಗ ಆ ಬಂಡೆ ಉರುಳಿರುವುದನ್ನು ಕಂಡರು. ಆ ಬಂಡೆಯು ಬಹಳ ದೊಡ್ಡದಾಗಿತ್ತು ಆದರೆ ಅದನ್ನು ಬಾಗಿಲಿನಿಂದ ದೂರಕ್ಕೆ ಉರುಳಿಸಲಾಗಿತ್ತು.
|
5. ಆ ಸ್ತ್ರೀಯರು ಸಮಾಧಿಯೊಳಗೆ ಹೋದಾಗ ಬಿಳುಪಾದ ನಿಲುವಂಗಿ ಧರಿಸಿದ್ದ ಒಬ್ಬ ಯುವಕನು ಸಮಾಧಿಯ ಬಲಗಡೆ ಕುಳಿತಿರುವುದನ್ನು ಕಂಡು ಭಯಗೊಂಡರು. PEPS
|
6. ಆದರೆ ಅವನು, “ಭಯಪಡಬೇಡಿ! ಶಿಲುಬೆಗೇರಿಸಲ್ಪಟ್ಟ ನಜರೇತಿನ ಯೇಸುವನ್ನು ನೀವು ಹುಡುಕುತ್ತಿದ್ದೀರಲ್ಲವೇ? ಆತನು ಜೀವಂತನಾಗಿ ಎದ್ದಿದ್ದಾನೆ. ಆತನು ಇಲ್ಲಿಲ್ಲ. ನೋಡಿರಿ, ಆತನ ದೇಹವನ್ನು ಇಟ್ಟಿದ್ದ ಸ್ಥಳ ಇದೇ.
|
7. ಈಗ ಹೋಗಿ ಆತನ ಶಿಷ್ಯರಿಗೆ ತಿಳಿಸಿರಿ. ಪೇತ್ರನಿಗಂತೂ ಖಂಡಿತವಾಗಿ ತಿಳಿಸಿರಿ. ನೀವು ಅವರಿಗೆ, ‘ಯೇಸು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ಆತನು ನಿಮಗಿಂತ ಮುಂಚೆ ಅಲ್ಲಿರುತ್ತಾನೆ. ಆತನು ನಿಮಗೆ ಮೊದಲೇ ಹೇಳಿದಂತೆ ನೀವು ಆತನನ್ನು ಅಲ್ಲಿ ನೋಡುವಿರಿ’ ಎಂದು ಹೇಳಿರಿ” ಎಂದನು. PEPS
|
8. ಆ ಸ್ತ್ರೀಯರು ಬಹಳ ಭಯದಿಂದ ಗಲಿಬಿಲಿಗೊಂಡು, ಸಮಾಧಿಯನ್ನು ಬಿಟ್ಟು ಓಡಿಹೋದರು. ಅವರು ಬಹಳ ಭಯಗೊಂಡಿದ್ದರಿಂದ ಈ ವಿಷಯವನ್ನು ಯಾರಿಗೂ ಹೇಳಲಿಲ್ಲ. (ಕೆಲವು ಗ್ರೀಕ್ ಪತ್ರಿಕೆಗಳಲ್ಲಿ ಈ ಸುವಾರ್ತೆಯು ಇಲ್ಲಿಗೇ ಮುಕ್ತಾಯವಾಗುತ್ತದೆ.) PEPS
|
9. {ಶಿಷ್ಯರಿಗೆ ಯೇಸುವಿನ ದರ್ಶನ} (ಮತ್ತಾಯ 28:9-10; ಯೋಹಾನ 20:11-18; ಲೂಕ 24:13-35) PS ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಜೀವಂತನಾಗಿ ಎದ್ದನು. ಯೇಸು ಮೊಟ್ಟಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. ಹಿಂದೊಮ್ಮೆ ಯೇಸು ಮರಿಯಳಿಂದ ಏಳು ದೆವ್ವಗಳನ್ನು ಬಿಡಿಸಿದ್ದನು.
