1. ನಾನು ಬೇಸರಗೊಂಡಿದ್ದೇನೆ. ಯಾಕೆಂದರೆ ನಾನು ಕೂಡಿಸಲ್ಪಟ್ಟ ಹಣ್ಣಿನಂತಿದ್ದೇನೆ; ಕೊಯಿದು ಶೇಖರಿಸಿದ ದ್ರಾಕ್ಷಿ ಹಣ್ಣಿನಂತಿದ್ದೇನೆ. ತಿನ್ನಲು ದ್ರಾಕ್ಷಿಹಣ್ಣು ಏನೂ ಉಳಿಯಲಿಲ್ಲ. ನನಗೆ ಪ್ರಿಯವಾದ ಫಲಕಾಲದ ಆರಂಭದಲ್ಲೇ ಫಲಿಸುವ ಅಂಜೂರದ ಹಣ್ಣು ಸಿಕ್ಕಲೇ ಇಲ್ಲ.
|
2. ನಾನು ಹೇಳುವದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೇ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.
|
3. “ಕೆಟ್ಟದ್ದನ್ನು ಎರಡೂ ಕೈಗಳಿಂದ ನಡಿಸಲು ಜನರು ನಿಪುಣರಾಗಿದ್ದಾರೆ. ಅಧಿಕಾರಿಗಳು ಲಂಚ ಕೇಳುತ್ತಾರೆ. ನ್ಯಾಯಾಧೀಶರು ತಮ್ಮ ತೀರ್ಪು ಬದಲಾಯಿಸಲು ಹಣ ಕೇಳುತ್ತಿದ್ದಾರೆ. ಪ್ರಮುಖ ನಾಯಕರು ನ್ಯಾಯವಾದ ಮತ್ತು ಜನರಿಗೆ ಹಿತವಾದ ತೀರ್ಮಾನವನ್ನು ಮಾಡುವದಿಲ್ಲ. ತಮ್ಮ ಇಷ್ಟಪ್ರಕಾರ ಅವರು ಮಾಡುತ್ತಿದ್ದಾರೆ.
|
4. ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವಿ. ನೀನೀಗ ಗಲಿಬಿಲಿಗೆ ಒಳಗಾಗುವಿ!
|
5. ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಿಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.
|
6. ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.
|
7. ನಾನು ಸಹಾಯಕ್ಕಾಗಿ ಯೆಹೋವನ ಕಡೆಗೆ ನೋಡುತ್ತೇನೆ. ದೇವರ ರಕ್ಷಣೆಗಾಗಿ ನಿರೀಕ್ಷಿಸುತ್ತೇನೆ. ನನ್ನ ದೇವರು ನನಗೆ ಕಿವಿಗೊಡುತ್ತಾನೆ.
|
8. ನಾನು ಬಿದ್ದಿದ್ದೇನೆ, ಆದರೆ ವೈರಿಯೇ, ನನ್ನನ್ನು ನೋಡಿ ನಗಾಡಬೇಡ! ನಾನು ತಿರುಗಿ ಏಳುತ್ತೇನೆ; ನಾನೀಗ ಅಂಧಕಾರದಲ್ಲಿ ಕುಳಿತುಕೊಳ್ಳುತ್ತೇನೆ. ಆದರೆ ಯೆಹೋವನು ನನ್ನ ಬೆಳಕಾಗಿರುತ್ತಾನೆ.
|
10. “ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ಕೇಳಿದ ವೈರಿಗಳು ಇದನ್ನು ನೋಡಿ, ನಾಚಿಕೆಗೊಳ್ಳುವರು. ಆಗ ನಾನು ಅವರ ವಿಷಯವಾಗಿ ನಗಾಡುವೆನು; ರಸ್ತೆಯ ಮಣ್ಣಿನ ಮೇಲೆ ನಡೆಯುವಂತೆ ಜನರು ಅವರ ಮೇಲೆ ನಡಿಯುವರು.
|
12. ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು, ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.
|
14. “ಆದುದರಿಂದ ನಿನ್ನ ಜನರನ್ನು ಕಬ್ಬಿಣದ ಕೋಲಿನಿಂದ ಆಳು, ನಿನಗೆ ಸೇರಿದ ಜನರ ಹಿಂಡುಗಳನ್ನು ಆಳು. ಆ ಗುಂಪು ಅಡವಿಯಲ್ಲಿ ತಾನಾಗಿಯೇ ವಾಸಿಸುತ್ತದೆ; ಕರ್ಮೆಲ್ ಬೆಟ್ಟದಲ್ಲಿಯೂ ವಾಸಿಸುತ್ತದೆ. ಹಿಂದಿನ ಕಾಲದಲ್ಲಿ ಮಾಡಿದಂತೆ ಆ ಗುಂಪು ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯದಲ್ಲಿ ವಾಸಿಸುತ್ತದೆ.
|
15. ನಿನ್ನನ್ನು ಈಜಿಪ್ಟಿನಿಂದ ಬರಮಾಡಿದಾಗ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಇನ್ನೂ ಅನೇಕ ಅದ್ಭುತಗಳನ್ನು ನೀನು ನೋಡುವಂತೆ ಮಾಡುವೆನು.
|
16. ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯದಿಂದ ಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.
|
17. ಧೂಳಿನ ಮೇಲೆ ಹಾವಿನಂತೆ ಅವರು ಹರಿದಾಡುವರು. ಭಯದಿಂದ ನಡುಗುವರು. ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು.
|
18. ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುತ್ತೀ. ನಿನ್ನ ಜನಶೇಷವನ್ನು ಮನ್ನಿಸುವಿ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುತ್ತೀ.
|
19. ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು.
|
20. ನೀನು ಯಾಕೋಬನಿಗೆ ನಂಬಿಗಸ್ತನಾಗುವಿ. ನೀನು ಅಬ್ರಹಾಮನ ಮೇಲೆ ದಯೆತೋರಿಸಿ. ನಂಬಿಗಸ್ತನಾಗುವಿ. ಇದನ್ನು ನೀನು ಬಹಳ ಕಾಲದ ಹಿಂದೆಯೇ ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿರುವೆ.
|