|
12. ನಂತರ, ಇಬ್ಬರು ಶಿಷ್ಯರು ಹಳ್ಳಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ, ಯೇಸು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
|
13. ಈ ಶಿಷ್ಯರು ಇತರ ಶಿಷ್ಯರ ಬಳಿಗೆ ಹಿಂತಿರುಗಿ, ಈ ವಿಷಯವನ್ನು ತಿಳಿಸಿದರು. ಆದರೆ ಆ ಶಿಷ್ಯರು ಅವರನ್ನು ನಂಬಲಿಲ್ಲ. (ಮತ್ತಾಯ 28:16-20; ಲೂಕ 24:36-49; ಯೋಹಾನ 20:19-23; ಅಪೊ. ಕಾರ್ಯ. 1:6-8) PEPS
|
14. {ಯೇಸು ಮತ್ತು ಅಪೊಸ್ತಲರ ಸಂಭಾಷಣೆ} PS ನಂತರ ಹನ್ನೊಂದು ಜನ ಶಿಷ್ಯರು ಊಟ ಮಾಡುತ್ತಿರುವಾಗ, ಯೇಸು ಅವರಿಗೆ ಕಾಣಿಸಿಕೊಂಡನು. ಶಿಷ್ಯರಲ್ಲಿ ಕೊಂಚ ನಂಬಿಕೆ ಇದ್ದುದರಿಂದ ಯೇಸು ಅವರನ್ನು ಖಂಡಿಸಿದನು. ಏಕೆಂದರೆ, ಯೇಸು ಸಾವಿನಿಂದ ಎದ್ದುಬಂದಿದ್ದಾನೆಂದು ದೃಢವಾಗಿ ಹೇಳಿದ ಮಾತನ್ನು ಅವರು ನಂಬಲಿಲ್ಲ. PEPS
|
16. ನಂಬಿಕೆಯಿಟ್ಟು, ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದವನು ಅಪರಾಧಿ ಎಂಬ ನಿರ್ಣಯ ಹೊಂದುವನು.
|
17. ನಂಬುವವರಾದರೋ ಅದ್ಭುತಕಾರ್ಯಗಳನ್ನು ಮಾಡುವರು. ಅವರು ನನ್ನ ಹೆಸರಿನ ಮೂಲಕ ದೆವ್ವಗಳನ್ನು ಬಿಡಿಸುವರು. ತಾವೆಂದೂ ಕಲಿತಿಲ್ಲದ ಭಾಷೆಗಳಲ್ಲಿ ಮಾತನಾಡುವರು.
|
18. ಅವರು ಹಾವುಗಳನ್ನು ಹಿಡಿದುಕೊಂಡರೂ ಅವು ಅವರನ್ನು ಕಚ್ಚುವುದಿಲ್ಲ. ವಿಷಕುಡಿದರೂ ಅವರಿಗೆ ಯಾವ ತೊಂದರೆಯೂ ಆಗುವುದಿಲ್ಲ. ಅವರು ಮುಟ್ಟಿದರೆ ರೋಗಿಗಳು ಗುಣಹೊಂದುವರು” ಎಂದು ಹೇಳಿದನು. (ಲೂಕ 24:50-53; ಅಪೊ. ಕಾರ್ಯ. 1:9-11) PEPS
|
19. {ಯೇಸುವಿನ ಪರಲೋಕಾರೋಹಣ} PS ಪ್ರಭುವಾದ ಯೇಸು ಈ ಸಂಗತಿಗಳನ್ನು ಶಿಷ್ಯರಿಗೆ ಹೇಳಿದ ಮೇಲೆ, ಸ್ವರ್ಗದೊಳಗೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
|
20. ಶಿಷ್ಯರು ಪ್ರಪಂಚದ ಎಲ್ಲಾ ಕಡೆಗೆ ಹೋಗಿ, ಜನರಿಗೆ ಸುವಾರ್ತೆಯನ್ನು ಸಾರಿದರು. ಪ್ರಭುವು ಅವರೊಂದಿಗೆ ಕಾರ್ಯಸಾಧಿಸುತ್ತಾ, ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ಬಲಪಡಿಸಿದನು. PE
|